ನಾವು ಹೇಳಿದ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದು ಗ್ಯಾರಂಟಿ; ಸಿದ್ದರಾಮಯ್ಯ
1069 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ ಸಚಿವರ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಅವರು, ಐದು ಘೋಷಣೆಗಳನ್ನು ಜಾರಿ ಮಾಡುವ ಬಗ್ಗೆ ಸಚಿವರು ಹಾಗೂ ಹಣಕಾಸು ಇಲಾಖೆ ಜೊತೆಗೆ ಸಭೆ ಮಾಡಲಾಗಿದೆ. ಜಾರಿ ವಿಚಾರವಾಗಿ ಚರ್ಚೆ ಮಾಡಿ ಶುಕ್ರವಾರ ತೀರ್ಮಾನ ಮಾಡುತ್ತೇವೆ. ಬಳಿಕ ಕ್ಯಾಬಿನೆಟ್ ತೀರ್ಮಾನದ ಬಗ್ಗೆ ತಿಳಿಸುತ್ತೇವೆ ಎಂದರು. ನಾವು ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ. ಬಿಜೆಪಿ ಅವರು ಏನೇ ಆರೋಪ ಮಾಡಲಿ, ನಾವು ನಮ್ಮ ಘೋಷಣೆಯನ್ನು ಜಾರಿ ಮಾಡೇ ಮಾಡುತ್ತೇವೆ ಎಂದರು.