ಕೇಂದ್ರದಿಂದ ನೀರಾವರಿ ಯೋಜನೆಗೆ ಅನುಮತಿ ಪಡೆದುಕೊಳ್ಳಿ: ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಕೆಶಿ ಟಾರ್ಗೆಟ್
1017 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ಪಡೆದುಕೊಳ್ಳಿ ಎಂದು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿಕೆ ಶಿವಕುಮಾರ್ ಟಾರ್ಗೆಟ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಇಲಾಖಾ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ ಅವರು, ನಾನು ನಿಮಗೆ ನೀಡುತ್ತಿರುವ ಗುರಿ ಇದಾಗಿದೆ ಎಂದು ಸ್ಪಷ್ಟವಾಗಿ ಸೂಚಿಸಿದರು. ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು.ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು. ನೀರಾವರಿ ಯೋಜನೆಗಳಿಗೆ 5 ವರ್ಷದಲ್ಲಿ 2 ಲಕ್ಷ ಕೋಟಿ ರು ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಸರಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕು ಎಂದು ಸೂಚಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಇಲಾಖಾ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ ಅವರು, ನಾನು ನಿಮಗೆ ನೀಡುತ್ತಿರುವ ಗುರಿ ಇದಾಗಿದೆ ಎಂದು ಸ್ಪಷ್ಟವಾಗಿ ಸೂಚಿಸಿದರು. ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು.ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು. ನೀರಾವರಿ ಯೋಜನೆಗಳಿಗೆ 5 ವರ್ಷದಲ್ಲಿ 2 ಲಕ್ಷ ಕೋಟಿ ರು ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಸರಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕು ಎಂದು ಸೂಚಿಸಿದರು.