ಹಿರಿಯೂರು: ಮಧ್ಯರಾತ್ರಿಯಲ್ಲಿ ಕುವೆಂಪು, ನಟ ಪುನೀತ್ ಪುತ್ಥಳಿ ತೆರವುಗೊಳಿಸಿದ ನಗರಸಭೆ ಅಧಿಕಾರಿಗಳು
1322 views
ಚಿತ್ರದುರ್ಗ ವಿಡಿಯೋಗಳಿಗೆ ಚಂದಾದಾರರಾಗಿಹಿರಿಯೂರು: ನಗರದಲ್ಲಿ ಪ್ರತಿಷ್ಠಾಪಿಸಿದ್ದ ಮಹನೀಯರಿಬ್ಬರ ಪುತ್ಥಳಿಗಳನ್ನು ನಗರಸಭೆ ಅಧಿಕಾರಿಗಳು ರಾತ್ರೋರಾತ್ರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಇತ್ತೀಚಿಗಷ್ಟೇ ಅಂದರೆ ಅಕ್ಟೋಬರ್ 3ರಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ನಿರ್ಮಾಣ ಹಾಗೂ ಇಂದಿರಾ ಕ್ಯಾಂಟಿನ್ ಬಳಿ ನಟ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿಯನ್ನು ರಾತ್ರೋರಾತ್ರಿ ನಿರ್ಮಾಣ ಮಾಡಿ ಎರಡು ಪ್ರತಿಮೆಗಳಿಗೆ ಬಟ್ಟೆ ಸುತ್ತಿದ್ದರು. ಬೆಳಗಾಗುವಷ್ಟರಲ್ಲಿ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದರೆ ಮತ್ತೊಂದು ಕಡೆ ಈ ಪ್ರತಿಮೆಗಳ ನಿರ್ಮಾಣದಿಂದ ನಗರಸಭೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು. ನಂತರ ಕರವೇ ಕಾರ್ಯಕರ್ತರು ಹಾಗೂ ನಗರಸಭೆ ಅಧಿಕಾರಿಗಳು ಸಭೆ ನಡೆಸಿದ್ದರು.
ನಾಲ್ಕೈದು ದಿನಗಳ ಹಿಂದಷ್ಟೇ ಅಂದರೆ, ಅಕ್ಟೋಬರ್ 22ರಂದು ಭಾನುವಾರ ಕರವೇ ಕಾರ್ಯಕರ್ತರು ತರಾತುರಿಯಲ್ಲಿ ಎರಡು ಪ್ರತಿಮೆಗಳಿಗೆ ಪೂಜೆ ಮಾಡಿ, ಪುಷ್ಪಮಾಲಿಕೆ ಹಾಕಿ ಅನಾವರಣಗೊಳಿಸಿದ್ದರು. ಇದೀಗ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ರಾತ್ರೋರಾತ್ರಿ ಆ ಮಹಾನೀಯರಿಬ್ಬರ ಪುತ್ಥಳಿಗಳನ್ನು ತೆರವುಗೊಳಿಸಿದ್ದಾರೆ.
ಎರಡು ಪ್ರತಿಮೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಷ್ಠಾಪಿಸಿದ್ದರು. ಇದೀಗ ಅಧಿಕಾರಿಗಳು ಏಕಾಏಕಿ ಪುತ್ತಳಿ ತೆರವುಗೊಳಿಸಿದ್ದಾರೆ. ಮಾಹಿತಿ ತಿಳಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ಜೊತೆ ಕೆಲಕಾಲ ವಾಗ್ವಾದ ನಡೆಸಿದ್ದಾರೆ. ಆದರೆ ಅಧಿಕಾರಿಗಳು ಯಾರಿಗೂ ಕ್ಯಾರೇ ಎಂದಿಲ್ಲ. ನಮಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ಥಳಿಗಳ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ದಾದಾಪಿರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಅಧಿಕಾರಿಗಳಿಂದಲೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಇತ್ತೀಚಿಗಷ್ಟೇ ಅಂದರೆ ಅಕ್ಟೋಬರ್ 3ರಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ನಿರ್ಮಾಣ ಹಾಗೂ ಇಂದಿರಾ ಕ್ಯಾಂಟಿನ್ ಬಳಿ ನಟ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿಯನ್ನು ರಾತ್ರೋರಾತ್ರಿ ನಿರ್ಮಾಣ ಮಾಡಿ ಎರಡು ಪ್ರತಿಮೆಗಳಿಗೆ ಬಟ್ಟೆ ಸುತ್ತಿದ್ದರು. ಬೆಳಗಾಗುವಷ್ಟರಲ್ಲಿ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದರೆ ಮತ್ತೊಂದು ಕಡೆ ಈ ಪ್ರತಿಮೆಗಳ ನಿರ್ಮಾಣದಿಂದ ನಗರಸಭೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು. ನಂತರ ಕರವೇ ಕಾರ್ಯಕರ್ತರು ಹಾಗೂ ನಗರಸಭೆ ಅಧಿಕಾರಿಗಳು ಸಭೆ ನಡೆಸಿದ್ದರು.
ನಾಲ್ಕೈದು ದಿನಗಳ ಹಿಂದಷ್ಟೇ ಅಂದರೆ, ಅಕ್ಟೋಬರ್ 22ರಂದು ಭಾನುವಾರ ಕರವೇ ಕಾರ್ಯಕರ್ತರು ತರಾತುರಿಯಲ್ಲಿ ಎರಡು ಪ್ರತಿಮೆಗಳಿಗೆ ಪೂಜೆ ಮಾಡಿ, ಪುಷ್ಪಮಾಲಿಕೆ ಹಾಕಿ ಅನಾವರಣಗೊಳಿಸಿದ್ದರು. ಇದೀಗ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ರಾತ್ರೋರಾತ್ರಿ ಆ ಮಹಾನೀಯರಿಬ್ಬರ ಪುತ್ಥಳಿಗಳನ್ನು ತೆರವುಗೊಳಿಸಿದ್ದಾರೆ.
ಎರಡು ಪ್ರತಿಮೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಷ್ಠಾಪಿಸಿದ್ದರು. ಇದೀಗ ಅಧಿಕಾರಿಗಳು ಏಕಾಏಕಿ ಪುತ್ತಳಿ ತೆರವುಗೊಳಿಸಿದ್ದಾರೆ. ಮಾಹಿತಿ ತಿಳಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ಜೊತೆ ಕೆಲಕಾಲ ವಾಗ್ವಾದ ನಡೆಸಿದ್ದಾರೆ. ಆದರೆ ಅಧಿಕಾರಿಗಳು ಯಾರಿಗೂ ಕ್ಯಾರೇ ಎಂದಿಲ್ಲ. ನಮಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ಥಳಿಗಳ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ದಾದಾಪಿರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಅಧಿಕಾರಿಗಳಿಂದಲೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