Public Opinion: ಬೆಂಗಳೂರು ದಕ್ಷಿಣದಲ್ಲಿ ಮತ್ತೆ ಆಗುತ್ತಾ ಸೂರ್ಯೋದಯ? ಸೌಮ್ಯಗೆ ಸಿಗುತ್ತಾ ಮತದಾರರ ಮಮತೆ!
1102 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ, ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿದೆ. ಕಳೆದ 32 ವರ್ಷಗಳಿಂದ ಲೋಕಸಭೆಯಲ್ಲಿ ಇಲ್ಲಿ ಬಿಜೆಪಿಯದ್ದೇ ಸಾಮ್ರಾಜ್ಯ. ಈ ಬಾರಿ ಹಾಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅಖಾಡಲ್ಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಈ ಪೈಕಿ 5 ರಲ್ಲಿ ಬಿಜೆಪಿ ಶಾಸಕರಿದ್ದರೆ, 3 ರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಕಾಂಗ್ರೆಸ್ನಿಂದ ಸೌಮ್ಯ ರೆಡ್ಡಿ ಅಖಾಡಲ್ಲಿರುವುದರಿಂದ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಇದೊಂದು ಪ್ರತಿಷ್ಠೆಯ ಚುನಾವಣೆಯಾಗಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನರ ಒಲವು ಯಾರ ಕಡೆಗೆ ಇದೆ? ತಮ್ಮ ಸಂಸದರು ಯಾರಾಗಬೇಕು ಎಂದು ಜನರು ಬಯಸುತ್ತಾರೆ? ವಿಜಯ ಕರ್ನಾಟಕ ವೆಬ್ ನಡೆಸಿದ ಕ್ಷೇತ್ರ ಸಮೀಕ್ಷೆಯಲ್ಲಿ ಹಲವು ಮತದಾರರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.