ಅನ್ನಭಾಗ್ಯ ಯೋಜನೆಯಡಿ ಜುಲೈ 1ರಿಂದ 10 ಕೆಜಿ ಆಹಾರ ಧಾನ್ಯ: ಯಾರಿಗೆಲ್ಲ ಉಚಿತ?
1068 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಚುನಾವಣೆಗೂ ಮುನ್ನ ಘೋಷಣೆ ಮಾಡಿರುವಂತೆ ಹತ್ತು ಕೆಜಿ ಉಚಿತ ಆಹಾರದ ಧಾನ್ಯ ನೀಡುವ 'ಅನ್ನಭಾಗ್ಯ' ಯೋಜನೆಯನ್ನು ಜುಲೈ 1ರಿಂದ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಸಂಪುಟ ಸಭೆಯ ಬಳಿಕ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮುಂಚೆ ಅನ್ನಭಾಗ್ಯದಲ್ಲಿ ಏಳು ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದನ್ನು ಐದು ಕೆಜಿಗೆ ಇಳಿಸಿದ್ದಾರೆ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಚುನಾವಣಾ ಪ್ರಚಾರದ ವೇಳೆ ನಾವು ಹತ್ತು ಕೆಜಿ ಆಹಾರ ಧಾನ್ಯಗಳನ್ನು ನೀಡುತ್ತೇವೆ ಎಂದು ಗ್ಯಾರಂಟಿ ನೀಡಿದ್ದೆವು. ಅದರಂತೆ ಹತ್ತು ಕೆಜಿ ಆಹಾರ ಧಾನ್ಯ ನೀಡುತ್ತೇವೆ ಎಂದು ಘೋಷಿಸಿದರು. ಇದು ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾತ್ರ ಎಂದು ಸ್ಪಷ್ಟಪಡಿಸಿದರು.
ಜೂನ್ ತಿಂಗಳು ಈಗಾಗಲೇ ಆರಂಭವಾಗಿದೆ. ಹಾಗಾಗಿ ಈ ಯೋಜನೆಯನ್ನು ಈಗಿನಿಂದ ಲೆಕ್ಕಕ್ಕೆ ಪರಿಗಣಿಸುವುದು ಸಾಧ್ಯವಿಲ್ಲ. ಹಾಗೆಯೇ ಸಾಕಷ್ಟು ಆಹಾರ ಧಾನ್ಯ ಸಂಗ್ರಹ ಈಗ ಇಲ್ಲ. ಹೀಗಾಗಿ ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಆಹಾರ ಧಾನ್ಯ ನೀಡಲಾಗುವುದು ಎಂದು ತಿಳಿಸಿದರು.
ಸಂಪುಟ ಸಭೆಯ ಬಳಿಕ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮುಂಚೆ ಅನ್ನಭಾಗ್ಯದಲ್ಲಿ ಏಳು ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದನ್ನು ಐದು ಕೆಜಿಗೆ ಇಳಿಸಿದ್ದಾರೆ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಚುನಾವಣಾ ಪ್ರಚಾರದ ವೇಳೆ ನಾವು ಹತ್ತು ಕೆಜಿ ಆಹಾರ ಧಾನ್ಯಗಳನ್ನು ನೀಡುತ್ತೇವೆ ಎಂದು ಗ್ಯಾರಂಟಿ ನೀಡಿದ್ದೆವು. ಅದರಂತೆ ಹತ್ತು ಕೆಜಿ ಆಹಾರ ಧಾನ್ಯ ನೀಡುತ್ತೇವೆ ಎಂದು ಘೋಷಿಸಿದರು. ಇದು ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾತ್ರ ಎಂದು ಸ್ಪಷ್ಟಪಡಿಸಿದರು.
ಜೂನ್ ತಿಂಗಳು ಈಗಾಗಲೇ ಆರಂಭವಾಗಿದೆ. ಹಾಗಾಗಿ ಈ ಯೋಜನೆಯನ್ನು ಈಗಿನಿಂದ ಲೆಕ್ಕಕ್ಕೆ ಪರಿಗಣಿಸುವುದು ಸಾಧ್ಯವಿಲ್ಲ. ಹಾಗೆಯೇ ಸಾಕಷ್ಟು ಆಹಾರ ಧಾನ್ಯ ಸಂಗ್ರಹ ಈಗ ಇಲ್ಲ. ಹೀಗಾಗಿ ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಆಹಾರ ಧಾನ್ಯ ನೀಡಲಾಗುವುದು ಎಂದು ತಿಳಿಸಿದರು.