ಕೆರೆಗಳ ಸಂರಕ್ಷಣೆಯಲ್ಲಿ ಬಿಬಿಎಂಪಿ ವಿಫಲ; ಬಿಬಿಎಂಪಿ ವಿರುದ್ಧ ಕವಿತಾ ರೆಡ್ಡಿ ಕೆಂಡ!
1130 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಕೆರೆಗಳ ಸಂರಕ್ಷಣೆ ವಿಚಾರದಲ್ಲಿ ವಿಫಲವಾಗಿರುವ ಬಿಬಿಎಂಪಿ ವಿರುದ್ಧ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆರೆ ಸಂರಕ್ಷಣೆ ಅತ್ಯಂತ ಪ್ರಮುಖ ವಿಷಯವಾಗಿದ್ದು, ಈ ವರ್ಷ ಈಗಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ನೀರಿನ ಕೊರತೆಯಿಂದ ಜನರು ಪರದಾಡುತ್ತಿದ್ದಾರೆ. ಆದರೆ, ಬಿಬಿಎಂಪಿ ಕೆರೆಗಳ ಸಂರಕ್ಷಣೆಗೆ ಮಾತ್ರ ಮುಂದಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಅದಲ್ಲದೇ ಕೆರೆಗಳನ್ನು ಬಿಬಿಎಂಪಿ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಹಿಂದೆ ಹಲವು ಕೆರೆಗಳನ್ನು ಅರಣ್ಯ ಇಲಾಖೆ ಹಾಗೂ ನಾಗರೀಕ ವೇದಿಕೆಗಳು ಸಂರಕ್ಷಿಸಿ, ಅಭಿವೃದ್ಧಿಪಡಿಸಿವೆ. ಅವುಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಿದ ಬಳಿಕ ಬಿಬಿಎಂಪಿ ಹಾಳು ಮಾಡುತ್ತಿದೆ. ಒಂದು ಭದ್ರತಾ ಸಿಬ್ಬಂದಿಯನ್ನು ಕೂಡ ನಿಯೋಜಿಸಲು ಬಿಬಿಎಂಪಿಗೆ ಆಗುತ್ತಿಲ್ಲ. ಜನರು ಕೆರೆಗಳನ್ನು ಹಾಳು ಮಾಡುತ್ತಿದ್ದರು ಬಿಬಿಎಂಪಿ ನಿರ್ಲಕ್ಷ ವಹಿಸಿದೆ. ಈ ಬಗ್ಗೆ ಕ್ರಮ ತೆಗೆದುಕೊಂಡು ಬಿಬಿಎಂಪಿಯನ್ನು ನವೀಕರಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ.
ಅದಲ್ಲದೇ ಕೆರೆಗಳನ್ನು ಬಿಬಿಎಂಪಿ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಹಿಂದೆ ಹಲವು ಕೆರೆಗಳನ್ನು ಅರಣ್ಯ ಇಲಾಖೆ ಹಾಗೂ ನಾಗರೀಕ ವೇದಿಕೆಗಳು ಸಂರಕ್ಷಿಸಿ, ಅಭಿವೃದ್ಧಿಪಡಿಸಿವೆ. ಅವುಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಿದ ಬಳಿಕ ಬಿಬಿಎಂಪಿ ಹಾಳು ಮಾಡುತ್ತಿದೆ. ಒಂದು ಭದ್ರತಾ ಸಿಬ್ಬಂದಿಯನ್ನು ಕೂಡ ನಿಯೋಜಿಸಲು ಬಿಬಿಎಂಪಿಗೆ ಆಗುತ್ತಿಲ್ಲ. ಜನರು ಕೆರೆಗಳನ್ನು ಹಾಳು ಮಾಡುತ್ತಿದ್ದರು ಬಿಬಿಎಂಪಿ ನಿರ್ಲಕ್ಷ ವಹಿಸಿದೆ. ಈ ಬಗ್ಗೆ ಕ್ರಮ ತೆಗೆದುಕೊಂಡು ಬಿಬಿಎಂಪಿಯನ್ನು ನವೀಕರಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ.