ಹುಬ್ಬಳ್ಳಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಯೋಗಾರ್ಥ ಯಶಸ್ಸಿಗೆ ಸಿಬ್ಬಂದಿ ಸಂತಸ
1143 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿಯಾಗಿದೆ. ಬೆಳಿಗ್ಗೆ 5:45ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 12:40ಕ್ಕೆ ಧಾರವಾಡ ತಲುಪಿತು. ಇದರಿಂದಾಗಿ ನೈರುತ್ಯ ರೈಲ್ವೆ ಸಿಬ್ಬಂದಿ ಸಂತಸಗೊಂಡರು.
ಈ ರೈಲು ಅಧಿಕೃತವಾಗಿ ಜೂನ್ 26ರಿಂದ ಆರಂಭವಾಗಲಿದೆ. ರೈಲು ಧಾರವಾಡಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ರೈಲು ಬೆಳಿಗ್ಗೆ 5:45 ಕ್ಕೆ ಬೆಂಗಳೂರು ಬಿಟ್ಟಿತ್ತು. ತಾಂತ್ರಿಕ ತಂಡ ಹಾಗೂ ಅಧಿಕಾರಿಗಳು ರೈಲಿನಲ್ಲಿದ್ದರು. ''ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಎಲ್ಲ ಬಗೆಯ ಪರೀಕ್ಷೆಗಳು ಯಶಸ್ವಿಯಾಗಿವೆ. ಇತ್ತೀಚಿಗಷ್ಟೇ ಧಾರವಾಡ-ಬೆಂಗಳೂರು ಮಧ್ಯೆ ಎಲೆಕ್ಟ್ರಿಕಲ್ ಲೈನ್ ಎಳೆಯಲಾಗಿತ್ತು. ಇದರ ಪರೀಕ್ಷೆಯನ್ನೂ ಮಾಡಲಾಗಿದೆ. ಎಲ್ಲವೂ ಯಶಸ್ವಿಯಾಗಿವೆ. ಇದರಿಂದಾಗಿ ನಮ್ಮ ಸಿಬ್ಬಂದಿ ಖುಷಿಯಾಗಿದ್ದಾರೆ ಅವರ ಶ್ರಮಕ್ಕೆ ಫಲ ಸಿಕ್ಕಿದೆ'' ಎಂದು ನೈರುತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಹೇಳಿದರು.
ಜೂನ್ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಸೂಪರ್-ಫಾಸ್ಟ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಎರಡನೇ ಹಂತದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸದಂತಾಗುತ್ತದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಗುರುವಾರ ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಿಂದ ಬೆಂಗಳೂರಿನ ಕೆಎಸ್ಆರ್ ನಿಲ್ದಾಣಕ್ಕೆ ಬಂದಿತ್ತು.
ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಲಿದ್ದು, ದಾವಣಗೆರೆಯಲ್ಲಿ ಮಾತ್ರ ನಿಲುಗಡೆಯಾಗಲಿದೆ. ವಂದೇ ಭಾರತ್ ರೈಲಿನಲ್ಲಿ ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವು ಸರಿಸುಮಾರು ಏಳು ಗಂಟೆ ಎಂದು ಹೇಳಲಾಗಿದೆ. ಇತರ ಸಾಮಾನ್ಯ ರೈಲುಗಳಲ್ಲಿ ಒಂಭತ್ತರಿಂದ ಹತ್ತು ಗಂಟೆಗಳು ಹಿಡಿಯುತ್ತಿದೆ.
ಪೆರಂಬೂರಿನಲ್ಲಿರುವ ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲು ನಿರ್ಮಾಣಗೊಂಡಿದೆ. ಬೆಂಗಳೂರು–ಧಾರವಾಡದ ಅಂತರ 487 ಕಿಲೋ ಮೀಟರ್ ಇದೆ. ಗಂಟೆಗೆ 160 ಕಿಲೋ ಮೀಟರ್ ವೇಗದ ಸಾಮರ್ಥ್ಯ ಇದ್ದರೂ, ಈ ಮಾರ್ಗದಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. ರೈಲು ನೋಡಿದ ತಕ್ಷಣ ಹುಬ್ಬಳ್ಳಿ ಧಾರವಾಡ ಜನತೆ ಸಂತಸ ಪಟ್ಟರು.
