ಅಕ್ರಮ-ಸಕ್ರಮ ಯೋಜನೆಯಲ್ಲಿ ಹಣ ಪಾವತಿ 4 ವರ್ಷ, ಇನ್ನೂ ರೈತರ ಜಮೀನಿಗೆ ಒದಗಿಸಿಲ್ಲ ವಿದ್ಯುತ್ ಪರಿವರ್ತಕ
1203 views
ಚಿತ್ರದುರ್ಗ ವಿಡಿಯೋಗಳಿಗೆ ಚಂದಾದಾರರಾಗಿಹಿರಿಯೂರು : ಅಕ್ರಮ, ಸಕ್ರಮ ಯೋಜನೆಯಲ್ಲಿ ಪರಿವರ್ತಕಗಳನ್ನು ಅಳವಡಿಸಬೇಕು ಮತ್ತು ಇಲಾಖೆಯಲ್ಲಿ ನಡೆದಿರುವ ಹಗರಣಗಳ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಬೆಸ್ಕಾಂ ಇಲಾಖೆ ಮುಂಭಾಗ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಪ್ರತಿಭಟನೆ ಕುರಿತು ರೈತ ಸಂಘ ಅಧ್ಯಕ್ಷ ಕೆ ಟಿ ತಿಪ್ಪೇಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಅಕ್ರಮ-ಸಕ್ರಮ ಯೋಜನೆಯಲ್ಲಿ ಹಣ ತುಂಬಿ ನಾಲ್ಕು ವರ್ಷ ಕಳೆಯುತ್ತಾ ಬಂದರೂ ಸಹ ರೈತರಿಗೆ ಪರಿವರ್ತಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ಎಂದರು. ಕಳೆದ 2023 ರಲ್ಲಿ 24 ಕೋಟಿ ಹಣ ಈ ಯೋಜನೆಗೆ ಬಂದಿದ್ದು ಹೊಸ ಸರ್ಕಾರ ಬಂದಾಗ ಹಣ ವಾಪಸ್ ಪಡೆಯಲಾಗಿತ್ತು. ಈಗ ಈ ಯೋಜನೆಗೆ ಸುಮಾರು 50 ಕೋಟಿ ಹಣ ಅಂದಾಜಿಸಲಾಗಿದ್ದು ಶೀಘ್ರ ಅಷ್ಟು ಹಣವನ್ನು ಬಿಡುಗಡೆ ಮಾಡಿ ಸ್ಥಳೀಯ ಗುತ್ತಿಗೆದಾರರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಎರಡು ತಿಂಗಳೊಳಗಾಗಿ ಎಲ್ಲಾ ರೈತರಿಗೂ ಪರಿವರ್ತಕವನ್ನು ಅಳವಡಿಸಬೇಕು. ಅಕ್ರಮ ಸಕ್ರಮ ಯೋಜನೆಯಲ್ಲಿ ಸುಮಾರು 71 ಕಾಮಗಾರಿಗಳಿಗೆ ಕಾರ್ಯಾದೇಶ ನೀಡದೆ ಕಾಮಗಾರಿ ನಡೆಸಿರುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದ್ದಾರೆ.
ಹಿರಿಯ ರೈತ ಹೋರಾಟಗಾರ ಆಲೂರು ಸಿದ್ದರಾಮಣ್ಣ ಮಾತನಾಡಿ ತ್ರಿಫೇಸ್ ವಿದ್ಯುತ್ ಸರಬರಾಜಿನಲ್ಲಿ ತುಂಬಾ ಕಳಪೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು ದಿನಕ್ಕೆ 7 ಗಂಟೆ ಸರಾಸರಿ ವಿದ್ಯುತ್ ಪೂರೈಸಬೇಕು. ಪರಿವರ್ತಕಗಳು ಸುಟ್ಟುಹೋದಲ್ಲಿ 72 ಗಂಟೆಯೊಳಗೆ ಟಿಸಿ ಒದಗಿಸಬೇಕು. ಇಲಾಖೆಯ ವಾಹನದಲ್ಲಿ ಗುಣಮಟ್ಟದ ಪರಿವರ್ತಕವನ್ನು ರೈತರ ಜಮೀನಿಗೆ ಸಾಗಿಸಬೇಕು. ಮಾಡ್ರನ್ ವಿಲೇಜ್ ಕಾಮಗಾರಿಯಲ್ಲಿ ಭಾರೀ ಹಗರಣ ನಡೆದಿದೆ ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ರಂಗಸ್ವಾಮಿ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ಬಬ್ಬೂರು ಫಾರಂ ಶಿವಣ್ಣ, ರಂಗಜ್ಜ, ಮೀಸೆ, ಗೌಡಪ್ಪ , ರಾಮಣ್ಣ, ಮಂಜುನಾಥ್, ಕಾಂತರಾಜ್, ಶಿವಣ್ಣ,ಜಗನ್ನಾಥ್, ಕೆಂಚಪ್ಪ, ರಾಮಕೃಷ್ಣಪ್ಪ , ತಿಮ್ಮಯ್ಯ, ತಿಪ್ಪೇಸ್ವಾಮಿ, ಮೆಹಬೂಬ್, ನಾಗರಾಜಪ್ಪ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಈ ಕುರಿತು ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಡಿ. ರಾಮಚಂದ್ರ ಮಾತನಾಡಿ, ಅಕ್ರಮ ಸಕ್ರಮ ಯೋಜನೆಯ ಹಣ ಮುಂಜೂರು ಆಗಿದೆ. ಹಂತ ಹಂತವಾಗಿ ಮೂರು ತಿಂಗಳ ಒಳಗಾಗಿ ಎಲ್ಲಾ ಕೆಲಸಗಳನ್ನು ಮುಗಿಸುವ ಪ್ರಯತ್ನ ಮಾಡುತ್ತೇವೆ. ಮುಂದಿನ ವಾರ ಮುಖ್ಯ ಇಂಜಿನಿಯರ್ ರವರನ್ನು ಕರೆಸಿ ಸಭೆ ನಡೆಸೋಣ ಎಂದರು
