ಶಕ್ತಿ ಯೋಜನೆಗೆ ಚಾಲನೆ, ಬಸ್ ಏರಿ ಟಿಕೆಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
1085 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಕೆಲ ಸಮಯ ಕಂಡಕ್ಟರ್ ಆಗಿದ್ದರು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 'ಶಕ್ತಿ ಯೋಜನೆಗೆ' ಚಾಲನೆ ನೀಡಿದ ನಂತರ ಅವರು ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸಿದರು.
ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಐವರು ಮಹಿಳೆಯರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನೀಡಲಾಯಿತು. ಯೋಜನೆಯ ಲೋಗೋ ಅನಾವರಣ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾದರು.
ಉಚಿತ ಪ್ರಯಾಣದ ಮೊದಲ ಬಸ್ಗೆ ಸಿಎಂ ಮತ್ತು ಡಿಸಿಎಂ ಚಾಲನೆ ನೀಡಿದರು. ಅದರೊಂದಿಗೆ ಸಿದ್ದರಾಮಯ್ಯ ಅವರು ಮಹಿಳೆ ಟಿಕೆಟ್ ವಿತರಿಸಿದರು. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರು ಭಾನುವಾರ ಮಧ್ಯಾಹ್ನದಿಂದಲೇ ಉಚಿತ ಪ್ರಯಾಣ ಆರಂಭಿಸಿದ್ದಾರೆ. ರಾಜ್ಯದ ಯಾವುದೇ ಭಾಗದಿಂದ ಯಾವುದೇ ಸ್ಥಳಕ್ಕೆ ಸರಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಸದ್ಯಕ್ಕೆ ಯಾವುದೇ ಅಧಿಕೃತ ಗುರುತಿನ ಚೀಟಿ ತೋರಿಸಿದರೆ ಸಾಕಾಗುತ್ತದೆ. ಮುಂದೆ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಬೇಕು.
ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಐವರು ಮಹಿಳೆಯರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನೀಡಲಾಯಿತು. ಯೋಜನೆಯ ಲೋಗೋ ಅನಾವರಣ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾದರು.
ಉಚಿತ ಪ್ರಯಾಣದ ಮೊದಲ ಬಸ್ಗೆ ಸಿಎಂ ಮತ್ತು ಡಿಸಿಎಂ ಚಾಲನೆ ನೀಡಿದರು. ಅದರೊಂದಿಗೆ ಸಿದ್ದರಾಮಯ್ಯ ಅವರು ಮಹಿಳೆ ಟಿಕೆಟ್ ವಿತರಿಸಿದರು. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರು ಭಾನುವಾರ ಮಧ್ಯಾಹ್ನದಿಂದಲೇ ಉಚಿತ ಪ್ರಯಾಣ ಆರಂಭಿಸಿದ್ದಾರೆ. ರಾಜ್ಯದ ಯಾವುದೇ ಭಾಗದಿಂದ ಯಾವುದೇ ಸ್ಥಳಕ್ಕೆ ಸರಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಸದ್ಯಕ್ಕೆ ಯಾವುದೇ ಅಧಿಕೃತ ಗುರುತಿನ ಚೀಟಿ ತೋರಿಸಿದರೆ ಸಾಕಾಗುತ್ತದೆ. ಮುಂದೆ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಬೇಕು.