Shivaji Statue Belagavi: ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ಲಕ್ಷ್ಮೀ ಹೆಬ್ಬಾಳ್ಕರ್; ಶಿವಾಜಿ ಪ್ರತಿಮೆ ಮರು ಅನಾವರಣ
1009 views
ಬೆಳಗಾವಿ ವಿಡಿಯೋಗಳಿಗೆ ಚಂದಾದಾರರಾಗಿಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಲ್ಲಿನ ರಾಜಹಂಸಗಡ ಕೋಟೆಯ ಮೇಲೆ ಪ್ರತಿಷ್ಠಾಪಿಸಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಭಾನುವಾರ ಮತ್ತೊಮ್ಮೆ ಅನಾವರಣಗೊಳಿಸುವ ಮೂಲಕ ರಾಜ್ಯ ಬಿಜೆಪಿ ಸರಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ರಾಜಹಂಸಗಡದ ಮೇಲೆ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರ ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಾದ್ಯಂತ ಚರ್ಚೆಯಲ್ಲಿತ್ತು. ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಷಯ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ್ ನಡುವೆ ಪ್ರತಿಷ್ಠೆಯ ಕದನವಾಗುವ ಲಕ್ಷಣಗಳು ಆರಂಭದಿಂದಲೇ ಕಂಡುಬಂದಿತ್ತು. ಇತ್ತೀಚೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕೀಯ ಕಣದಲ್ ಲಿಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಕಾಣಿಸಿಕೊಳ್ಳತೊಡಗಿದ ಬಳಿಕ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿಪೈಪೋಟಿ ನಡೆಯುವುದು ಜನರಿಗೆ ನಿಚ್ಚಳವಾಗಿತ್ತು. ಮಾರ್ಚ್ 2ರಂದು ಸರಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರ್ತಿ ಅನಾವರಣಗೊಳಿಸಿದ್ದರೆ, ಹಠ ಬಿಡದ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಶಾಸ್ತ್ರೋಕ್ತ ಪೂಜೆ ಸಹಿತ ಶಿವಾಜಿ ಮೂರ್ತಿಯನ್ನು ಅನಾವರಣಗೊಳಿಸಿದರು.