ತೆರಿಗೆ ತಾರತಮ್ಯದ ವಿರುದ್ಧ ಮತ್ತೆ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಗುಡುಗು
1057 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ತೆರಿಗೆ ತಾರತಮ್ಯ ವಿರುದ್ಧ ಮತ್ತೆ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಲಿ ನಡೆಸಿದ್ದಾರೆ. ಸದನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ, ಕೇಂದ್ರ ನಮಗೆ ಅನ್ಯಾಯ ಮಾಡುತ್ತಿದ್ದರು, ಅನುದಾನ ತಾರತಮ್ಯದ ಬಗ್ಗೆ ಸಮರ್ಥನೆ ಮಾಡಿಕೊಳ್ತಿದ್ದಾರೆ, ಕೇಂದ್ರವನ್ನು ಸಮರ್ಥಿಸಿಕೊಳ್ಳೋ ಬಿಜೆಪಿಗೆ ನಾಚಿಕೆ ಆಗಲ್ವಾ?, ನಮಗೆ ಕೊಡೋದು ಭಿಕ್ಷೆ ಅಲ್ಲ, ಅದು ನಮ್ಮ ದುಡ್ಡು, ಆರ್ ವಿ ಬೆಗ್ಗರ್ಸ್ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ತಾಯಿ ನಿರ್ಮಲಾ ಸೀತಾರಾಮನ್ ಅವರೇ ರಾಜ್ಯಕ್ಕೆ 5 ಸಾವಿರ ಕೋಟಿ ಕೊಡ್ತೀವಿ ಅಂತ ಹೇಳಿದ್ದೀರಿ ಕೊಡಿ ಎಂದು ಆಗ್ರಹಿಸಿದರು. ನೀವು ರಾಜ್ಯವನ್ನು ಪ್ರತಿನಿಧಿಸುತ್ತಿದ್ದರಲ್ಲ, ನಮ್ಮ ರಾಜ್ಯದ ಜನರಿಗೆ ಯಾಕೆ ಅನ್ಯಾಯ ಮಾಡುತ್ತಿದ್ದೀರಿ, ಕನ್ನಡಿಗರಿಗೆ ಯಾಕೆ ಅನ್ಯಾಯ ಮಾಡುತ್ತಿದ್ದೀರಿ, ಅನುದಾನ ಕೊಡಿ ಎಂದು ಹೇಳಿದರು.
ಈಗಲಾದ್ರೂ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಅಂತ ಗೊತ್ತಾಗಿದೆ, ರಾಜ್ಯದ ಸಂಸದರು ಕೇಂದ್ರ ಬಳಿ ನಮ್ಮ ಪಾಲು ಕೇಳಿ ಎಂದು ಹೇಳಿದರು. ತೆರಿಗೆ ಕಟ್ಟುವುದರಲ್ಲಿ ಮಹಾರಾಷ್ಟ್ರ ನಂಬರ್ ಒನ್ ಇದೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದರು. ಅತೀ ಹೆಚ್ಚು ತೆರಿಗೆ ಕಟ್ಟುತ್ತಿದ್ದೇವೆ, ಆದ್ರೂ ನಮ್ಮ ರಾಜ್ಯಕ್ಕೆ ಬರುವ ಅನುದಾನ ಕೊಡ್ತಿಲ್ಲ, ಇದನ್ನ ರಾಜ್ಯ ಬಿಜೆಪಿ ನಾಯಕರು ಬೆಂಬಲಿಸುತ್ತಿದ್ದಾರೆ, ಇವರಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯಾ ಎಂದು ಕಿಡಿಕಾರಿದರು
ತಾಯಿ ನಿರ್ಮಲಾ ಸೀತಾರಾಮನ್ ಅವರೇ ರಾಜ್ಯಕ್ಕೆ 5 ಸಾವಿರ ಕೋಟಿ ಕೊಡ್ತೀವಿ ಅಂತ ಹೇಳಿದ್ದೀರಿ ಕೊಡಿ ಎಂದು ಆಗ್ರಹಿಸಿದರು. ನೀವು ರಾಜ್ಯವನ್ನು ಪ್ರತಿನಿಧಿಸುತ್ತಿದ್ದರಲ್ಲ, ನಮ್ಮ ರಾಜ್ಯದ ಜನರಿಗೆ ಯಾಕೆ ಅನ್ಯಾಯ ಮಾಡುತ್ತಿದ್ದೀರಿ, ಕನ್ನಡಿಗರಿಗೆ ಯಾಕೆ ಅನ್ಯಾಯ ಮಾಡುತ್ತಿದ್ದೀರಿ, ಅನುದಾನ ಕೊಡಿ ಎಂದು ಹೇಳಿದರು.
ಈಗಲಾದ್ರೂ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಅಂತ ಗೊತ್ತಾಗಿದೆ, ರಾಜ್ಯದ ಸಂಸದರು ಕೇಂದ್ರ ಬಳಿ ನಮ್ಮ ಪಾಲು ಕೇಳಿ ಎಂದು ಹೇಳಿದರು. ತೆರಿಗೆ ಕಟ್ಟುವುದರಲ್ಲಿ ಮಹಾರಾಷ್ಟ್ರ ನಂಬರ್ ಒನ್ ಇದೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದರು. ಅತೀ ಹೆಚ್ಚು ತೆರಿಗೆ ಕಟ್ಟುತ್ತಿದ್ದೇವೆ, ಆದ್ರೂ ನಮ್ಮ ರಾಜ್ಯಕ್ಕೆ ಬರುವ ಅನುದಾನ ಕೊಡ್ತಿಲ್ಲ, ಇದನ್ನ ರಾಜ್ಯ ಬಿಜೆಪಿ ನಾಯಕರು ಬೆಂಬಲಿಸುತ್ತಿದ್ದಾರೆ, ಇವರಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯಾ ಎಂದು ಕಿಡಿಕಾರಿದರು