ಮನೆ ಯಜಮಾನಿಗೆ 2 ಸಾವಿರ ರೂ. ಫಿಕ್ಸ್; ಜೂನ್ 15ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ!
ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಯನ್ನು ಸ್ವಲ್ಪ ತಡವಾಗಿ ಜಾರಿಗೆ ತರಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಆಗಸ್ಟ್ 15ರಂದು ಚಾಲನೆ ನೀಡಲು ಉದ್ದೇಶಿಸಿದೆ. ತಾಂತ್ರಿಕ ಕಾರಣಗಳಿಂದ ಜೂನ್ನಲ್ಲಿಯೇ ಯೋಜನೆ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರದ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ನೀಡಿರುವ ಅವರು, ಚುನಾವಣೆ ಸಂದರ್ಭದಲ್ಲಿ ಘೋಷಿಸಿದಂತೆ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡಲಿದ್ದೇವೆ ಎಂದು ಹೇಳಿದ್ದು, ಯೋಜನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.
ಇದಕ್ಕಾಗಿ ಮನೆ ಯಜಮಾನಿಯು ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಹಾಗೂ ಯೋಜನೆಗಾಗಿ ಅರ್ಜಿ ಸಲ್ಲಿಸಬೇಕು. ಮನೆಯ ಯಜಮಾನಿ ಯಾರು ಎನ್ನುವುದನ್ನು ಮನೆಯವರೇ ತೀರ್ಮಾನಿಸಬೇಕಾಗುತ್ತದೆ. ಮನೆ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮಾ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
ಜೂನ್ 15 - ಜುಲೈ 15 - ಅರ್ಜಿ ಸಲ್ಲಿಸಲು ಅವಕಾಶ ಇದೆ, ಈ ಅವಧಿಯಲ್ಲಿ ಅರ್ಜಿದಾರರು ಅಂದರೆ ಮನೆ ಯಜಮಾನಿ ಬ್ಯಾಂಕ್ ಖಾತೆ ವಿವರ, ಆಧಾರ್ ಕಾರ್ಡ್ ವಿವರ ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಜುಲೈ 15 - ಆಗಸ್ಟ್ 15 - ಅರ್ಜಿಗಳ ಪರಿಶೀಲನೆಯಾಗಲಿದೆ. ಮನೆ ಯಜಮಾನಿಯರು ಸಲ್ಲಿಸಿದ ಅರ್ಜಿಯನ್ನು ಇಲಾಖೆಯವರು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.
bengaluruTimesXP KannadaUpdated: 2 Jun 2023, 6:11 pm - cities
- bengaluru
- Gruha Lakshmi Scheme Karnataka To Be Launched On August 15 Submission Of Application Starts From June 15 What Are The Conditions