ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರೆ, ಕಾಲ ಕೂಡಿ ಬರಬೇಕು: ಲಕ್ಷ್ಮೀ ಹೆಬ್ಬಾಳ್ಕರ್
1051 views
ಬೆಳಗಾವಿ ವಿಡಿಯೋಗಳಿಗೆ ಚಂದಾದಾರರಾಗಿಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಡಿಸಿಎಂ ಅಷ್ಟೇ ಅಲ್ಲ. ಮುಖ್ಯಮಂತ್ರಿ ಕೂಡ ಆಗುವ ಎಲ್ಲ ಅರ್ಹತೆ ಅವರಿಗಿದೆ. ಅದಕ್ಕೆ ಕಾಲ ಕೂಡಿ ಬರಬೇಕು, ಇವತ್ತಲ್ಲ ನಾಳೆ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ರಾಹುಲ್ ಗಾಂಧಿ ಅವರಿಂದ 10 ಸಾವಿರ ರೂ. ವೇತನ ಹೆಚ್ಚಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲನೇಯದಾಗಿ ಅಧಿಕೃತವಾಗಿ ಖಾತೆ ಹಂಚಿಕೆ ಆಗಬೇಕು. ಇಲಾಖಾವಾರು ಅಧಿಕಾರ ತೆಗೆದುಕೊಂಡು ಮಿಟಿಂಗ್ ಮಾಡಬೇಕು. ನಾವು ವಾಗ್ದಾನ ಮಾಡಿದ್ದನ್ನು ಸಂಪೂರ್ಣವಾಗಿ ಈಡೇರಿಸಲು ಪ್ರಯತ್ನಿಸುತ್ತೇವೆ. ನಾವು ಪ್ರಮಾಣವಚನ ಸ್ವೀಕರಿಸಿ 24 ಗಂಟೆಯೂ ಆಗಿಲ್ಲ. ಖಂಡಿತವಾಗಿ ಜನ ಮೆಚ್ಚುವ ಹಾಗೆ, ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವ ಹಾಗೆ, ನನಗೆ ಕೊಟ್ಟಂತ ಇಲಾಖೆ ನಡೆಸುತ್ತೇನೆ. ಭ್ರಷ್ಟಾಚಾರ ಮುಕ್ತ ಅಧಿಕಾರ ನಾವು ನಡೆಸುತ್ತೇವೆ ಎಂದರು.