ಕಲಬುರಗಿ ಸೇರಿದಂತೆ ರಾಜ್ಯದಲ್ಲಿ 20 ಸ್ಥಾನ ಗೆಲ್ಲಲಿದ್ದೇವೆ; ಡಿಕೆ ಶಿವಕುಮಾರ್ ವಿಶ್ವಾಸ
1090 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ, ಹೀಗಾಗಿ ಕಲಬುರಗಿಯಿಂದಲೇ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಪ್ರಧಾನಿ ಮೋದಿ ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, ಕಲಬುರಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.
ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, ಇಂದು ಸಂಜೆ ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. ಮಾರ್ಚ್ 19ರಂದು ಸಿಇಸಿ ಸಭೆ ನಡೆಯಲಿದ್ದು, ಮಾರ್ಚ್ 20ರಂದು ಪಟ್ಟಿ ಅಂತಿಮವಾಗಬಹುದು ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.
ಪ್ರಧಾನಿ ಮೋದಿ ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, ಕಲಬುರಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.
ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, ಇಂದು ಸಂಜೆ ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. ಮಾರ್ಚ್ 19ರಂದು ಸಿಇಸಿ ಸಭೆ ನಡೆಯಲಿದ್ದು, ಮಾರ್ಚ್ 20ರಂದು ಪಟ್ಟಿ ಅಂತಿಮವಾಗಬಹುದು ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.