ಸೋಲಿಗೆ ಕಾರಣಗಳೇನು, ಮುಂದಿಡಬೇಕಾದ ಹೆಜ್ಜೆಗಳೇನು?; ಕೇಸರಿ ಪಡೆ ಮಹತ್ವದ ಮೀಟಿಂಗ್
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಅಂತರದಲ್ಲಿ ಅನುಭವಿಸಿದ ಸೋಲಿಗೆ ಕಾರಣಗಳೇನು? ಎಂಬ ನಿಟ್ಟಿನಲ್ಲಿ ಬಿಜೆಪಿ ಸರಣಿ ಸಭೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಇನ್ನಿತರ ಮುಖಂಡರು ಭಾಗಿಯಾಗಿದ್ದಾರೆ.
ಹಲವು ಪ್ರಯೋಗಳನ್ನು ಮಾಡಿದ್ದ ಬಿಜೆಪಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೇವಲ 66 ಸ್ಥಾನಗಳನ್ನು ಮಾತ್ರ ಗಳಿಸಲು ಸಾಧ್ಯವಾಗಿತ್ತು. ಬಿಜೆಪಿಯ ಅಬ್ಬರದ ಕಾರ್ಯತಂತ್ರಗಳ ನಡುವೆಯೂ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದಕ್ಕೆ ಏನೆಲ್ಲಾ ಕಾರಣ ಎಂಬ ನಿಟ್ಟಿನಲ್ಲಿ ನಾಯಕರು ಮೀಟಿಂಗ್ ಮಾಡಿದ್ದಾರೆ. ನೂತನವಾಗಿ ಗೆಲುವು ಸಾಧಿಸಿದ ಬಿಜೆಪಿ ಶಾಸಕರ ಸಭೆ ಹಾಗೂ ಪರಾಜಿತ ಶಾಸಕರ ಸಭೆ ಕೂಡ ಮಾಡಲಾಗಿದೆ.
ಗೆದ್ದ ಹಾಗೂ ಸೋತವರ ಅಭಿಪ್ರಾಯಗಳನ್ನು ಸಂಗ್ರಹ ಮಾಡಿದ ಬಳಿಕ ಸಂಜೆ 6 ಗಂಟೆಗೆ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೂಡಾ ಭಾಗಿಯಾಗಲಿದ್ದಾರೆ. ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕೆಎಸ್ ಈಶ್ವರಪ್ಪ, ಆರ್. ಅಶೋಕ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಹಲವು ಪ್ರಯೋಗಳನ್ನು ಮಾಡಿದ್ದ ಬಿಜೆಪಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೇವಲ 66 ಸ್ಥಾನಗಳನ್ನು ಮಾತ್ರ ಗಳಿಸಲು ಸಾಧ್ಯವಾಗಿತ್ತು. ಬಿಜೆಪಿಯ ಅಬ್ಬರದ ಕಾರ್ಯತಂತ್ರಗಳ ನಡುವೆಯೂ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದಕ್ಕೆ ಏನೆಲ್ಲಾ ಕಾರಣ ಎಂಬ ನಿಟ್ಟಿನಲ್ಲಿ ನಾಯಕರು ಮೀಟಿಂಗ್ ಮಾಡಿದ್ದಾರೆ. ನೂತನವಾಗಿ ಗೆಲುವು ಸಾಧಿಸಿದ ಬಿಜೆಪಿ ಶಾಸಕರ ಸಭೆ ಹಾಗೂ ಪರಾಜಿತ ಶಾಸಕರ ಸಭೆ ಕೂಡ ಮಾಡಲಾಗಿದೆ.
ಗೆದ್ದ ಹಾಗೂ ಸೋತವರ ಅಭಿಪ್ರಾಯಗಳನ್ನು ಸಂಗ್ರಹ ಮಾಡಿದ ಬಳಿಕ ಸಂಜೆ 6 ಗಂಟೆಗೆ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೂಡಾ ಭಾಗಿಯಾಗಲಿದ್ದಾರೆ. ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕೆಎಸ್ ಈಶ್ವರಪ್ಪ, ಆರ್. ಅಶೋಕ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.