ಕುಮಾರಸ್ವಾಮಿ ಜೆಡಿಎಸ್ ಅನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ; ಡಿಕೆಶಿ
1097 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಹರ್ ಘರ್ ತಿರಂಗ ಎಂದವರಿಗೆ ಈಗೇನಾಯಿತು? ಎಂದು ಬಿಜೆಪಿ ವಿರುದ್ಧ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದರು.
ಮಂಡ್ಯ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿ ಮಂಗಳವಾರ ಮಾತನಾಡಿದ ಅವರು, ಹರ್ ಘರ್ ತಿರಂಗ ಎಂದು ಬಿಜೆಪಿಗರು ಮನೆ ಮನೆಗೆ ತಿರಂಗ ಹಂಚಿದ್ದರು, ಏನಾಯಿತು ಅದು ಹೀಗೆ ಯಾಕೆ ತಿರಂಗ ಬಿಟ್ರು ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಬಿಜೆಪಿ ಅವರೇ ಅಧಿಕಾರದಲ್ಲಿ ಇದ್ದಾರೆ. ತಿರಂಗವನ್ನು ಬಿಟ್ಟು ಹನುಮ ಧ್ವಜವನ್ನೇ ಕಾನೂನಿನ ಮೂಲಕ ತಂದು ಬಿಡಲಿ ಎಂದು ತಿರುಗೇಟು ನೀಡಿದರು.
ಮಂಡ್ಯದಲ್ಲಿ ಹನುಮ ಧ್ವಜ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗಿಯಾದ ವಿಚಾರವಾಗಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ಅವರು ಅವರ ಪಾರ್ಟಿಯನ್ನು ಬಿಜೆಪಿ ಜೊತೆಗೆ ಮರ್ಜ್ ಮಾಡಿಕೊಳ್ಳುವ ರೀತಿಯಲ್ಲಿ ಮಾಡಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ ಅದು ಅವರ ಪಾರ್ಟಿ ವಿಚಾರ ನಮಗೂ ಅದಕ್ಕೂ ಸಂಬಂಧವಿಲ್ಲ. ಯಾವ ಬಣ್ಣದ ಬಾವುಟ ಬೇಕಾದರೂ ಹಾಕಿಕೊಳ್ಳಲಿ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ರಾಜಕಾರಣದ ಬೇಸ್ ಇಲ್ಲ ಎಂದರು.
ಇವರನ್ನು ಅವರು ನಂಬುತ್ತಾರೋ? ಅವರನ್ನು ಇವರು ನಂಬುತ್ತಾರೋ ನೋಡೋಣ. ಗೊಂದಲ ಸೃಷ್ಟಿ ಮಾಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಹೀಗೆಲ್ಲಾ ಮಾಡ್ತಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಬದುಕುತ್ತಾರೆ. ಎಲ್ಲಾ ಜಾತಿ, ವರ್ಗದವರು ಅಣ್ಣ ತಮ್ಮಂದಿರಂತೆ ಬದುಕುತ್ತಿದ್ದರು ಎಂದರು. ಈಗ ಹೊಸ ಪ್ರಯೋಗ ಮಾಡುತ್ತಿದ್ದಾರೆ, ಏನು ಬೇಕಾದರೂ ಮಾಡಿಕೊಳ್ಳಲಿ. ಮಂಡ್ಯದ ಕೆರಗೋಡಿನಲ್ಲಿ ಕನ್ನಡ ,ರಾಷ್ಟ್ರ ಧ್ವಜ ಬಿಟ್ಟು ಬೇರೆಯದಕ್ಕೆ ಅವಕಾಶ ಇಲ್ಲ ಎಂದು ಕೇಳಿಕೊಂಡಿದ್ದಾರೆ. ಕನ್ನಡ ಧ್ವಜ ರಾಷ್ಟ್ರಧ್ವಜ ಸಂವಿಧಾನಕ್ಕೆ ಗೌರವ ಕೊಡುವುದು ನಮ್ಮ ಸರ್ಕಾರದ ಬದ್ಧತೆ. ಹೀಗಿದ್ದರೂ ಅವರು ಅಶಾಂತಿ ಮೂಡಿಸಲು ಅವರು ಪ್ರಯತ್ನ ಮಾಡುತ್ತಿದ್ದಾರೆ. ಜನ ಅದನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ ಎಂದರು.
