ದಾವಣಗೆರೆಯಲ್ಲಿ ಮಳೆ ಅವಾಂತರ, ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ
1042 views
ದಾವಣಗೆರೆ ವಿಡಿಯೋಗಳಿಗೆ ಚಂದಾದಾರರಾಗಿದಾವಣಗೆರೆ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು, ವರುಣನ ಅವಾಂತರಕ್ಕೆ ರೈತರು ತತ್ತರಿಸಿ ಹೋಗಿದ್ದಾರೆ. ಫಸಲಿಗೆ ಬಂದಿದ್ದ ಬೆಳೆ ನೀರುಪಾಲಾಗಿದ್ದು ರೈತರು ಕಂಗಾಲಾಗಿದ್ದಾರೆ. ಇದೀಗ ಮಳೆಯಿಂದ ಹಾಳಾಗಿದ್ದ ರೈತರ ಜಮೀನಿಗೆ ಜಿಲ್ಲಾಧಿಕಾರಿ ಶಿವಾನಂದ ಭೇಟಿ ನೀಡಿ ರೈತರಿಗೆ ಪರಿಹಾರದ ಭರವಸೆ ಕೊಟ್ಟಿದ್ದಾರೆ.
ಚಿಕ್ಕತೊಗಲೇರಿ, ಹಿರೇತೊಗಲೇರಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮೇತ ತೆರಳಿ, ಮಳೆ ಹಾನಿ ಬಗ್ಗೆ ಪರಿಶೀಲಿಸಿದ್ದಾರೆ. ತಾಲೂಕಿನ ಚಿಕ್ಕ ತೊಗಲೇರಿ, ಹಿರೇ ತೊಗಲೇರಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭಾರೀ ಗಾಳಿ, ಜೋರು ಮಳೆಯಿಂದಾಗಿ ನೂರಾರು ಎಕರೆ ಭತ್ತ, ಹತ್ತಿ ಬೆಳೆಗಳು, ತೋಟದ ಬೆಳೆಗಳು ಹಾನಿಗೀಡಾಗಿದ್ದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಹಿನ್ನೆಲೆಯಲ್ಲಿ ಮಳೆ ಹಾನಿ ಪರಿಶೀಲನೆ ನಡೆಸಲಾಯಿತು.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ರೈತರು, ಖಾರಿಗಳ ಮುಂದೆ ಅಳಲು ತೋಡಿಕೊಂಡರು. ರೈತರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಸರ್ಕಾರದ ಮಾರ್ಗಸೂಚಿಯನ್ವಯ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಭರವಸೆ ನೀಡಿದರು.
ಚಿಕ್ಕತೊಗಲೇರಿ, ಹಿರೇತೊಗಲೇರಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮೇತ ತೆರಳಿ, ಮಳೆ ಹಾನಿ ಬಗ್ಗೆ ಪರಿಶೀಲಿಸಿದ್ದಾರೆ. ತಾಲೂಕಿನ ಚಿಕ್ಕ ತೊಗಲೇರಿ, ಹಿರೇ ತೊಗಲೇರಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭಾರೀ ಗಾಳಿ, ಜೋರು ಮಳೆಯಿಂದಾಗಿ ನೂರಾರು ಎಕರೆ ಭತ್ತ, ಹತ್ತಿ ಬೆಳೆಗಳು, ತೋಟದ ಬೆಳೆಗಳು ಹಾನಿಗೀಡಾಗಿದ್ದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಹಿನ್ನೆಲೆಯಲ್ಲಿ ಮಳೆ ಹಾನಿ ಪರಿಶೀಲನೆ ನಡೆಸಲಾಯಿತು.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ರೈತರು, ಖಾರಿಗಳ ಮುಂದೆ ಅಳಲು ತೋಡಿಕೊಂಡರು. ರೈತರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಸರ್ಕಾರದ ಮಾರ್ಗಸೂಚಿಯನ್ವಯ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಭರವಸೆ ನೀಡಿದರು.