ಬೆಂಗಳೂರು: ಲೌಡ್ ಸ್ಪೀಕರ್ನಲ್ಲಿ ಭಜನೆ, ಅಂಗಡಿ ಮಾಲೀಕನ ಮೇಲೆ ಯುವಕರಿಂದ ಹಲ್ಲೆ
1228 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಲೌಡ್ ಸ್ಪೀಕರ್ ಹಾಕಿದ ಅಂಗಡಿ ಮಾಲೀಕನ ಮೇಲೆ ಯುವಕರ ಗುಂಪಿನಿಂದ ಹಲ್ಲೆ ನಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡಿಗೇಡಿಗಳು ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿದ ಯುವಕರ ಗುಂಪು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಭಾನುವಾರ ಸಂಜೆ 6.25 ಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಮುಕೇಶ್ (26) ಎಂಬುವವರು ಈ ಸಂಬಂಧಿಸಿದಂತೆ ದೂರು ನೀಡಿದ್ದು, 5 ಮಂದಿ ಆರೋಪಿಗಳು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ನಗರ ಜುಮ್ಮಾ ಮಸೀದಿ ರಸ್ತೆ ಸಿದ್ದಣ್ಣ ಗಲ್ಲಿಯಲ್ಲಿ ಟೆಲಿಕಾಂ ಅಂಗಡಿಯನ್ನು ಇಟ್ಟುಕೊಂಡು ನಾನು ಜೀವನ ಮಾಡುತ್ತಿದ್ದೇನೆ. 17-3-24 ರಂದು ಸಂಜೆ 6-25 ಕ್ಕೆ ನಾನು ಅಂಗಡಿಯಲ್ಲಿ ಇರುವಾಗ ಸುಲೇಮಾನ್, ಶನವಾಝ್, ರೋಹಿತ್, ದ್ಯಾನಿಶ್, ತರುಣ್ ಹಾಗೂ ಮತ್ತೊಬ್ಬರು ನನ್ನ ಅಂಗಡಿಗೆ ಬಂದು ಏಕೆ ಲೌಡ್ ಸ್ಪೀಕರ್ ಜೋರಾಗಿ ಹಾಕಿರುವೆ? ಇದರಿಂದ ನಮಗೆ ತೊಂದರೆಯಾಗುತ್ತಿದೆ ಎಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ನನ್ನ ಮುಖಕ್ಕೆ ಗುದ್ದಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುತ್ತಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಕೇಶ್ ನೀಡಿದ ದೂರಿನ ಆಧಾರದಲ್ಲಿ ಸುಲೈಮಾನ್, ಶನವಾಝ್, ರೋಹಿತ್, ದ್ಯಾನಿಶ್, ತರುಣ್ ಹಾಗೂ ಇತರರ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿದ ಯುವಕರ ಗುಂಪು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಭಾನುವಾರ ಸಂಜೆ 6.25 ಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಮುಕೇಶ್ (26) ಎಂಬುವವರು ಈ ಸಂಬಂಧಿಸಿದಂತೆ ದೂರು ನೀಡಿದ್ದು, 5 ಮಂದಿ ಆರೋಪಿಗಳು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ನಗರ ಜುಮ್ಮಾ ಮಸೀದಿ ರಸ್ತೆ ಸಿದ್ದಣ್ಣ ಗಲ್ಲಿಯಲ್ಲಿ ಟೆಲಿಕಾಂ ಅಂಗಡಿಯನ್ನು ಇಟ್ಟುಕೊಂಡು ನಾನು ಜೀವನ ಮಾಡುತ್ತಿದ್ದೇನೆ. 17-3-24 ರಂದು ಸಂಜೆ 6-25 ಕ್ಕೆ ನಾನು ಅಂಗಡಿಯಲ್ಲಿ ಇರುವಾಗ ಸುಲೇಮಾನ್, ಶನವಾಝ್, ರೋಹಿತ್, ದ್ಯಾನಿಶ್, ತರುಣ್ ಹಾಗೂ ಮತ್ತೊಬ್ಬರು ನನ್ನ ಅಂಗಡಿಗೆ ಬಂದು ಏಕೆ ಲೌಡ್ ಸ್ಪೀಕರ್ ಜೋರಾಗಿ ಹಾಕಿರುವೆ? ಇದರಿಂದ ನಮಗೆ ತೊಂದರೆಯಾಗುತ್ತಿದೆ ಎಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ನನ್ನ ಮುಖಕ್ಕೆ ಗುದ್ದಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುತ್ತಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಕೇಶ್ ನೀಡಿದ ದೂರಿನ ಆಧಾರದಲ್ಲಿ ಸುಲೈಮಾನ್, ಶನವಾಝ್, ರೋಹಿತ್, ದ್ಯಾನಿಶ್, ತರುಣ್ ಹಾಗೂ ಇತರರ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.