ಚಿಕ್ಕಮಗಳೂರು: 'ಗಣಪತಿ ನಮ್ಮ ಸಂಸ್ಕೃತಿಯಲ್ಲ...' ಸಾಣೇಹಳ್ಳಿ ಶ್ರೀ ಹೇಳಿಕೆಗೆ ಪ್ರಮೋದ್ ಮುತಾಲಿಕ್ ವಿರೋಧ
1134 views
ಚಿಕ್ಕಮಗಳೂರು ವಿಡಿಯೋಗಳಿಗೆ ಚಂದಾದಾರರಾಗಿಚಿಕ್ಕಮಗಳೂರು: ಗಣೇಶನ ಕುರಿತು ಸಾಣೇಹಳ್ಳಿ ಮಠದ ಪಂಡಿತಾರಾಧ್ಯಶ್ರೀ ಅವರ ಹೇಳಿಕೆಯನ್ನು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧಿಸಿದ್ದಾರೆ. 'ಸಣ್ಣ ಮಟ್ಟದ ಹೇಳಿಕೆ ಕೊಟ್ಟು ವಿವಾದ ಸೃಷ್ಟಿಸಿದ್ದಾರೆ' ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ದತ್ತಮಾಲಾ ಅಭಿಯಾನದ ಹಿನ್ನೆಲೆ ನಗರದಲ್ಲಿ ಶ್ರೀರಾಮಸೇನೆ ವತಿಯಿಂದ ಶಂಕರಮಠದಿಂದ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆ ಪ್ರಮೋದ್ ಮುತಾಲಿಕ್, ವಿವಿಧ ಸ್ವಾಮೀಜಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾದರು.
''ಪಂಡಿತಾರಾಧ್ಯರ ಬಗ್ಗೆ ಅಪಾರವಾದ ಗೌರವಯಿದೆ. ನಾಟಕ, ಉತ್ಸವದ ಮೂಲಕ ಸಾಮಾಜಿಕವಾಗಿ ಬಹಳ ದೊಡ್ಡ ಕ್ರಾಂತಿ ಮಾಡಿದ ಮಠ ಅದು. ಅವರು ಸಣ್ಣ ಹೇಳಿಕೆ ನೀಡಿ ವಿವಾದಸೃಷ್ಟಿ ಮಾಡಿದ್ದು ಸರಿಯಲ್ಲ, ಅವರಿಗೆ ಶೋಭೆ ತರಲ್ಲ. ಸಾವಿರಾರು ವರ್ಷಗಳಿಂದ ಈ ದೇಶದಲ್ಲಿ ಶುಭಕಾರ್ಯಗಳಿಗೆ ಮೊದಲ ಪೂಜೆ ಗಣೇಶನಿಗೆ ಮಾಡಲಾಗುತ್ತಿದೆ. ಗಣೇಶನ ಅಪ್ಪ ಶಿವನನ್ನ ಪೂಜೆ ಮಾಡ್ತೀರಾ, ಗಣೇಶ ಬೇಡವೇ, ನಿಮ್ಮ ಲಾಜಿಕ್ ಏನು?'' ಎಂದು ಪ್ರಶ್ನಿಸಿದ್ದಾರೆ.
''ವಚನಗಳನ್ನ, ಹೇಳಬೇಕು, ಉಳಿಸಬೇಕು ಎಂಬ ಹೇಳಿಕೆಗೆ ನಮ್ಮ ವಿರೋಧವಿಲ್ಲ. ಗಣೇಶನ ಪೂಜೆಗೆ ಏಕೆ ವಿರೋಧ ಮಾಡ್ತೀರಾ, ತಪ್ಪು ಅಂತ ಹೇಳ್ತೀರಾ, ಮೂಢ ನಂಬಿಕೆ ಅಂತ ಏಕೆ ಹೇಳ್ತೀರಾ. ಸಾವಿರಾರು ವರ್ಷಗಳ ನಂಬಿಕೆ ವಿರೋಧಿಸೋದು ಸಂವಿಧಾನ ವಿರೋಧಿಯಾಗುತ್ತದೆ. ಸಾರ್ವಜನಿಕವಾಗಿ ಒಂದು ನಂಬಿಕೆ ಘಾಸಿಗೊಳಿಸೋದು ಗುರುಗಳೇ ನಿಮಗೆ ಶೋಭೆ ತರಲ್ಲ, ನಿಮ್ಮ ಹೇಳಿಕೆ ಹಿಂಪಡೆಯಿರಿ'' ಎಂದು ಮುತಾಲಿಕ್ ಆಗ್ರಹಿಸಿದರು.
