ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದ್ದು ಮುಜುಗರ ತರಿಸಿದೆ ; ಡಾ.ಕೆ ಸುಧಾಕರ್
1108 views
ಚಿಕ್ಕಬಳ್ಳಾಪುರ ವಿಡಿಯೋಗಳಿಗೆ ಚಂದಾದಾರರಾಗಿಚಿಕ್ಕಬಳ್ಳಾಪುರ ; ಬಿಜೆಪಿ ಪಕ್ಷ ತನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳದಿರುವ ಬಗ್ಗೆ ನನಗೂ ಬೇಸರವಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿರೋಧ ಪಕ್ಷ ನಾಯಕನಿಲ್ಲದೆ ಬಜೆಟ್ ಅಧಿವೇಶನ ನಡೆದಿದೆ. ಹೀಗೆ ಆಗಬಾರದಿತ್ತು. ಅಧಿವೇಶನಕ್ಕೆ ವಿರೋಧ ಪಕ್ಷದ ನಾಯಕನಿಲ್ಲದೆ ಹೋಗುವುದು ಸಾಕಷ್ಟು ಮುಜುಗರಕ್ಕೆ ಎಡೆ ಮಾಡಿಕೊಡುತ್ತದೆ ಎಂದರು.
ಅಧಿವೇಶನಕ್ಕೂ ಮುನ್ನವೇ ವಿರೋಧ ಪಕ್ಷದ ನಾಯಕನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು. ಎಂತಹ ಚುನಾವಣೆ ಫಲಿತಾಂಶವೇ ಬಂದಿರಲಿ. ಆದರೆ ಪ್ರತಿಪಕ್ಷದ ನಾಯಕನ್ನು ಆಯ್ಕೆ ಮಾಡಬೇಕಿತ್ತು. ಆದಷ್ಟು ಬೇಗ ನಮ್ಮ ನಾಯಕರು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆಯಲ್ಲಿ ನೀವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಯಾವುದೇ ಸೂಚನೆಗೆ ಬದ್ಧನಾಗಿದ್ದು, ಪಕ್ಷ ಹೇಳಿದಂತೆ ನಡೆಯುತ್ತೇನೆ. ನಾನು ಯಾರ ಬಳಿಯೂ ನಾನು ಏನನ್ನು ಕೇಳಲ್ಲ. ಪಕ್ಷ ಹೇಳಿದ್ದಷ್ಟನ್ನು ಮಾಡುತ್ತೇನೆ ಎಂದು ತಿಳಿಸಿದರು.
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಶೇ.3ರಷ್ಟು ಮತ ಪ್ರಮಾಣ ಇತ್ತು. ಆದರೆ ಈಗ ಅದು ಶೇ.25ಕ್ಕೆ ಹೋಗಿದೆ. ಅದು ಮುಂದಿನ ದಿನಗಳಲ್ಲಿ ಮುಂದಕ್ಕೆ ಹೋಗಲಿದೆ. ನಮ್ಮ ಮೂರು ಜಿಲ್ಲೆಗಳಲ್ಲಿ ಬಿಜೆಪಿಯನ್ನು ಬೆಳೆಸುವುದು ದೊಡ್ಡ ಕೆಲಸವಾಗದು ಎಂದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿರೋಧ ಪಕ್ಷ ನಾಯಕನಿಲ್ಲದೆ ಬಜೆಟ್ ಅಧಿವೇಶನ ನಡೆದಿದೆ. ಹೀಗೆ ಆಗಬಾರದಿತ್ತು. ಅಧಿವೇಶನಕ್ಕೆ ವಿರೋಧ ಪಕ್ಷದ ನಾಯಕನಿಲ್ಲದೆ ಹೋಗುವುದು ಸಾಕಷ್ಟು ಮುಜುಗರಕ್ಕೆ ಎಡೆ ಮಾಡಿಕೊಡುತ್ತದೆ ಎಂದರು.
ಅಧಿವೇಶನಕ್ಕೂ ಮುನ್ನವೇ ವಿರೋಧ ಪಕ್ಷದ ನಾಯಕನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು. ಎಂತಹ ಚುನಾವಣೆ ಫಲಿತಾಂಶವೇ ಬಂದಿರಲಿ. ಆದರೆ ಪ್ರತಿಪಕ್ಷದ ನಾಯಕನ್ನು ಆಯ್ಕೆ ಮಾಡಬೇಕಿತ್ತು. ಆದಷ್ಟು ಬೇಗ ನಮ್ಮ ನಾಯಕರು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆಯಲ್ಲಿ ನೀವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಯಾವುದೇ ಸೂಚನೆಗೆ ಬದ್ಧನಾಗಿದ್ದು, ಪಕ್ಷ ಹೇಳಿದಂತೆ ನಡೆಯುತ್ತೇನೆ. ನಾನು ಯಾರ ಬಳಿಯೂ ನಾನು ಏನನ್ನು ಕೇಳಲ್ಲ. ಪಕ್ಷ ಹೇಳಿದ್ದಷ್ಟನ್ನು ಮಾಡುತ್ತೇನೆ ಎಂದು ತಿಳಿಸಿದರು.
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಶೇ.3ರಷ್ಟು ಮತ ಪ್ರಮಾಣ ಇತ್ತು. ಆದರೆ ಈಗ ಅದು ಶೇ.25ಕ್ಕೆ ಹೋಗಿದೆ. ಅದು ಮುಂದಿನ ದಿನಗಳಲ್ಲಿ ಮುಂದಕ್ಕೆ ಹೋಗಲಿದೆ. ನಮ್ಮ ಮೂರು ಜಿಲ್ಲೆಗಳಲ್ಲಿ ಬಿಜೆಪಿಯನ್ನು ಬೆಳೆಸುವುದು ದೊಡ್ಡ ಕೆಲಸವಾಗದು ಎಂದರು.