ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ: ವಿವಿಧ ಜಿಲ್ಲೆಗಳ 48 ಕಡೆ ದಾಳಿ
ದಾವಣಗೆರೆ ವಿಡಿಯೋಗಳಿಗೆ ಚಂದಾದಾರರಾಗಿ
ದಾವಣಗೆರೆ : ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳ 48 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟರಿಗೆ ಶಾಕ್ ಕೊಟ್ಟಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಕೆ. ಮಹೇಶ್, ಹಾಗೂ ಮಹೇಶ್ ಪತ್ನಿ ಬಿಬಿಎಂಪಿ ಎಇ ಭಾರತಿ, ಹೊಳಲ್ಕೆರೆ ಆರ್ಎಫ್ಓ ಸತೀಶ್ ಮನೆ ಕಚೇರಿಗಳಲ್ಲಿ ಲೋಕಾ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾವಣಗೆರೆ ಹೊಳಲ್ಕೆರೆಯಲ್ಲಿ ದಾಳಿ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಕೌಲಾಂಪುರೆ, ಡಿವೈಎಸ್ಪಿ ನೇತೃತ್ವದ ತಂಡ ಚನ್ನಗಿರಿಯಲ್ಲಿ ದಾಳಿ ನಡೆಸಿದ್ದಾರೆ.
ಇನ್ನೂ ಚಿತ್ರದುರ್ಗದ ಇಂಜಿನಿಯರ್ ದಂಪತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. 1 ಕೆಜಿಗೂ ಅಧಿಕ ಚಿನ್ನಾಭರಣ, 15 ಲಕ್ಷ ರೂ. ನಗದು ಪತ್ತೆಯಾಗಿದೆ. ದಾವಣಗೆರೆಯ ಜಯನಗರದ ಮನೆಯಲ್ಲಿ ಲೋಕಾಯುಕ್ತರು ಶೋಧ ನಡೆಸಿದಾಗ ಚಿನ್ನಾಭರಣ ಸಿಕ್ಕಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಕೆ. ಮಹೇಶ್, ಹಾಗೂ ಮಹೇಶ್ ಪತ್ನಿ ಬಿಬಿಎಂಪಿ ಎಇ ಭಾರತಿ, ಹೊಳಲ್ಕೆರೆ ಆರ್ಎಫ್ಓ ಸತೀಶ್ ಮನೆ ಕಚೇರಿಗಳಲ್ಲಿ ಲೋಕಾ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾವಣಗೆರೆ ಹೊಳಲ್ಕೆರೆಯಲ್ಲಿ ದಾಳಿ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಕೌಲಾಂಪುರೆ, ಡಿವೈಎಸ್ಪಿ ನೇತೃತ್ವದ ತಂಡ ಚನ್ನಗಿರಿಯಲ್ಲಿ ದಾಳಿ ನಡೆಸಿದ್ದಾರೆ.
ಇನ್ನೂ ಚಿತ್ರದುರ್ಗದ ಇಂಜಿನಿಯರ್ ದಂಪತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. 1 ಕೆಜಿಗೂ ಅಧಿಕ ಚಿನ್ನಾಭರಣ, 15 ಲಕ್ಷ ರೂ. ನಗದು ಪತ್ತೆಯಾಗಿದೆ. ದಾವಣಗೆರೆಯ ಜಯನಗರದ ಮನೆಯಲ್ಲಿ ಲೋಕಾಯುಕ್ತರು ಶೋಧ ನಡೆಸಿದಾಗ ಚಿನ್ನಾಭರಣ ಸಿಕ್ಕಿದೆ.