ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ; ನಿಮಗೆ ಯಾವುದೇ ಗಾಬರಿ ಬೇಡ: ಡಿಕೆ ಶಿವಕುಮಾರ್
1083 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು : ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ. ಕ್ರಮಬದ್ಧವಾಗಿ ಭರವಸೆಗಳನ್ನು ಜಾರಿ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜವಾಬ್ದಾರಿಯುತ ಸರ್ಕಾರ ರಾಜ್ಯದಲ್ಲಿದೆ. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ. ಯಾವುದೇ ಗಾಬರಿ ಮಾಡಿಕೊಳ್ಳುವುದು ಬೇಡ ಎಂದು ಹೇಳಿದರು. ಜೂನ್ 1 ರಿಂದ ಗ್ಯಾರಂಟಿ ಜಾರಿಗೆ ಬರುತ್ತಾ ಎಂದು ಪ್ರಶ್ನೆ ಕೇಳಿದ್ದಕ್ಕೆ ನಾನು ಶಾಸ್ತ್ರ ಹೇಳುವುದಕ್ಕೆ ನಿಂತಿಲ್ಲ. ನೀವು ಹೇಳಿದಂಗೆ ಮಾಡುವುದಕ್ಕೆ ಆಗಲ್ಲ. ಕೊಟ್ಟಿರುವ ಭರವಸೆಗಳನ್ನು ಜಾರಿಗೊಳಿಸುತ್ತೇವೆ ಎಂದರು.