ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗಲಿದೆ, ಯಾವುದೇ ಗೊಂದಲ ಬೇಡ; ಸಿದ್ದರಾಮಯ್ಯ ಸ್ಪಷ್ಟನೆ
1034 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು : ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡುತ್ತೇವೆ, ಬಾಡಿಗೆದಾರರೂ ಸೇರಿ ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೀವಿ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಗೃಹಜ್ಯೋತಿ ಯೋಜನೆಯ ಮಾರ್ಗಸೂಚಿ ಪ್ರಕಟವಾದ ಬಳಿಕ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಎಂಬ ಗೊಂದಲಗಳ ಬಗ್ಗೆ ಮಾತನಾಡಿದರು.
ವಿಧಾನಸೌಧದಲ್ಲಿ ಡಿ ದೇವರಾಜು ಅರಸು ಅವರ ಪುಣ್ಮಸ್ಮರಣೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಯಾರಾರು ಬಡವರು ಇದ್ದಾರೆ, 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುತ್ತಾರೆ. ಅವರಾರು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ. ಈ ಯೋಜನೆ ಬಾಡಿಗೆದಾರರಿಗೂ ಅನ್ವಯ ಆಗುತ್ತೆ. ವಾಣಿಜ್ಯವಾಗಿ ಬಳಕೆ ಮಾಡುವವರಿಗೆ ಉಚಿತ ವಿದ್ಯುತ್ ಅನ್ವಯ ಆಗಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರ ಪ್ರತಿಭಟನೆಗೆ ಸಿದ್ದರಾಮಯ್ಯ ಕಿಡಿಕಾರಿದ್ದು, ಅವರಿಗೆ ಈಗ ಏನು ವಿಷಯ ಇಲ್ಲ. ಅವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಏನಿದೆ? 10 ಗಂಟೆ ವಿದ್ಯುತ್ ಕೊಡುತ್ತೇವೆ ಎಂದರು ಕೊಟ್ರಾ? ಬಂದ ತಕ್ಷಣ ಸಾಲ ಮನ್ನಾ ಮಾಡ್ತೀವಿ ಎಂದರು ಮಾಡಿದ್ರಾ? ನೀರಾವರಿ ಯೋಜನೆಗ ಒಂದೂವರೆ ಲಕ್ಷ ಕೋಟಿ ರೂಪಾಯಿ ಖರ್ಚು ಮಾಡ್ತೀವಿ ಎಂದು ಹೇಳಿದರು ಮಾಡಿದ್ರಾ? ಈ ರೀತಿ ಇದ್ದಾಗ ಅವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕು ಇದೆ ಎಂದು ಪ್ರಶ್ನಿಸಿದರು.
ವಿಧಾನಸೌಧದಲ್ಲಿ ಡಿ ದೇವರಾಜು ಅರಸು ಅವರ ಪುಣ್ಮಸ್ಮರಣೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಯಾರಾರು ಬಡವರು ಇದ್ದಾರೆ, 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುತ್ತಾರೆ. ಅವರಾರು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ. ಈ ಯೋಜನೆ ಬಾಡಿಗೆದಾರರಿಗೂ ಅನ್ವಯ ಆಗುತ್ತೆ. ವಾಣಿಜ್ಯವಾಗಿ ಬಳಕೆ ಮಾಡುವವರಿಗೆ ಉಚಿತ ವಿದ್ಯುತ್ ಅನ್ವಯ ಆಗಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರ ಪ್ರತಿಭಟನೆಗೆ ಸಿದ್ದರಾಮಯ್ಯ ಕಿಡಿಕಾರಿದ್ದು, ಅವರಿಗೆ ಈಗ ಏನು ವಿಷಯ ಇಲ್ಲ. ಅವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಏನಿದೆ? 10 ಗಂಟೆ ವಿದ್ಯುತ್ ಕೊಡುತ್ತೇವೆ ಎಂದರು ಕೊಟ್ರಾ? ಬಂದ ತಕ್ಷಣ ಸಾಲ ಮನ್ನಾ ಮಾಡ್ತೀವಿ ಎಂದರು ಮಾಡಿದ್ರಾ? ನೀರಾವರಿ ಯೋಜನೆಗ ಒಂದೂವರೆ ಲಕ್ಷ ಕೋಟಿ ರೂಪಾಯಿ ಖರ್ಚು ಮಾಡ್ತೀವಿ ಎಂದು ಹೇಳಿದರು ಮಾಡಿದ್ರಾ? ಈ ರೀತಿ ಇದ್ದಾಗ ಅವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕು ಇದೆ ಎಂದು ಪ್ರಶ್ನಿಸಿದರು.