ಕೂಡಲೇ ಸರ್ಕಾರ ಆದಾಯ ಮೂಲವನ್ನು ಶ್ವೇತಪತ್ರದ ಮೂಲಕ ಹೊರಡಿಸಬೇಕು; ನಳಿನ್ ಕುಮಾರ್ ಕಟೀಲ್ ಆಗ್ರಹ
1062 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿದಕ್ಷಿಣ ಕನ್ನಡ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಘೋಷಣೆ ಮಾಡಿದೆ, ಫಲಿತಾಂಶದ 24 ಗಂಟೆ ಅಂತ ಹೇಳಿ ಜನಾಕ್ರೋಶದ ಬಳಿಕ ತಡವಾಗಿ ಘೋಷಣೆ ಮಾಡಿದ್ದಾರೆ, ಇದನ್ನ ನಾನು ಸ್ವಾಗತಿಸ್ತೇನೆ, ಜನಪರ ಯೋಜನೆ ಘೋಷಣೆ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ
ಮಂಗಳೂರಿನಲ್ಲಿ ಮಾತನಾಡಿ ಅವರು, ಉಚಿತ ಯೋಜನೆಗೆ ಹಣದ ಮೂಲ, ಹಣದ ಕ್ರೋಡೀಕರಣ, ಎಷ್ಟು ವರ್ಷ ಇರುತ್ತೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ, ನಿರುದ್ಯೋಗ ಭತ್ಯೆಗೆ ಮಾನದಂಡ ಹಾಕಿದ್ದಾರೆ, ಮೊದಲು ಮಾನದಂಡದ ಬಗ್ಗೆ ಹೇಳಿರಲಿಲ್ಲ, ಖಾಸಗಿ ಬಸ್ಸುಗಳಲ್ಲಿ ಸಂಚರಿಸೋರಿಗೆ ಏನು?, ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ ಇದೆ, ಹಿಂದಿನ ಪಿಂಚಣಿ ಯೋಜನೆಗಳ ಗತಿ ಏನು ಅಂತ ಹೇಳಲಿ ಎಂದು ಹೇಳಿದರು.
ರಾಜ್ಯದ ಬೊಕ್ಕಸದ ಹಣದ ಗತಿ ಏನು?, ಯಾರಿಗೂ ಹೊರೆ ಆಗದೇ ಹೇಗೆ ನಿಯಂತ್ರಿಸ್ತೀರಾ, ನಮ್ಮದು ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಕುಸಿತ ಆಗಬಾರದು, ಹೀಗಾಗಿ ಸರ್ಕಾರ ತಕ್ಷಣ ಶ್ವೇತ ಪತ್ರ ಹೊರಡಿಸಲಿ, ಆದಾಯದ ಮೂಲಗಳನ್ನು ಶ್ವೇತಪತ್ರದ ಮೂಲಕ ಹೊರಡಿಸಲಿ ಇದು ಚುನಾವಣೆ ಗಿಮಿಕ್ ಆಗಬಾರದು, ಜನರಿಗೆ ಹೊರೆಯಾಗದಂತೆ ಈ ಯೋಜನೆ ಜಾರಿಯಾಗಲಿ ಎಂದು ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿ ಅವರು, ಉಚಿತ ಯೋಜನೆಗೆ ಹಣದ ಮೂಲ, ಹಣದ ಕ್ರೋಡೀಕರಣ, ಎಷ್ಟು ವರ್ಷ ಇರುತ್ತೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ, ನಿರುದ್ಯೋಗ ಭತ್ಯೆಗೆ ಮಾನದಂಡ ಹಾಕಿದ್ದಾರೆ, ಮೊದಲು ಮಾನದಂಡದ ಬಗ್ಗೆ ಹೇಳಿರಲಿಲ್ಲ, ಖಾಸಗಿ ಬಸ್ಸುಗಳಲ್ಲಿ ಸಂಚರಿಸೋರಿಗೆ ಏನು?, ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ ಇದೆ, ಹಿಂದಿನ ಪಿಂಚಣಿ ಯೋಜನೆಗಳ ಗತಿ ಏನು ಅಂತ ಹೇಳಲಿ ಎಂದು ಹೇಳಿದರು.
ರಾಜ್ಯದ ಬೊಕ್ಕಸದ ಹಣದ ಗತಿ ಏನು?, ಯಾರಿಗೂ ಹೊರೆ ಆಗದೇ ಹೇಗೆ ನಿಯಂತ್ರಿಸ್ತೀರಾ, ನಮ್ಮದು ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಕುಸಿತ ಆಗಬಾರದು, ಹೀಗಾಗಿ ಸರ್ಕಾರ ತಕ್ಷಣ ಶ್ವೇತ ಪತ್ರ ಹೊರಡಿಸಲಿ, ಆದಾಯದ ಮೂಲಗಳನ್ನು ಶ್ವೇತಪತ್ರದ ಮೂಲಕ ಹೊರಡಿಸಲಿ ಇದು ಚುನಾವಣೆ ಗಿಮಿಕ್ ಆಗಬಾರದು, ಜನರಿಗೆ ಹೊರೆಯಾಗದಂತೆ ಈ ಯೋಜನೆ ಜಾರಿಯಾಗಲಿ ಎಂದು ಹೇಳಿದರು.