ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ಸರಿಯಲ್ಲ ; ಸಿಎಂ ಸಿದ್ದರಾಮಯ್ಯ
1099 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ತಮ್ಮ ಹಿಂದಿನ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕುಣಿಯಲಾರದವರು ನೆಲ ಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು.
ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು. ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿ ಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.
ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು. ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿ ಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.