ಗೆಲ್ಲಲು ಗ್ಯಾರಂಟಿಗಳಷ್ಟೇ ಸಾಲಲ್ಲ, ನಾಯಕತ್ವದ ವರ್ಚಸ್ಸು ಬೇಕು: ಎಂಪಿ ರೇಣುಕಾಚಾರ್ಯ
1100 views
ದಾವಣಗೆರೆ ವಿಡಿಯೋಗಳಿಗೆ ಚಂದಾದಾರರಾಗಿ''ಬಿಟ್ಟಿ ಭಾಗ್ಯಗಳು, ಭರವಸೆಗಳನ್ನು ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲಿ ಘೋಷಣೆ ಮಾಡಿದೆ. ಕರ್ನಾಟಕದಲ್ಲಿಯೇ ಗ್ಯಾರಂಟಿಗಳು ವಿಫಲಗೊಂಡಿವೆ. ಬರೀ ಭರವಸೆಗಳಿಂದಲೇ ಮತದಾರರನ್ನು ಸೆಳೆಯಲು ಸಾಧ್ಯವಿಲ್ಲ'' ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದರು.
ತೆಲಂಗಾಣದಲ್ಲಿಯೂ ಬಿಜೆಪಿ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿವೈ ವಿಜಯೇಂದ್ರ ನಡುವಿನ ಟೀಕೆಗಳ ಬಗ್ಗೆ ಮಾತನಾಡಿದರು. ''ಇದೇ ರೀತಿಯ ಗೊಂದಲ ಹಾಗೂ ಭಿನ್ನಾಭಿಪ್ರಾಯಗಳನ್ನು ಮಾಡಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರವನ್ನ ಕಳೆದುಕೊಂಡಿದ್ದೇವೆ. ಭಿನ್ನಾಭಿಪ್ರಾಯಗಳಿಂದ ಕಾಂಗ್ರೆಸ್ ನ 40% ಭ್ರಷ್ಟಾಚಾರದ ವಿರುದ್ಧ ಉತ್ತರ ನೀಡಲು ಆಗಲಿಲ್ಲ. ಸಂಘರ್ಷದಿಂದಾಗಿಯೇ ನಮಗೆ ಈ ಪರಿಸ್ಥಿತಿ ಬಂದಿದೆ. ಪ್ರತಿ ಬಾರಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದು ಯಡಿಯೂರಪ್ಪ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಮಾಡಿದ್ದಾರೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಹಾಗೂ ಲೋಕಸಭೆಯ 28 ಕ್ಷೇತ್ರಗಳಲ್ಲಿ ಗೆಲ್ಲುವ ಉದ್ದೇಶದಿಂದ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ಧಾರೆ'' ಎಂದರು.
''ದೇಶದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣಿವಿದೆ. ಪ್ರತಿ ಭಾರಿ ಟೀಕೆ ಮಾಡಿಕೊಂಡು ಹೋದರೆ ಪ್ರಯೋಜನವಿಲ್ಲ. ಇದನ್ನು ಯತ್ಯಾಳ್ ಅರ್ಥ ಮಾಡಿಕೊಳ್ಳಬೇಕು. ಹಿಂದೆ ನೀವು ಜೆಡಿಎಸ್ ಗೆ ಹೋದಾಗ ವಾಪಸ್ ಬಿಜೆಪಿಗೆ ಕರೆ ತಂದಿದ್ದೆ ಯಡಿಯೂರಪ್ಪ. ಯಡಿಯೂರಪ್ಪ ಕೂಡ ಪ್ರೀತಿಯಿಂದ ಪಕ್ಷಕ್ಕೆ ಬರ ಮಾಡಿಕೊಂಡಿದ್ದಾರೆ. ಅಲ್ಲದೇ, ವಿಜಯಪುರದಲ್ಲಿ ಸ್ಪರ್ಧೆಗೆ ಅವಕಾಶ ಕೂಡ ಮಾಡಿಕೊಟ್ಟಿದ್ದರು. ಇದನ್ನ ಯತ್ನಾಳ್ ಮರೆಯಬಾರದು. ನಾನು ಯತ್ನಾಳ್ ಬಗ್ಗೆ ಟೀಕೆ ಮಾಡಲ್ಲ'' ಎಂದು ಹೇಳಿದರು.
ತೆಲಂಗಾಣದಲ್ಲಿಯೂ ಬಿಜೆಪಿ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿವೈ ವಿಜಯೇಂದ್ರ ನಡುವಿನ ಟೀಕೆಗಳ ಬಗ್ಗೆ ಮಾತನಾಡಿದರು. ''ಇದೇ ರೀತಿಯ ಗೊಂದಲ ಹಾಗೂ ಭಿನ್ನಾಭಿಪ್ರಾಯಗಳನ್ನು ಮಾಡಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರವನ್ನ ಕಳೆದುಕೊಂಡಿದ್ದೇವೆ. ಭಿನ್ನಾಭಿಪ್ರಾಯಗಳಿಂದ ಕಾಂಗ್ರೆಸ್ ನ 40% ಭ್ರಷ್ಟಾಚಾರದ ವಿರುದ್ಧ ಉತ್ತರ ನೀಡಲು ಆಗಲಿಲ್ಲ. ಸಂಘರ್ಷದಿಂದಾಗಿಯೇ ನಮಗೆ ಈ ಪರಿಸ್ಥಿತಿ ಬಂದಿದೆ. ಪ್ರತಿ ಬಾರಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದು ಯಡಿಯೂರಪ್ಪ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಮಾಡಿದ್ದಾರೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಹಾಗೂ ಲೋಕಸಭೆಯ 28 ಕ್ಷೇತ್ರಗಳಲ್ಲಿ ಗೆಲ್ಲುವ ಉದ್ದೇಶದಿಂದ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ಧಾರೆ'' ಎಂದರು.
''ದೇಶದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣಿವಿದೆ. ಪ್ರತಿ ಭಾರಿ ಟೀಕೆ ಮಾಡಿಕೊಂಡು ಹೋದರೆ ಪ್ರಯೋಜನವಿಲ್ಲ. ಇದನ್ನು ಯತ್ಯಾಳ್ ಅರ್ಥ ಮಾಡಿಕೊಳ್ಳಬೇಕು. ಹಿಂದೆ ನೀವು ಜೆಡಿಎಸ್ ಗೆ ಹೋದಾಗ ವಾಪಸ್ ಬಿಜೆಪಿಗೆ ಕರೆ ತಂದಿದ್ದೆ ಯಡಿಯೂರಪ್ಪ. ಯಡಿಯೂರಪ್ಪ ಕೂಡ ಪ್ರೀತಿಯಿಂದ ಪಕ್ಷಕ್ಕೆ ಬರ ಮಾಡಿಕೊಂಡಿದ್ದಾರೆ. ಅಲ್ಲದೇ, ವಿಜಯಪುರದಲ್ಲಿ ಸ್ಪರ್ಧೆಗೆ ಅವಕಾಶ ಕೂಡ ಮಾಡಿಕೊಟ್ಟಿದ್ದರು. ಇದನ್ನ ಯತ್ನಾಳ್ ಮರೆಯಬಾರದು. ನಾನು ಯತ್ನಾಳ್ ಬಗ್ಗೆ ಟೀಕೆ ಮಾಡಲ್ಲ'' ಎಂದು ಹೇಳಿದರು.