ನನಗೆ ಟಿಕೆಟ್ ಕೊಡಿಸಲು ಎಂಸಿ ಸುಧಾಕರ್ ತುಂಬಾ ಕಷ್ಟಪಟ್ಟಿದ್ದಾರೆ, ಅವರು ಸಿಎಂ ಆಗಬೇಕು; ಪ್ರದೀಪ್ ಈಶ್ವರ್
1067 views
ಚಿಕ್ಕಬಳ್ಳಾಪುರ ವಿಡಿಯೋಗಳಿಗೆ ಚಂದಾದಾರರಾಗಿಚಿಕ್ಕಬಳ್ಳಾಪುರ: ಬಯಲು ಸೀಮೆಯ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಆಗಬೇಕೆಂಬುದೇ ನನ್ನ ಆಸೆ, ಆಗೇ ಆಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕಿನ ಆವಲಗುರ್ಕಿ ಪಂಚಾಯಿತಿಯಲ್ಲಿ ವ್ಯಾಪ್ತಿಯ ಗೋಮಾಳದಲ್ಲಿ ಗಿಡನೆಟ್ಟು ಮಾತನಾಡಿದ ಅವರು, ಕೃಷ್ಣಬೈರೇಗೌಡ, ಎಂ.ಸಿ.ಸುಧಾಕರ್, ಶಿವಶಂಕರರೆಡ್ಡಿ ಇವರಲ್ಲೊಬ್ಬರು ಮುಖ್ಯಮಂತ್ರಿಯಾಗಬೇಕೆಂದು ನನ್ನ ಆಸೆ. ಯಾರಾದರೊಬ್ಬರು ಆಗೇ ಆಗುತ್ತಾರೆ ಎಂದು ತಿಳಿಸಿದರು.
ಸಚಿವರಾಗಿರುವ ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಅವರು ನನಗೆ ಟಿಕೆಟ್ ಕೊಡಿಸಲು ಭಾರೀ ಶ್ರಮ ಹಾಕಿದ್ದಾರೆ. ಅವರಿಗೆ ಉನ್ನತ ಸ್ಥಾನ ಸಿಗಬೇಕೆಂದು ನಾನು ಬಯಸುತ್ತೇನೆ. ಎಂ.ಸಿ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರಾಗಲಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದರು. ಈ ಬಾರಿ ಪರಿಸರ ದಿನಾಚರಣೆಯ ಅಂಗವಾಗಿ ಈಶಾ ಫೌಂಡೇಶನ್ನಿಂದ 10 ಸಾವಿರ ಹಾಗೂ ಅರಣ್ಯ ಇಲಾಖೆಯಿಂದ 5 ಸಾವಿರ ಗಿಡಗಳನ್ನು ನೆಟ್ಟು, ಒಂದು ಉತ್ತಮ ಪರಿಸರ ನಿರ್ಮಾಣ ಮಾಡಲು ಒತ್ತು ನೀಡಿದ್ದೇವೆ. ಇದು ಇದೇ ರೀತಿ ಕ್ಷೇತ್ರದಾದ್ಯಂತ ಹಸಿರು ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕಿನ ಆವಲಗುರ್ಕಿ ಪಂಚಾಯಿತಿಯಲ್ಲಿ ವ್ಯಾಪ್ತಿಯ ಗೋಮಾಳದಲ್ಲಿ ಗಿಡನೆಟ್ಟು ಮಾತನಾಡಿದ ಅವರು, ಕೃಷ್ಣಬೈರೇಗೌಡ, ಎಂ.ಸಿ.ಸುಧಾಕರ್, ಶಿವಶಂಕರರೆಡ್ಡಿ ಇವರಲ್ಲೊಬ್ಬರು ಮುಖ್ಯಮಂತ್ರಿಯಾಗಬೇಕೆಂದು ನನ್ನ ಆಸೆ. ಯಾರಾದರೊಬ್ಬರು ಆಗೇ ಆಗುತ್ತಾರೆ ಎಂದು ತಿಳಿಸಿದರು.
ಸಚಿವರಾಗಿರುವ ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಅವರು ನನಗೆ ಟಿಕೆಟ್ ಕೊಡಿಸಲು ಭಾರೀ ಶ್ರಮ ಹಾಕಿದ್ದಾರೆ. ಅವರಿಗೆ ಉನ್ನತ ಸ್ಥಾನ ಸಿಗಬೇಕೆಂದು ನಾನು ಬಯಸುತ್ತೇನೆ. ಎಂ.ಸಿ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರಾಗಲಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದರು. ಈ ಬಾರಿ ಪರಿಸರ ದಿನಾಚರಣೆಯ ಅಂಗವಾಗಿ ಈಶಾ ಫೌಂಡೇಶನ್ನಿಂದ 10 ಸಾವಿರ ಹಾಗೂ ಅರಣ್ಯ ಇಲಾಖೆಯಿಂದ 5 ಸಾವಿರ ಗಿಡಗಳನ್ನು ನೆಟ್ಟು, ಒಂದು ಉತ್ತಮ ಪರಿಸರ ನಿರ್ಮಾಣ ಮಾಡಲು ಒತ್ತು ನೀಡಿದ್ದೇವೆ. ಇದು ಇದೇ ರೀತಿ ಕ್ಷೇತ್ರದಾದ್ಯಂತ ಹಸಿರು ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.