ಪ್ರತಿಭಟನೆ ಕುರಿತು ರೈತ ಸಂಘ ಅಧ್ಯಕ್ಷ ಕೆ ಟಿ ತಿಪ್ಪೇಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಅಕ್ರಮ-ಸಕ್ರಮ ಯೋಜನೆಯಲ್ಲಿ ಹಣ ತುಂಬಿ ನಾಲ್ಕು ವರ್ಷ ಕಳೆಯುತ್ತಾ ಬಂದರೂ ಸಹ ರೈತರಿಗೆ ಪರಿವರ್ತಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ಎಂದರು. ಕಳೆದ 2023 ರಲ್ಲಿ 24 ಕೋಟಿ ಹಣ ಈ ಯೋಜನೆಗೆ ಬಂದಿದ್ದು ಹೊಸ ಸರ್ಕಾರ ಬಂದಾಗ ಹಣ ವಾಪಸ್ ಪಡೆಯಲಾಗಿತ್ತು. ಈಗ ಈ ಯೋಜನೆಗೆ ಸುಮಾರು 50 ಕೋಟಿ ಹಣ ಅಂದಾಜಿಸಲಾಗಿದ್ದು ಶೀಘ್ರ ಅಷ್ಟು ಹಣವನ್ನು ಬಿಡುಗಡೆ ಮಾಡಿ ಸ್ಥಳೀಯ ಗುತ್ತಿಗೆದಾರರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಎರಡು ತಿಂಗಳೊಳಗಾಗಿ ಎಲ್ಲಾ ರೈತರಿಗೂ ಪರಿವರ್ತಕವನ್ನು ಅಳವಡಿಸಬೇಕು. ಅಕ್ರಮ ಸಕ್ರಮ ಯೋಜನೆಯಲ್ಲಿ ಸುಮಾರು 71 ಕಾಮಗಾರಿಗಳಿಗೆ ಕಾರ್ಯಾದೇಶ ನೀಡದೆ ಕಾಮಗಾರಿ ನಡೆಸಿರುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದ್ದಾರೆ.
ಹಿರಿಯ ರೈತ ಹೋರಾಟಗಾರ ಆಲೂರು ಸಿದ್ದರಾಮಣ್ಣ ಮಾತನಾಡಿ ತ್ರಿಫೇಸ್ ವಿದ್ಯುತ್ ಸರಬರಾಜಿನಲ್ಲಿ ತುಂಬಾ ಕಳಪೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು ದಿನಕ್ಕೆ 7 ಗಂಟೆ ಸರಾಸರಿ ವಿದ್ಯುತ್ ಪೂರೈಸಬೇಕು. ಪರಿವರ್ತಕಗಳು ಸುಟ್ಟುಹೋದಲ್ಲಿ 72 ಗಂಟೆಯೊಳಗೆ ಟಿಸಿ ಒದಗಿಸಬೇಕು. ಇಲಾಖೆಯ ವಾಹನದಲ್ಲಿ ಗುಣಮಟ್ಟದ ಪರಿವರ್ತಕವನ್ನು ರೈತರ ಜಮೀನಿಗೆ ಸಾಗಿಸಬೇಕು. ಮಾಡ್ರನ್ ವಿಲೇಜ್ ಕಾಮಗಾರಿಯಲ್ಲಿ ಭಾರೀ ಹಗರಣ ನಡೆದಿದೆ ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ರಂಗಸ್ವಾಮಿ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ಬಬ್ಬೂರು ಫಾರಂ ಶಿವಣ್ಣ, ರಂಗಜ್ಜ, ಮೀಸೆ, ಗೌಡಪ್ಪ , ರಾಮಣ್ಣ, ಮಂಜುನಾಥ್, ಕಾಂತರಾಜ್, ಶಿವಣ್ಣ,ಜಗನ್ನಾಥ್, ಕೆಂಚಪ್ಪ, ರಾಮಕೃಷ್ಣಪ್ಪ , ತಿಮ್ಮಯ್ಯ, ತಿಪ್ಪೇಸ್ವಾಮಿ, ಮೆಹಬೂಬ್, ನಾಗರಾಜಪ್ಪ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಈ ಕುರಿತು ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಡಿ. ರಾಮಚಂದ್ರ ಮಾತನಾಡಿ, ಅಕ್ರಮ ಸಕ್ರಮ ಯೋಜನೆಯ ಹಣ ಮುಂಜೂರು ಆಗಿದೆ. ಹಂತ ಹಂತವಾಗಿ ಮೂರು ತಿಂಗಳ ಒಳಗಾಗಿ ಎಲ್ಲಾ ಕೆಲಸಗಳನ್ನು ಮುಗಿಸುವ ಪ್ರಯತ್ನ ಮಾಡುತ್ತೇವೆ. ಮುಂದಿನ ವಾರ ಮುಖ್ಯ ಇಂಜಿನಿಯರ್ ರವರನ್ನು ಕರೆಸಿ ಸಭೆ ನಡೆಸೋಣ ಎಂದರು