ಸದನದಲ್ಲಿ ಪ್ರಿಯಾಂಕ್ ಖರ್ಗೆ, ಸುನೀಲ್ ಕುಮಾರ್ ಮಧ್ಯೆ ಮಾತಿನ ಚಕಮಕಿ..!
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು: ವಿಧಾನ ಮಂಡಲದ ಬಜೆಟ್ ಅಧಿವೇಶನದ ಎರಡನೇ ದಿನ ಆರಂಭಗೊಳ್ಳುತ್ತಿದ್ದಂತೆಯೇ ಸದನ ರಣಾಂಗಣವಾಯಿತು. ಬಿಜೆಪಿ ಶಾಸಕ ಸುನೀಲ ಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಇಬ್ಬರ ಮಧ್ಯೆ ಮಾತಿನ ಚಕಮಕಿ ಶುರುವಾಯ್ತು, ವಿರೋಧ ಪಕ್ಷದ ನಾಯಕರು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಅಂತ ಹೇಳಿ ಚರ್ಚೆಗೆ ಆಗ್ರಹಿಸಿದರೆ, ದೆಹಲಿಯ ಹೊರಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಆ ಚಳುವಳಿಯ ಬಗ್ಗೆ ಚರ್ಚೆ ಬೇಡವೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ನಮ್ಮ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆಯೂ ಹರಿಯಾಣ ಮತ್ತು ಪಂಜಾಬ್ ರೈತರು ಪ್ರಸ್ತಾಪಿಸಿದ್ದಾರೆ ಅದನ್ನೂ ಚರ್ಚೆ ಮಾಡೋಣ ಎಂದು ಖರ್ಗೆ ರೋಷದಲ್ಲಿ ಹೇಳಿದಾಗ ರೊಚ್ಚಿಗೆದ್ದ ಸುನೀಲ ಕುಮಾರ ಯಾವ ವಿಷಯದ ಬಗ್ಗೆ ಚರ್ಚೆಯಾಗಬೇಕು ಅಂತ ನಿಮ್ಮಿಂದ ತಿಳಿಯುವ ಅವಶ್ಯಕತೆ ನಮಗಿಲ್ಲ, ನಮಗೆ ಸಲಹೆ ನೀಡುವ ಸಾಹಸ ಮಾಡಬೇಡಿ ಅಂತ ಹೇಳಿದ್ದಾರೆ. ಬಳಿಕ ಸ್ಪೀಕರ್ ಕಡೆ ತಿರುಗಿ, ಅದ್ಯಕ್ಷರೇ, ಕಾನೂನು ಮತ್ತು ಸುವ್ಯವಸ್ಥೆ ಚರ್ಚೆಗಾಗಿ ಬೆಳಗ್ಗೆ 9 ಗಂಟೆಗೆ ಬಂದು ನೋಟೀಸ್ ಕೊಟ್ಟಿದ್ದೇವೆ, ಹಾಗಾಗಿ ಪ್ರಶ್ನೋತ್ತರ ವೇಳೆಯನ್ನು ಬದಿಗೊತ್ತಿ ಕಾನೂನು ಸುವ್ಯವಸ್ಥೆ ವಿಷಯದ ಮೇಲೆ ಚರ್ಚೆಗೆ ಅವಕಾಶ ಮಾಡಿಕೊಡಿ ಅನ್ನುತ್ತಾರೆ. ಆಗ ಗೃಹ ಸಚಿವ ಜಿ ಪರಮೇಶ್ವರ್ ಎದ್ದು ನಿಂತು ಮಾತಾಡಿದ್ದಾರೆ.
ನಮ್ಮ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆಯೂ ಹರಿಯಾಣ ಮತ್ತು ಪಂಜಾಬ್ ರೈತರು ಪ್ರಸ್ತಾಪಿಸಿದ್ದಾರೆ ಅದನ್ನೂ ಚರ್ಚೆ ಮಾಡೋಣ ಎಂದು ಖರ್ಗೆ ರೋಷದಲ್ಲಿ ಹೇಳಿದಾಗ ರೊಚ್ಚಿಗೆದ್ದ ಸುನೀಲ ಕುಮಾರ ಯಾವ ವಿಷಯದ ಬಗ್ಗೆ ಚರ್ಚೆಯಾಗಬೇಕು ಅಂತ ನಿಮ್ಮಿಂದ ತಿಳಿಯುವ ಅವಶ್ಯಕತೆ ನಮಗಿಲ್ಲ, ನಮಗೆ ಸಲಹೆ ನೀಡುವ ಸಾಹಸ ಮಾಡಬೇಡಿ ಅಂತ ಹೇಳಿದ್ದಾರೆ. ಬಳಿಕ ಸ್ಪೀಕರ್ ಕಡೆ ತಿರುಗಿ, ಅದ್ಯಕ್ಷರೇ, ಕಾನೂನು ಮತ್ತು ಸುವ್ಯವಸ್ಥೆ ಚರ್ಚೆಗಾಗಿ ಬೆಳಗ್ಗೆ 9 ಗಂಟೆಗೆ ಬಂದು ನೋಟೀಸ್ ಕೊಟ್ಟಿದ್ದೇವೆ, ಹಾಗಾಗಿ ಪ್ರಶ್ನೋತ್ತರ ವೇಳೆಯನ್ನು ಬದಿಗೊತ್ತಿ ಕಾನೂನು ಸುವ್ಯವಸ್ಥೆ ವಿಷಯದ ಮೇಲೆ ಚರ್ಚೆಗೆ ಅವಕಾಶ ಮಾಡಿಕೊಡಿ ಅನ್ನುತ್ತಾರೆ. ಆಗ ಗೃಹ ಸಚಿವ ಜಿ ಪರಮೇಶ್ವರ್ ಎದ್ದು ನಿಂತು ಮಾತಾಡಿದ್ದಾರೆ.