ಜೆಡಿಎಸ್ ಬೇಡ ಎಂದು ಬಂದಿರುವ ಗೋಪಾಲಯ್ಯ, ಜೆಡಿಎಸ್-ಬಿಜೆಪಿ ಮೈತ್ರಿಗೆ ಏನಂದ್ರು ನೋಡಿ..!
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು: ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ಸಹಮತ ಇದೆ ಎಂದು ಮಾಜಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ನಾನು ಜೆಡಿಎಸ್ ತೊರೆದು ಬಂದಿರಬಹುದು ಆದ್ರೆ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಹೈಕಮಾಂಡ್ ತೀರ್ಮಾನಕ್ಕೆ ಒಪ್ಪಿಕೊಂಡಿದ್ದೇನೆ, ಪಕ್ಷದ ವತಿಯಿಂದ ಯಾರನ್ನೇ ಅಭ್ಯರ್ಥಿ ಮಾಡಿದರು, ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು, ಇನ್ನೂ ಕಾವೇರಿ ವಿಚಾರ ಹಾಗೂ ಉದಯನಿಧಿ ಹೇಳಿಕೆ ಬಗ್ಗೆ ವಿಜಯ ಕರ್ನಾಟಕ ವೆಬ್ ಜೊತೆ ಮಾತನಾಡಿದ್ದಾರೆ.