ಬೆಂಗಳೂರು: ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ, ಬೆಚ್ಚಿಬಿದ್ದ ಗ್ರಾಹಕರು, ಐವರಿಗೆ ಗಾಯ
2088 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿರಾಜ್ಯ ರಾಜಧಾನಿ ಬೆಂಗಳೂರಿನ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ. ಮಧ್ಯಾಹ್ನದ ವೇಳೆ ಹೋಟೆಲ್ನಲ್ಲಿ ಜನಜಂಗುಳಿ ಇದ್ದ ಸಂದರ್ಭದಲ್ಲೇ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ವೇಳೆ ಭಾರೀ ತೀವ್ರತೆಯ ಸದ್ದು ಕೇಳಿಸಿದ್ದು, ಅಕ್ಕಪಕ್ಕದ ಅಂಗಡಿ, ಮುಂಗಟ್ಟು ಹಾಗೂ ಕಚೇರಿಗಳ ಜನರು ಹೋಟೆಲ್ ಬಳಿ ಸೇರಿದ್ದಾರೆ. ಈ ಘಟನೆಯಲ್ಲಿ ಮಹಿಳೆ ಸೇರಿದಂತೆ ಐದು ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಫೋಟದ ಪರಿಣಾಮ ರಾಮೇಶ್ವರಂ ಕೆಫೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವೈಟ್ಫೀಲ್ಡ್ನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿ ಶಾಮಕ ದಳವು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ಇಂದಿರಾ ನಗರ, ವೈಟ್ಫೀಲ್ಡ್ ಹಾಗೂ ಎಚ್ಎಎಲ್ ಠಾಣೆ ಪೊಲೀಸರೂ ಸ್ಥಳದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿ ಗುಂಪು ಸೇರಿದ್ದ ಜನರನ್ನು ಚದುರಿಸಲಾಗಿದೆ. ಹೋಟೆಲ್ ಬಳಿ ಜನಜಂಗುಳಿ ಏರ್ಪಡದಂತೆ ಪೊಲೀಸರು ಕಣ್ಗಾವಲು ವಹಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳು ಸ್ಫೋಟದ ಸದ್ದು ಕೇಳಿ ಗಾಬರಿಗೊಂಡಿದ್ದಾರೆ. ಈ ಸ್ಫೋಟಕ್ಕೆ ಕಾರಣವೇನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಇತ್ತ ಪೊಲೀಸರೂ ಕೂಡಾ ಘಟನಾ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಯಲ್ಲೇ ಸ್ಫೋಟಕ್ಕೆ ಕಾರಣವೇನು ಎಂಬುದರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೋಟೆಲ್ನಲ್ಲಿ ಸಿಲಿಂಡರ್ ಸ್ಫೋಟ ಆಗಿದೆಯಾ? ಗ್ರಾಹಕರು ತಂದಿದ್ದ ವಸ್ತುಗಳಿಂದ ಸ್ಫೋಟ ಉಂಟಾಗಿದೆಯಾ? ಅಥವಾ ಯಾವ ಕಾರಣಕ್ಕೆ ಸ್ಫೋಟ ಸಂಭವಿಸಿದೆ ಅನ್ನೋದರ ಪತ್ತೆಗಾಗಿ ಎಫ್ಎಸ್ಎಲ್ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.
ಸ್ಫೋಟದ ತೀವ್ರತೆಗೆ ಹೋಟಲ್ನಲ್ಲಿ ಇದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಈ ಸ್ಫೋಟಕ್ಕೆ ಕಾರಣ ಏನು ಎಂದು ಪತ್ತೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ಮಾಡಲು ತೀರ್ಮಾನಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರ ತಂಡ ದೌಡಾಯಿಸಿದೆ. ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಕೆಲವು ಐಡಿ ಕಾರ್ಡ್ಗಳೂ ಪತ್ತೆಯಾಗಿದ್ದು, ಪೊಲೀಸರು ಈ ಕುರಿತಾಗಿಯೂ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ನಿರತರಾಗಿದ್ದಾರೆ.
ಸ್ಫೋಟದ ಪರಿಣಾಮ ರಾಮೇಶ್ವರಂ ಕೆಫೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವೈಟ್ಫೀಲ್ಡ್ನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿ ಶಾಮಕ ದಳವು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ಇಂದಿರಾ ನಗರ, ವೈಟ್ಫೀಲ್ಡ್ ಹಾಗೂ ಎಚ್ಎಎಲ್ ಠಾಣೆ ಪೊಲೀಸರೂ ಸ್ಥಳದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿ ಗುಂಪು ಸೇರಿದ್ದ ಜನರನ್ನು ಚದುರಿಸಲಾಗಿದೆ. ಹೋಟೆಲ್ ಬಳಿ ಜನಜಂಗುಳಿ ಏರ್ಪಡದಂತೆ ಪೊಲೀಸರು ಕಣ್ಗಾವಲು ವಹಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳು ಸ್ಫೋಟದ ಸದ್ದು ಕೇಳಿ ಗಾಬರಿಗೊಂಡಿದ್ದಾರೆ. ಈ ಸ್ಫೋಟಕ್ಕೆ ಕಾರಣವೇನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಇತ್ತ ಪೊಲೀಸರೂ ಕೂಡಾ ಘಟನಾ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಯಲ್ಲೇ ಸ್ಫೋಟಕ್ಕೆ ಕಾರಣವೇನು ಎಂಬುದರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೋಟೆಲ್ನಲ್ಲಿ ಸಿಲಿಂಡರ್ ಸ್ಫೋಟ ಆಗಿದೆಯಾ? ಗ್ರಾಹಕರು ತಂದಿದ್ದ ವಸ್ತುಗಳಿಂದ ಸ್ಫೋಟ ಉಂಟಾಗಿದೆಯಾ? ಅಥವಾ ಯಾವ ಕಾರಣಕ್ಕೆ ಸ್ಫೋಟ ಸಂಭವಿಸಿದೆ ಅನ್ನೋದರ ಪತ್ತೆಗಾಗಿ ಎಫ್ಎಸ್ಎಲ್ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.
ಸ್ಫೋಟದ ತೀವ್ರತೆಗೆ ಹೋಟಲ್ನಲ್ಲಿ ಇದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಈ ಸ್ಫೋಟಕ್ಕೆ ಕಾರಣ ಏನು ಎಂದು ಪತ್ತೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ಮಾಡಲು ತೀರ್ಮಾನಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರ ತಂಡ ದೌಡಾಯಿಸಿದೆ. ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಕೆಲವು ಐಡಿ ಕಾರ್ಡ್ಗಳೂ ಪತ್ತೆಯಾಗಿದ್ದು, ಪೊಲೀಸರು ಈ ಕುರಿತಾಗಿಯೂ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ನಿರತರಾಗಿದ್ದಾರೆ.