ಮಂಡ್ಯ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿ ಮಂಗಳವಾರ ಮಾತನಾಡಿದ ಅವರು, ಹರ್ ಘರ್ ತಿರಂಗ ಎಂದು ಬಿಜೆಪಿಗರು ಮನೆ ಮನೆಗೆ ತಿರಂಗ ಹಂಚಿದ್ದರು, ಏನಾಯಿತು ಅದು ಹೀಗೆ ಯಾಕೆ ತಿರಂಗ ಬಿಟ್ರು ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಬಿಜೆಪಿ ಅವರೇ ಅಧಿಕಾರದಲ್ಲಿ ಇದ್ದಾರೆ. ತಿರಂಗವನ್ನು ಬಿಟ್ಟು ಹನುಮ ಧ್ವಜವನ್ನೇ ಕಾನೂನಿನ ಮೂಲಕ ತಂದು ಬಿಡಲಿ ಎಂದು ತಿರುಗೇಟು ನೀಡಿದರು.
ಮಂಡ್ಯದಲ್ಲಿ ಹನುಮ ಧ್ವಜ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗಿಯಾದ ವಿಚಾರವಾಗಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ಅವರು ಅವರ ಪಾರ್ಟಿಯನ್ನು ಬಿಜೆಪಿ ಜೊತೆಗೆ ಮರ್ಜ್ ಮಾಡಿಕೊಳ್ಳುವ ರೀತಿಯಲ್ಲಿ ಮಾಡಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ ಅದು ಅವರ ಪಾರ್ಟಿ ವಿಚಾರ ನಮಗೂ ಅದಕ್ಕೂ ಸಂಬಂಧವಿಲ್ಲ. ಯಾವ ಬಣ್ಣದ ಬಾವುಟ ಬೇಕಾದರೂ ಹಾಕಿಕೊಳ್ಳಲಿ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ರಾಜಕಾರಣದ ಬೇಸ್ ಇಲ್ಲ ಎಂದರು.
ಇವರನ್ನು ಅವರು ನಂಬುತ್ತಾರೋ? ಅವರನ್ನು ಇವರು ನಂಬುತ್ತಾರೋ ನೋಡೋಣ. ಗೊಂದಲ ಸೃಷ್ಟಿ ಮಾಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಹೀಗೆಲ್ಲಾ ಮಾಡ್ತಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಬದುಕುತ್ತಾರೆ. ಎಲ್ಲಾ ಜಾತಿ, ವರ್ಗದವರು ಅಣ್ಣ ತಮ್ಮಂದಿರಂತೆ ಬದುಕುತ್ತಿದ್ದರು ಎಂದರು. ಈಗ ಹೊಸ ಪ್ರಯೋಗ ಮಾಡುತ್ತಿದ್ದಾರೆ, ಏನು ಬೇಕಾದರೂ ಮಾಡಿಕೊಳ್ಳಲಿ. ಮಂಡ್ಯದ ಕೆರಗೋಡಿನಲ್ಲಿ ಕನ್ನಡ ,ರಾಷ್ಟ್ರ ಧ್ವಜ ಬಿಟ್ಟು ಬೇರೆಯದಕ್ಕೆ ಅವಕಾಶ ಇಲ್ಲ ಎಂದು ಕೇಳಿಕೊಂಡಿದ್ದಾರೆ. ಕನ್ನಡ ಧ್ವಜ ರಾಷ್ಟ್ರಧ್ವಜ ಸಂವಿಧಾನಕ್ಕೆ ಗೌರವ ಕೊಡುವುದು ನಮ್ಮ ಸರ್ಕಾರದ ಬದ್ಧತೆ. ಹೀಗಿದ್ದರೂ ಅವರು ಅಶಾಂತಿ ಮೂಡಿಸಲು ಅವರು ಪ್ರಯತ್ನ ಮಾಡುತ್ತಿದ್ದಾರೆ. ಜನ ಅದನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ ಎಂದರು.