Congress Protest: ಸಿಟಿ ರವಿ ಮಾಂಸ ಆಹಾರ ತಿಂದು ದೇಗುಲಕ್ಕೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಕೈ ಪ್ರತಿಭಟನೆ
1006 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಸಿಟಿ ರವಿ ಮಾಂಸ ಆಹಾರ ಸೇವಿಸಿ, ರಾಜಾಂಗಣ ನಾಗಬನ ದೇವಸ್ಥಾನದ ಒಳಗಡೆ ಬಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಸಿಟಿ ರವಿಯನ್ನು ಧಾರ್ಮಿಕ ಸ್ಥಳಗಳಿಗೆ ಬರದಂತೆ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಿಟಿ ರವಿ ಅಲ್ಲ, ನಾಟಿ ಕೋಳೀ ರವಿ ಎಂದು ಧಿಕ್ಕಾರ ಕೂಗಿ ಪ್ರತಿಭಟಿಸಿದ್ದಾರೆ.