ಕಾಂಗ್ರೆಸ್ ದೊಡ್ಡ ಕುಟುಂಬ, ಇಲ್ಲಿ ಬಣಗಳಿಲ್ಲ, ಒಗ್ಗಟ್ಟಿನಿಂದ ಗೆಲುವು: ವಿನೋದ ಅಸೂಟಿ
1046 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಈಗಾಗಲೇ ಅಧಿಕೃತ ಚಾಲನೆ ದೊರೆತಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಸಭೆ ಮಾಡಿದ್ದು, ಪ್ರಚಾರ ಆರಂಭಿಸಲಾಗಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಹೇಳಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮವನ್ನು ಅರಿತು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಈ ಬಾರಿ ಕ್ಷೇತ್ರದಲ್ಲಿ ಗೆಲುವಿನ ಪತಾಕೆ ಹಾರಿಸಲಿದ್ದೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನೂರಕ್ಕೆ ನೂರಷ್ಟು ಒಗ್ಗಟ್ಟಿನಿಂದ ನಾವು ಚುನಾವಣೆ ಎದುರಿಸುತ್ತೇವೆ. ನಾಯಕರ ಸಹಕಾರ ಹಾಗೂ ಕಾರ್ಯಕರ್ತರು ಹುಮ್ಮಸಿನಲ್ಲಿದ್ದಾರೆ. ರಾಜ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗೆ ಅನುಷ್ಠಾನ ಗೊಳಿಸಿದ ವಿಶ್ವಾಸ ಮೇಲೆ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.
ವಿಧಾನಸಭಾ ಚುನಾವಣೆ ವೇಳೆ ಮೋದಿ ಅವರು ಪ್ರಧಾನಿಯಾಗಿದ್ದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಆಗಲಿದೆ. ಈಗ ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ವಿನೋದ ಅಸೂಟಿ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮವನ್ನು ಅರಿತು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಈ ಬಾರಿ ಕ್ಷೇತ್ರದಲ್ಲಿ ಗೆಲುವಿನ ಪತಾಕೆ ಹಾರಿಸಲಿದ್ದೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನೂರಕ್ಕೆ ನೂರಷ್ಟು ಒಗ್ಗಟ್ಟಿನಿಂದ ನಾವು ಚುನಾವಣೆ ಎದುರಿಸುತ್ತೇವೆ. ನಾಯಕರ ಸಹಕಾರ ಹಾಗೂ ಕಾರ್ಯಕರ್ತರು ಹುಮ್ಮಸಿನಲ್ಲಿದ್ದಾರೆ. ರಾಜ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗೆ ಅನುಷ್ಠಾನ ಗೊಳಿಸಿದ ವಿಶ್ವಾಸ ಮೇಲೆ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.
ವಿಧಾನಸಭಾ ಚುನಾವಣೆ ವೇಳೆ ಮೋದಿ ಅವರು ಪ್ರಧಾನಿಯಾಗಿದ್ದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಆಗಲಿದೆ. ಈಗ ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ವಿನೋದ ಅಸೂಟಿ ವಿಶ್ವಾಸ ವ್ಯಕ್ತಪಡಿಸಿದರು.