ಶಕ್ತಿ ಯೋಜನೆ ವಿರುದ್ಧ ಆಟೋ ಚಾಲಕರ ಸಮರ ; ಸರ್ಕಾರದ ಮುಂದೆ ಬೇಡಿ ಇಟ್ಟ ಚಾಲಕರು!
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿ
ಹುಬ್ಬಳ್ಳಿ: ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಅನ್ಯಾಯವಾಗುತ್ತಿದೆ. ಸರಿಯಾದ ದುಡಿಮೆ ಇಲ್ಲದೆ ಆಟೋ ಚಾಲಕರು ಪರದಾಡುತ್ತಿದ್ದಾರೆ. ಶಕ್ತಿ ಯೋಜನೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಆಟೋ ಚಾಲಕರು ಪ್ರತಿಭಟನೆ ಮಾಡಿದ್ದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಆಟೋ ಹಾಗೂ ಮ್ಯಾಕ್ಸಿ ಕ್ಯಾಬ್ ಸಂಚಾರ ಸಂಪೂರ್ಣ ಬಂದ್ ಆಗಿತ್ತು, ಸರ್ಕಾರದ ಮುಂದೆ ಆಟೋ ಚಾಲಕರು ಹಲವು ಬೇಡಿಕೆ ಇಟ್ಟು ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ನಲ್ಲಿ ಆಟೋ ಚಾಲಕರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದರು. ಆಟೋಚಾಲಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದ್ದಾರೆ.
ಇನ್ನು ಆಟೋ ಚಾಲಕರ ಪ್ರತಿಭಟನೆ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಬಂದು ಮನವಿ ಸ್ವೀಕರಿಸಿದ ನಂತರ ಸಾಕಷ್ಟು ಆಶಾಭಾವನೆ ಬಂದಿದೆ. ಮುಷ್ಕರ ಹಿಂಪಡೆಯುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡ ಸಂತೋಷ ಲಾಡ್ ಅವರು, ಆಟೋ ಚಾಲಕರ ಬೇಡಿಕೆಗಳ ಕುರಿತು ಸಿಎಂ ಹಾಗೂ ಸಾರಿಗೆ ಸಚಿವರ ಜೊತೆಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ನೇರವಾಗಿ ಸಿಎಂ ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುತ್ತೇನೆಂದು ಭರವಸೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಆಟೋ ಹಾಗೂ ಮ್ಯಾಕ್ಸಿ ಕ್ಯಾಬ್ ಸಂಚಾರ ಸಂಪೂರ್ಣ ಬಂದ್ ಆಗಿತ್ತು, ಸರ್ಕಾರದ ಮುಂದೆ ಆಟೋ ಚಾಲಕರು ಹಲವು ಬೇಡಿಕೆ ಇಟ್ಟು ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ನಲ್ಲಿ ಆಟೋ ಚಾಲಕರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದರು. ಆಟೋಚಾಲಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದ್ದಾರೆ.
ಇನ್ನು ಆಟೋ ಚಾಲಕರ ಪ್ರತಿಭಟನೆ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಬಂದು ಮನವಿ ಸ್ವೀಕರಿಸಿದ ನಂತರ ಸಾಕಷ್ಟು ಆಶಾಭಾವನೆ ಬಂದಿದೆ. ಮುಷ್ಕರ ಹಿಂಪಡೆಯುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡ ಸಂತೋಷ ಲಾಡ್ ಅವರು, ಆಟೋ ಚಾಲಕರ ಬೇಡಿಕೆಗಳ ಕುರಿತು ಸಿಎಂ ಹಾಗೂ ಸಾರಿಗೆ ಸಚಿವರ ಜೊತೆಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ನೇರವಾಗಿ ಸಿಎಂ ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುತ್ತೇನೆಂದು ಭರವಸೆ ನೀಡಿದರು.