ಹುಬ್ಬಳ್ಳಿ: ಸಿದ್ಧಾರೂಢರ ಜಾತ್ರೆಯಲ್ಲಿ ಜಾನುವಾರುಗಳ ಹಾಲು ಕರೆಯುವ ಸ್ಪರ್ಧೆ, ಗೆದ್ದವರಿಗೆ ಭರ್ಜರಿ ಬಹುಮಾನ
1051 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಸರ್ವ ಧರ್ಮಗಳ ಸಮನ್ವಯದ ಶ್ರೀ ಸಿದ್ಧಾರೂಢರ ಮಠದ ಆವರಣದಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಸಲಾಗುತ್ತಿದೆ. ಸದ್ಗುರು ಸಿದ್ಧಾರೂಢರ ಜಾತ್ರೆ ಅಂದ್ರೆ ಸಾಕು, ಎಲ್ಲರಿಗೂ ಅಚ್ಚುಮೆಚ್ಚು. ವಾಣಿಜ್ಯ ನಗರಿ ಹುಬ್ಬಳ್ಳಿ ಜನರು ಮಾತ್ರವಲ್ಲದೆ ನಾಡಿನ ವಿವಿಧ ಮೂಲೆಗಳಿಂದ ಜನರು ಬರುತ್ತಾರೆ. ಒಂದು ವಾರ ನಡೆಯುವ ಈ ಜಾತ್ರೆಯಲ್ಲಿ ಪಶು ಸಂಗೋಪನಾ ಇಲಾಖೆ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಿದ್ದು, ಕೃಷಿ ಹಾಗೂ ಹಾಲು ಉತ್ಪಾದನೆ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕಾರ್ಯ ಮಾಡಲಾಗುತ್ತಿದೆ.ಜಾನುವಾರುಗಳಲ್ಲಿ ಹಾಲು ಉತ್ಪಾದನೆ ಹೆಚ್ಚಳ ಮತ್ತು ಸಾಕಣಿಕೆ ಕುರಿತಂತೆ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ಈ ಒಂದು ಕಾರ್ಯಕ್ರಮ ಆಯೋಜಿಸಲಾಗಿದ್ದು, ಹೈನುಗಾರಿಕೆ ಹಾಗೂ ಕೃಷಿಯೇತರ ಚಟುವಟಿಕೆಗಳ ಉತ್ತೇಜನಕ್ಕೆ ಈ ಸ್ಪರ್ಧೆ ಸಾಕ್ಷಿಯಾಗಿದೆ. ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಕೆಎಂಎಫ್ ವತಿಯಿಂದ ಸ್ಪರ್ಧೆಯೊಂದನ್ನು ಆಯೋಜಿಸಲಾಗಿದೆ. ಸ್ಪರ್ಧೆಗೆ ಜಿಲ್ಲೆಯ ವಿವಿಧ ಕಡೆಗಳಿಂದ ಹೈನುಗಾರಿಕೆಯಲ್ಲಿ ತೊಡಗಿದ ಕೃಷಿಕರು ಆಗಮಿಸಿದ್ದರು. ಇಲ್ಲಿ ತಮ್ಮ ಜಾನುವಾರುಗಳ ಹಾಲು ಕರೆಯುವ ಮೂಲಕ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ಯುವಕರು ಹಾಗೂ ಮಹಿಳೆಯರೂ ಭಾಗಿಯಾದರು.ನೂರಕ್ಕೂ ಹೆಚ್ಚು ಹಸು, ಎಮ್ಮೆಗಳು ಹಾಲು ಕರೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ವಿಶೇಷ. ಜಾನುವಾರು ಸಾಕಾಣಿಕೆ ಮತ್ತು ಹಾಲು ಉತ್ಪಾದನೆಯ ಕುರಿತಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಿದರು.