ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ, ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ
1097 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಕರ್ನಾಟಕದಲ್ಲಿ ಈಗ ಹೊಸದಾಗಿ 92 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಪಕ್ಕದ ಕೇರಳದಲ್ಲಿ ಕೊರೊನಾ ವೈರಸ್ ಹೊಸ ತಳಿಯ ಸೋಂಕು ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಎಲ್ಲ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹಿಂದಿನ ಕೋವಿಡ್ ಅಲೆಗಳಲ್ಲಿ ಆದ ತಪ್ಪುಗಳು ಮತ್ತೆ ಎದುರಾಗದಂತೆ ನಿಗಾವಹಿಸಲು ನಿರ್ದೇಶನ ಕೊಟ್ಟಿದ್ದಾರೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಯಾವುದಕ್ಕೂ ಕೊರತೆ ಆಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಹಿನ್ನಲೆಯಲ್ಲಿ ಗುರುವಾರ ಆರೋಗ್ಯ ಸಚಿವರು, ಉಪ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವ್ ಇದ್ದ ಮೂರು ಜನರು ಮೃತಪಟ್ಟಿದ್ದಾರೆ. ಆದರೆ ಅವರಿಗೆ ಬೇರೆ ಕಾಯಿಲೆಗಳು ಇದ್ದವು. ಕೋವಿಡ್ ನಿಂದಲೇ ಮೃತಪಟ್ಟರು ಎಂದು ಹೇಳಲು ಆಗಲ್ಲ ಅಂತ ಸಿಎಂ ಹೇಳಿದರು.
ತಾಂತ್ರಿಕ ಸಲಹಾ ಸಮಿತಿಯ ಸಲಹೆಯನ್ನು ಪಡೆದುಕೊಂಡಿದ್ದೇವೆ. ಅಧಿಕಾರಿಗಳಿಗೆ ಸ್ಪಷ್ಟವಾಗಿ ಹೇಳಿದ್ದೇನೆ, ಹಿಂದೆ ಆದ ತಪ್ಪುಗಳು ಮರುಕಳಿಸಬಾರದು. ಬೇರೆ ಕಾಯಿಲೆಗಳನ್ನು ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆ ಕೊಡಬೇಕು. ಲಸಿಕೆ ಅಗತ್ಯ ಇದ್ದರೆ ಅದನ್ನು ಪ್ರಾರಂಭ ಮಾಡಬೇಕು. ಯಾರು ಲಸಿಕೆ ತೆಗೆದುಕೊಂಡಿಲ್ಲವೋ ಅವರಿಗೆ ಲಸಿಕೆ ನೀಡಬೇಕಾಗತ್ತದೆ ಎಂದಿದ್ದಾರೆ.
ಕೊರೊನಾ ವೈರಸ್ನ ಉಪತಳಿ ಜೆಎನ್. 1 ಹರಡುತ್ತಿದೆ. ಕರ್ನಾಟಕದಲ್ಲಿ 92 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 80 ಪ್ರಕರಣಗಳು ಇವೆ. ಈ ಪೈಕಿ 72 ಮಂದಿ ಕ್ವಾರಂಟೈನ್ , 20 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಏಳು ಜನ ಐಸಿಯುನಲ್ಲಿ ಇದ್ದಾರೆ. ಬೇರೆ ರೋಗದ ಜೊತೆಗೆ ಕೋವಿಡ್ ಕೂಡಾ ಇದೆ ಎಂದು ವಿವರಿಸಿದರು.
''ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ನಿರಂತರವಾಗಿ ಸಭೆ ನಡೆಸಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಯನ್ನು ಕ್ಯಾಬಿನೆಟ್ ಉಪ ಸಮಿತಿ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಗಡಿ ಭಾಗದಲ್ಲಿ ಹೆಚ್ಚು ತಪಾಸಣೆ ಮಾಡಬೇಕು. ಆದರೆ ಯಾರೂ ಭಯ, ಆತಂಕ ಪಡಬೇಕಾದ ಅಗತ್ಯ ಇಲ್ಲ. ಆದರೆ ಎಚ್ಚರಿಕೆ ಕ್ರಮ ಅನುಸರಿಸಬೇಕು'' ಎಂದು ಸಿದ್ದರಾಮಯ್ಯ ಹೇಳಿದರು.
ಜನಸಂದಣಿ ಇರುವ ಕಡೆ ಜನರು ಮಾಸ್ಕ್ ಧರಿಸಬೇಕು ಹಾಗೂ 60 ವರ್ಷ ಮೇಲ್ಪಟ್ಟವರು ಕಡ್ಡಾಯ ಮಾಸ್ಕ್ ಧರಿಸಬೇಕು. ತಪಾಸಣೆ ಹೆಚ್ಚಾದಲ್ಲಿ ಪ್ರಕರಣಗಳು ಹೆಚ್ಚಾಗಬಹುದು. ಆದರೆ ಭಯ ಆತಂಕ ಪಡಬೇಕಾದ ಅಗತ್ಯ ಇಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕು. ಬೆಂಗಳೂರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆಕ್ಸಿಜನ್, ವೆಂಟಿಲೇಟರ್, ಬೆಡ್ ಮುಂಚಿತವಾಗಿ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಹೊಸ ವರ್ಷಾಚರಣೆಗೆ ಪ್ರತ್ಯೇಕ ರೂಲ್ಸ್ ಇರೋದಿಲ್ಲ. ಹೊಸ ವರ್ಷಾಚರಣೆ ಮಾಡಲು ಹೋಗುವವರು ಮಾಸ್ಕ್ ಧರಿಸಬೇಕು ಎಂದರು.
ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಹಿನ್ನಲೆಯಲ್ಲಿ ಗುರುವಾರ ಆರೋಗ್ಯ ಸಚಿವರು, ಉಪ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವ್ ಇದ್ದ ಮೂರು ಜನರು ಮೃತಪಟ್ಟಿದ್ದಾರೆ. ಆದರೆ ಅವರಿಗೆ ಬೇರೆ ಕಾಯಿಲೆಗಳು ಇದ್ದವು. ಕೋವಿಡ್ ನಿಂದಲೇ ಮೃತಪಟ್ಟರು ಎಂದು ಹೇಳಲು ಆಗಲ್ಲ ಅಂತ ಸಿಎಂ ಹೇಳಿದರು.
ತಾಂತ್ರಿಕ ಸಲಹಾ ಸಮಿತಿಯ ಸಲಹೆಯನ್ನು ಪಡೆದುಕೊಂಡಿದ್ದೇವೆ. ಅಧಿಕಾರಿಗಳಿಗೆ ಸ್ಪಷ್ಟವಾಗಿ ಹೇಳಿದ್ದೇನೆ, ಹಿಂದೆ ಆದ ತಪ್ಪುಗಳು ಮರುಕಳಿಸಬಾರದು. ಬೇರೆ ಕಾಯಿಲೆಗಳನ್ನು ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆ ಕೊಡಬೇಕು. ಲಸಿಕೆ ಅಗತ್ಯ ಇದ್ದರೆ ಅದನ್ನು ಪ್ರಾರಂಭ ಮಾಡಬೇಕು. ಯಾರು ಲಸಿಕೆ ತೆಗೆದುಕೊಂಡಿಲ್ಲವೋ ಅವರಿಗೆ ಲಸಿಕೆ ನೀಡಬೇಕಾಗತ್ತದೆ ಎಂದಿದ್ದಾರೆ.
ಕೊರೊನಾ ವೈರಸ್ನ ಉಪತಳಿ ಜೆಎನ್. 1 ಹರಡುತ್ತಿದೆ. ಕರ್ನಾಟಕದಲ್ಲಿ 92 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 80 ಪ್ರಕರಣಗಳು ಇವೆ. ಈ ಪೈಕಿ 72 ಮಂದಿ ಕ್ವಾರಂಟೈನ್ , 20 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಏಳು ಜನ ಐಸಿಯುನಲ್ಲಿ ಇದ್ದಾರೆ. ಬೇರೆ ರೋಗದ ಜೊತೆಗೆ ಕೋವಿಡ್ ಕೂಡಾ ಇದೆ ಎಂದು ವಿವರಿಸಿದರು.
''ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ನಿರಂತರವಾಗಿ ಸಭೆ ನಡೆಸಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಯನ್ನು ಕ್ಯಾಬಿನೆಟ್ ಉಪ ಸಮಿತಿ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಗಡಿ ಭಾಗದಲ್ಲಿ ಹೆಚ್ಚು ತಪಾಸಣೆ ಮಾಡಬೇಕು. ಆದರೆ ಯಾರೂ ಭಯ, ಆತಂಕ ಪಡಬೇಕಾದ ಅಗತ್ಯ ಇಲ್ಲ. ಆದರೆ ಎಚ್ಚರಿಕೆ ಕ್ರಮ ಅನುಸರಿಸಬೇಕು'' ಎಂದು ಸಿದ್ದರಾಮಯ್ಯ ಹೇಳಿದರು.
ಜನಸಂದಣಿ ಇರುವ ಕಡೆ ಜನರು ಮಾಸ್ಕ್ ಧರಿಸಬೇಕು ಹಾಗೂ 60 ವರ್ಷ ಮೇಲ್ಪಟ್ಟವರು ಕಡ್ಡಾಯ ಮಾಸ್ಕ್ ಧರಿಸಬೇಕು. ತಪಾಸಣೆ ಹೆಚ್ಚಾದಲ್ಲಿ ಪ್ರಕರಣಗಳು ಹೆಚ್ಚಾಗಬಹುದು. ಆದರೆ ಭಯ ಆತಂಕ ಪಡಬೇಕಾದ ಅಗತ್ಯ ಇಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕು. ಬೆಂಗಳೂರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆಕ್ಸಿಜನ್, ವೆಂಟಿಲೇಟರ್, ಬೆಡ್ ಮುಂಚಿತವಾಗಿ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಹೊಸ ವರ್ಷಾಚರಣೆಗೆ ಪ್ರತ್ಯೇಕ ರೂಲ್ಸ್ ಇರೋದಿಲ್ಲ. ಹೊಸ ವರ್ಷಾಚರಣೆ ಮಾಡಲು ಹೋಗುವವರು ಮಾಸ್ಕ್ ಧರಿಸಬೇಕು ಎಂದರು.