ರೈತ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಬಿಜೆಪಿ ರೈತ ಮೋರ್ಚಾ ಕೆಲಸ: ಡಾ. ಶೈಲೇಂದ್ರ ಬೆಲ್ದಾಳೆ!
ಬೀದರ್ ವಿಡಿಯೋಗಳಿಗೆ ಚಂದಾದಾರರಾಗಿ
ಬೀದರ್: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ರೂಪಿಸಿರುವ ಯೋಜನೆಗಳನ್ನು ಮೋರ್ಚಾದ ಪದಾಧಿಕಾರಿಗಳು ಅಧ್ಯಯನ ನಡೆಸಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಕೆಎಸ್ಐಐಡಿಸಿ ನಿಗಮ ರಾಜ್ಯಾಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಕಾಡವಾದ ಗ್ರಾಮದಲ್ಲಿ ಹಮ್ಮಿಕೊಂಡ ಬಿಜೆಪಿ ದಕ್ಷಿಣ ಮಂಡಲ ರೈತ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬೆಲ್ಹಾಳೆ, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರಕಾರ ಇರುವುದರಿಂದ ಅತಿಸಣ್ಣ, ಪ್ರಗತಿಪರ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿ ಜಿಲ್ಲಾ ಮೊರ್ಚಾದ ಮೂಲಕ ರಾಜ್ಯ ಘಟಕಕ್ಕೆ ಮುಟ್ಟಿಸುವ ಕೆಲಸ ಮಾಡಬೇಕ ಎಂದು ಕರೆ ನೀಡಿದರು.
ರೈತರ ಅನುಕೂಲಕ್ಕಾಗಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅನೇಕ ರೈತಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತರು ಅವುಗಳ ಸದುಪಯೋಗ ಪಡೆದುಕೊಳ್ಳವಂತೆ ಸಲಹೆ ನೀಡಬೇಕು ಎಂದು ಬೆಲ್ಹಾಳೆ ಮನವಿ ಮಾಡಿದರು.
ಕೃಷಿ ತಿದ್ದುಪಡಿ ಕಾಯ್ದೆ ರೈತರ ಹಿತದೃಷ್ಟಿಯಿಂದ ಜಾರಿಗೆ ತಂದಿದ್ದು ವಿರೋಧ ಪಕ್ಷದವರು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಯಾವ ರೈತರೂ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಹೀಗಾಗಿ ರೈತ ಮೊರ್ಚಾದ ಪದಾಧಿಕಾರಿಗಳು ಕೃಷಿ ಕಾಯ್ದೆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಬೆಲ್ಹಾಳೆ ಸೂಚಿಸಿದರು.
ಬೀದರ್ ದಕ್ಷಿಣ ಕ್ಷೇತ್ರದ ಕಾಡವಾದ ಗ್ರಾಮದಲ್ಲಿ ಹಮ್ಮಿಕೊಂಡ ಬಿಜೆಪಿ ದಕ್ಷಿಣ ಮಂಡಲ ರೈತ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬೆಲ್ಹಾಳೆ, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರಕಾರ ಇರುವುದರಿಂದ ಅತಿಸಣ್ಣ, ಪ್ರಗತಿಪರ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿ ಜಿಲ್ಲಾ ಮೊರ್ಚಾದ ಮೂಲಕ ರಾಜ್ಯ ಘಟಕಕ್ಕೆ ಮುಟ್ಟಿಸುವ ಕೆಲಸ ಮಾಡಬೇಕ ಎಂದು ಕರೆ ನೀಡಿದರು.
ರೈತರ ಅನುಕೂಲಕ್ಕಾಗಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅನೇಕ ರೈತಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತರು ಅವುಗಳ ಸದುಪಯೋಗ ಪಡೆದುಕೊಳ್ಳವಂತೆ ಸಲಹೆ ನೀಡಬೇಕು ಎಂದು ಬೆಲ್ಹಾಳೆ ಮನವಿ ಮಾಡಿದರು.
ಕೃಷಿ ತಿದ್ದುಪಡಿ ಕಾಯ್ದೆ ರೈತರ ಹಿತದೃಷ್ಟಿಯಿಂದ ಜಾರಿಗೆ ತಂದಿದ್ದು ವಿರೋಧ ಪಕ್ಷದವರು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಯಾವ ರೈತರೂ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಹೀಗಾಗಿ ರೈತ ಮೊರ್ಚಾದ ಪದಾಧಿಕಾರಿಗಳು ಕೃಷಿ ಕಾಯ್ದೆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಬೆಲ್ಹಾಳೆ ಸೂಚಿಸಿದರು.