ಕೇಳುವ ಮೊದಲೇ ಕಾಂಗ್ರೆಸ್ ನೀರು ಬಿಟ್ಟಿದೆ ; ಯಾರ ಭಯದಿಂದ ನೀರು ಬಿಟ್ರಿ? ; ಸಿಟಿ ರವಿ
1227 views
bengaluru ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು:ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಇದರಲ್ಲಿ ರಾಜಕೀಯ ಮಾಡುತ್ತಿಲ್ಲ, ಆದರೆ ನಮ್ಮ ರಾಜ್ಯ ಸರ್ಕಾರದ ತಪ್ಪುಗಳನ್ನು ಎತ್ತಿ ಹೇಳಲೇಬೇಕಿದೆ ಎಂದರು. ತಮಿಳುನಾಡು ಸರ್ಕಾರ ಕೇಳುವ ಮೊದಲೇ ಕರ್ನಾಟಕ ಸರ್ಕಾರ ಕಾವೇರಿ ನೀರು ಬಿಟ್ಟಿತ್ತು. ನಂತರದ ದಿನಗಳಲ್ಲಿ ನಮ್ಮ ನೆರವಿಗೆ ಸಿಡಬ್ಲ್ಯುಆರ್ ಸಿ ಬರಲಿಲ್ಲ. ಸುಪ್ರೀಂ ಕೋರ್ಟ್ನಲ್ಲೂ ಈಗ ತೀರ್ಪು ಬಂತು. ಕೇಳುವ ಮೊದಲೇ ನೀರು ಬಿಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರ ಯಾರ ಭಯಕ್ಕೆ ತಮಿಳುನಾಡಿಗೆ ನೀರು ಬಿಟ್ಟಿದ್ದರು?, ಡಿಎಂಕೆ ನಿಮಗೆ ಬೆದರಿಕೆ ಹಾಕಿರಬಹುದು, ನಿಮ್ಮ ಇಂಡಿಯಾದ ಭಾಗವಾಗಿರಬೇಕು ಎಂದರೆ ನೀರು ಬಿಡಿ ಎಂದಿರಬಹುದು. ಅಥವಾ ನಿಮ್ಮ ಹೈಕಮಾಂಡ್ ನಿಮಗೆ ನೀರು ಬಿಡಲು ಸೂಚನೆ ನೀಡಿರಬಹುದು ಎಂದು ತರಾಟೆಗೆ ತೆಗೆದುಕೊಂಡರು.
ಈಗ ನೀರು ಬಿಟ್ಟು ಸಭೆ ಕರೆಯುವ ಹೊಸ ಸಂಪ್ರದಾಯ ಶುರು ಮಾಡಿದ್ದೀರಿ. ನೀರು ಬಿಟ್ಟ ಮೇಲೆ ಸಂಸದರ ಸಭೆ ಮಾಡಿದ್ದೀರಿ. ನೀರು ಬಿಟ್ಟ ಮೇಲೆ ವಾದ ಶುರು ಮಾಡಿದ್ದೀರಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ಪ್ರಾಧಿಕಾರದ ಸಮಿತಿಯ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಕರ್ನಾಟಕಕ್ಕೆ ಶಾಕ್ ನೀಡಿದೆ.
ಇನ್ನು ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಎಚ್ ಡಿ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿದ್ದಾರೆ ಅನ್ನೋದು ಅಷ್ಟೇ ಗೊತ್ತಿದೆ. ಮೈತ್ರಿ ಆಗುವುದಿದ್ದರೆ ಬೇಗ ಆಗಲಿ. ವಿಳಂಬ ಆದರೆ ಅಡ್ಡ ಪರಿಣಾಮ ಬೀರಬಹುದು ಎಂಬುದಷ್ಟೇ ನನ್ನ ಕಾಳಜಿ ಎಂದರು.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಇದರಲ್ಲಿ ರಾಜಕೀಯ ಮಾಡುತ್ತಿಲ್ಲ, ಆದರೆ ನಮ್ಮ ರಾಜ್ಯ ಸರ್ಕಾರದ ತಪ್ಪುಗಳನ್ನು ಎತ್ತಿ ಹೇಳಲೇಬೇಕಿದೆ ಎಂದರು. ತಮಿಳುನಾಡು ಸರ್ಕಾರ ಕೇಳುವ ಮೊದಲೇ ಕರ್ನಾಟಕ ಸರ್ಕಾರ ಕಾವೇರಿ ನೀರು ಬಿಟ್ಟಿತ್ತು. ನಂತರದ ದಿನಗಳಲ್ಲಿ ನಮ್ಮ ನೆರವಿಗೆ ಸಿಡಬ್ಲ್ಯುಆರ್ ಸಿ ಬರಲಿಲ್ಲ. ಸುಪ್ರೀಂ ಕೋರ್ಟ್ನಲ್ಲೂ ಈಗ ತೀರ್ಪು ಬಂತು. ಕೇಳುವ ಮೊದಲೇ ನೀರು ಬಿಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರ ಯಾರ ಭಯಕ್ಕೆ ತಮಿಳುನಾಡಿಗೆ ನೀರು ಬಿಟ್ಟಿದ್ದರು?, ಡಿಎಂಕೆ ನಿಮಗೆ ಬೆದರಿಕೆ ಹಾಕಿರಬಹುದು, ನಿಮ್ಮ ಇಂಡಿಯಾದ ಭಾಗವಾಗಿರಬೇಕು ಎಂದರೆ ನೀರು ಬಿಡಿ ಎಂದಿರಬಹುದು. ಅಥವಾ ನಿಮ್ಮ ಹೈಕಮಾಂಡ್ ನಿಮಗೆ ನೀರು ಬಿಡಲು ಸೂಚನೆ ನೀಡಿರಬಹುದು ಎಂದು ತರಾಟೆಗೆ ತೆಗೆದುಕೊಂಡರು.
ಈಗ ನೀರು ಬಿಟ್ಟು ಸಭೆ ಕರೆಯುವ ಹೊಸ ಸಂಪ್ರದಾಯ ಶುರು ಮಾಡಿದ್ದೀರಿ. ನೀರು ಬಿಟ್ಟ ಮೇಲೆ ಸಂಸದರ ಸಭೆ ಮಾಡಿದ್ದೀರಿ. ನೀರು ಬಿಟ್ಟ ಮೇಲೆ ವಾದ ಶುರು ಮಾಡಿದ್ದೀರಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ಪ್ರಾಧಿಕಾರದ ಸಮಿತಿಯ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಕರ್ನಾಟಕಕ್ಕೆ ಶಾಕ್ ನೀಡಿದೆ.
ಇನ್ನು ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಎಚ್ ಡಿ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿದ್ದಾರೆ ಅನ್ನೋದು ಅಷ್ಟೇ ಗೊತ್ತಿದೆ. ಮೈತ್ರಿ ಆಗುವುದಿದ್ದರೆ ಬೇಗ ಆಗಲಿ. ವಿಳಂಬ ಆದರೆ ಅಡ್ಡ ಪರಿಣಾಮ ಬೀರಬಹುದು ಎಂಬುದಷ್ಟೇ ನನ್ನ ಕಾಳಜಿ ಎಂದರು.