ಸಿದ್ದರಾಮಯ್ಯನವರೇ ಸುಮ್ಮನೆ ಕೇಂದ್ರದ ಮೇಲೆ ಗೂಬೆ ಕೂರಿಸಬೇಡಿ ; ಬೊಮ್ಮಾಯಿ
1047 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ. ಚುನಾವಣೆ ಮೊದಲು ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಹೇಳಿ ಈಗ ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ. ಅಕ್ಕಿಯ ಸರಬರಾಜು ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ 5 ಕೆಜಿ ಅಕ್ಕಿ ಕೊಡುತ್ತಿದೆ. ಹೊಸದಾಗಿ ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, 10ಕೆಜಿ ಅಕ್ಕಿಯನ್ನು ಕಾಂಗ್ರೆಸ್ನವರೇ ಒಬ್ಬರೆ ಕೊಡುತ್ತಿಲ್ಲ, ಅದರಲ್ಲಿ 5 ಕೆಜಿ ಅಕ್ಕಿಯನ್ನು ಕೇಂದ್ರ ಕೊಡುತ್ತಿದೆ, ಕಾಂಗ್ರೆಸ್ನವರು ನಾವೇ ಕೊಡುತ್ತಿದ್ದೇವೆ ಎಂದು ಜನರ ಮುಂದೆ ಹೇಳುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು. ಒಂದು ವೇಳೆ ಕಾಂಗ್ರೆಸ್ನವರು 10ಕೆಜಿ ಕೊಡದಿದ್ರೆ ಪ್ರತಿಭಟನೆ ಮಾಡುತ್ತೇವೆ, ನುಡಿದಂತೆ ನಡೆಯಲು ನಿಮಗೆ ಸಾಧ್ಯವಿಲ್ಲ, ಕುಂಟು ನೆಪ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, 10ಕೆಜಿ ಅಕ್ಕಿಯನ್ನು ಕಾಂಗ್ರೆಸ್ನವರೇ ಒಬ್ಬರೆ ಕೊಡುತ್ತಿಲ್ಲ, ಅದರಲ್ಲಿ 5 ಕೆಜಿ ಅಕ್ಕಿಯನ್ನು ಕೇಂದ್ರ ಕೊಡುತ್ತಿದೆ, ಕಾಂಗ್ರೆಸ್ನವರು ನಾವೇ ಕೊಡುತ್ತಿದ್ದೇವೆ ಎಂದು ಜನರ ಮುಂದೆ ಹೇಳುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು. ಒಂದು ವೇಳೆ ಕಾಂಗ್ರೆಸ್ನವರು 10ಕೆಜಿ ಕೊಡದಿದ್ರೆ ಪ್ರತಿಭಟನೆ ಮಾಡುತ್ತೇವೆ, ನುಡಿದಂತೆ ನಡೆಯಲು ನಿಮಗೆ ಸಾಧ್ಯವಿಲ್ಲ, ಕುಂಟು ನೆಪ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.