ಈ ರೈಲು ಅಧಿಕೃತವಾಗಿ ಜೂನ್ 26ರಿಂದ ಆರಂಭವಾಗಲಿದೆ. ರೈಲು ಧಾರವಾಡಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ರೈಲು ಬೆಳಿಗ್ಗೆ 5:45 ಕ್ಕೆ ಬೆಂಗಳೂರು ಬಿಟ್ಟಿತ್ತು. ತಾಂತ್ರಿಕ ತಂಡ ಹಾಗೂ ಅಧಿಕಾರಿಗಳು ರೈಲಿನಲ್ಲಿದ್ದರು. ''ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಎಲ್ಲ ಬಗೆಯ ಪರೀಕ್ಷೆಗಳು ಯಶಸ್ವಿಯಾಗಿವೆ. ಇತ್ತೀಚಿಗಷ್ಟೇ ಧಾರವಾಡ-ಬೆಂಗಳೂರು ಮಧ್ಯೆ ಎಲೆಕ್ಟ್ರಿಕಲ್ ಲೈನ್ ಎಳೆಯಲಾಗಿತ್ತು. ಇದರ ಪರೀಕ್ಷೆಯನ್ನೂ ಮಾಡಲಾಗಿದೆ. ಎಲ್ಲವೂ ಯಶಸ್ವಿಯಾಗಿವೆ. ಇದರಿಂದಾಗಿ ನಮ್ಮ ಸಿಬ್ಬಂದಿ ಖುಷಿಯಾಗಿದ್ದಾರೆ ಅವರ ಶ್ರಮಕ್ಕೆ ಫಲ ಸಿಕ್ಕಿದೆ'' ಎಂದು ನೈರುತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಹೇಳಿದರು.
ಜೂನ್ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಸೂಪರ್-ಫಾಸ್ಟ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಎರಡನೇ ಹಂತದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸದಂತಾಗುತ್ತದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಗುರುವಾರ ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಿಂದ ಬೆಂಗಳೂರಿನ ಕೆಎಸ್ಆರ್ ನಿಲ್ದಾಣಕ್ಕೆ ಬಂದಿತ್ತು.
ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಲಿದ್ದು, ದಾವಣಗೆರೆಯಲ್ಲಿ ಮಾತ್ರ ನಿಲುಗಡೆಯಾಗಲಿದೆ. ವಂದೇ ಭಾರತ್ ರೈಲಿನಲ್ಲಿ ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವು ಸರಿಸುಮಾರು ಏಳು ಗಂಟೆ ಎಂದು ಹೇಳಲಾಗಿದೆ. ಇತರ ಸಾಮಾನ್ಯ ರೈಲುಗಳಲ್ಲಿ ಒಂಭತ್ತರಿಂದ ಹತ್ತು ಗಂಟೆಗಳು ಹಿಡಿಯುತ್ತಿದೆ.
ಪೆರಂಬೂರಿನಲ್ಲಿರುವ ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲು ನಿರ್ಮಾಣಗೊಂಡಿದೆ. ಬೆಂಗಳೂರು–ಧಾರವಾಡದ ಅಂತರ 487 ಕಿಲೋ ಮೀಟರ್ ಇದೆ. ಗಂಟೆಗೆ 160 ಕಿಲೋ ಮೀಟರ್ ವೇಗದ ಸಾಮರ್ಥ್ಯ ಇದ್ದರೂ, ಈ ಮಾರ್ಗದಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. ರೈಲು ನೋಡಿದ ತಕ್ಷಣ ಹುಬ್ಬಳ್ಳಿ ಧಾರವಾಡ ಜನತೆ ಸಂತಸ ಪಟ್ಟರು.