ಚಿಕ್ಕಮಗಳೂರಿನಲ್ಲಿ ದತ್ತಮಾಲಾ ಅಭಿಯಾನದ ಹಿನ್ನೆಲೆ ನಗರದಲ್ಲಿ ಶ್ರೀರಾಮಸೇನೆ ವತಿಯಿಂದ ಶಂಕರಮಠದಿಂದ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆ ಪ್ರಮೋದ್ ಮುತಾಲಿಕ್, ವಿವಿಧ ಸ್ವಾಮೀಜಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾದರು.
''ಪಂಡಿತಾರಾಧ್ಯರ ಬಗ್ಗೆ ಅಪಾರವಾದ ಗೌರವಯಿದೆ. ನಾಟಕ, ಉತ್ಸವದ ಮೂಲಕ ಸಾಮಾಜಿಕವಾಗಿ ಬಹಳ ದೊಡ್ಡ ಕ್ರಾಂತಿ ಮಾಡಿದ ಮಠ ಅದು. ಅವರು ಸಣ್ಣ ಹೇಳಿಕೆ ನೀಡಿ ವಿವಾದಸೃಷ್ಟಿ ಮಾಡಿದ್ದು ಸರಿಯಲ್ಲ, ಅವರಿಗೆ ಶೋಭೆ ತರಲ್ಲ. ಸಾವಿರಾರು ವರ್ಷಗಳಿಂದ ಈ ದೇಶದಲ್ಲಿ ಶುಭಕಾರ್ಯಗಳಿಗೆ ಮೊದಲ ಪೂಜೆ ಗಣೇಶನಿಗೆ ಮಾಡಲಾಗುತ್ತಿದೆ. ಗಣೇಶನ ಅಪ್ಪ ಶಿವನನ್ನ ಪೂಜೆ ಮಾಡ್ತೀರಾ, ಗಣೇಶ ಬೇಡವೇ, ನಿಮ್ಮ ಲಾಜಿಕ್ ಏನು?'' ಎಂದು ಪ್ರಶ್ನಿಸಿದ್ದಾರೆ.
''ವಚನಗಳನ್ನ, ಹೇಳಬೇಕು, ಉಳಿಸಬೇಕು ಎಂಬ ಹೇಳಿಕೆಗೆ ನಮ್ಮ ವಿರೋಧವಿಲ್ಲ. ಗಣೇಶನ ಪೂಜೆಗೆ ಏಕೆ ವಿರೋಧ ಮಾಡ್ತೀರಾ, ತಪ್ಪು ಅಂತ ಹೇಳ್ತೀರಾ, ಮೂಢ ನಂಬಿಕೆ ಅಂತ ಏಕೆ ಹೇಳ್ತೀರಾ. ಸಾವಿರಾರು ವರ್ಷಗಳ ನಂಬಿಕೆ ವಿರೋಧಿಸೋದು ಸಂವಿಧಾನ ವಿರೋಧಿಯಾಗುತ್ತದೆ. ಸಾರ್ವಜನಿಕವಾಗಿ ಒಂದು ನಂಬಿಕೆ ಘಾಸಿಗೊಳಿಸೋದು ಗುರುಗಳೇ ನಿಮಗೆ ಶೋಭೆ ತರಲ್ಲ, ನಿಮ್ಮ ಹೇಳಿಕೆ ಹಿಂಪಡೆಯಿರಿ'' ಎಂದು ಮುತಾಲಿಕ್ ಆಗ್ರಹಿಸಿದರು.