ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ; ಶೆಟ್ಟರ್ ಫುಲ್ ಖುಷ್
1125 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ ಸೇವೆ ಮಾಡಲು ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಬೆಳಗಾವಿ ಟಿಕೆಟ್ ಘೋಷಣೆ ಹಿನ್ನಲೆ ಅಭಿಮಾನಿಗಳೊಂದಿಗೆ ಸಂಭ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದು, ಈ ನಿಟ್ಟಿನಲ್ಲಿ ವರಿಷ್ಠರಾದ ಜೆ.ಪಿ.ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ಸ್ಥಳೀಯ ನಾಯಕರುಗಳಿಗೆ ಧನ್ಯವಾದ ತಿಳಿಸುವೆ ಎಂದು ಹರ್ಷ ವ್ಯಕ್ತಪಡಿಸಿದರು.
ಸ್ಥಳೀಯ ನಾಯಕರ ನಂಬಿಕೆ ಉಳಿಸಿಕೊಳ್ಳುವಂತಹ ಪ್ರಯತ್ನಕ್ಕೆ ಶ್ರಮಿಸುತ್ತೇನೆ. ಮಾಜಿ ಕೇಂದ್ರ ಸಚಿವರಾದ ದಿ. ಸುರೇಶ್ ಅಂಗಡಿ ಅವರು ರೈಲ್ವೆ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವೆ ಎಂದು ನುಡಿದರು.
ಬೆಳಗಾವಿ ಅಭಿವೃದ್ಧಿ ಮಾಡಬೇಕು ಎಂಬ ಹುಮ್ಮಸ್ಸು ಬಂದಿದ್ದು, ಎಲ್ಲರ ಜೊತೆಗೂಡಿ ಚುನಾವಣೆ ಎದುರಿಸುವೆ. ನಾನು ಬೆಳಗಾವಿ ಸ್ಥಳೀಯ ಮಟ್ಟದಲ್ಲಿ ಸಂಘಟನೆ ಮಾಡಿದ್ದೇನೆ. ಹೀಗಾಗಿ ಹಣದ ಮೇಲೆ ಚುನಾವಣೆ ನಡೆಯುವುದಿಲ್ಲ. ಇದು ರಾಷ್ಟ್ರೀಯ ಚುನಾವಣೆಯಾಗಿದ್ದು, ಮೋದಿಯವರು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಕೂಡಾ ಅದನ್ನು ಶಮನ ಮಾಡುವೆ. ಲೋಕಸಭಾ ಚುನಾವಣೆ ಹೊಸದಿರಬಹುದು ಆದರೇ ಅಪಾರ ರಾಜಕೀಯ ಅನುಭವವಿದೆ. ಯಾವುದೇ ಪದವಿಗೆ, ಸಚಿವ ಸ್ಥಾನಕ್ಕೆ ಆಸೆಪಡುವುದಿಲ್ಲ ತಾನಾಗಿಯೇ ಒಲಿದು ಬರಬೇಕೆಂದು ಅವರು ಹೇಳಿದರು.
ಬೆಳಗಾವಿ ಟಿಕೆಟ್ ಘೋಷಣೆ ಹಿನ್ನಲೆ ಅಭಿಮಾನಿಗಳೊಂದಿಗೆ ಸಂಭ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದು, ಈ ನಿಟ್ಟಿನಲ್ಲಿ ವರಿಷ್ಠರಾದ ಜೆ.ಪಿ.ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ಸ್ಥಳೀಯ ನಾಯಕರುಗಳಿಗೆ ಧನ್ಯವಾದ ತಿಳಿಸುವೆ ಎಂದು ಹರ್ಷ ವ್ಯಕ್ತಪಡಿಸಿದರು.
ಸ್ಥಳೀಯ ನಾಯಕರ ನಂಬಿಕೆ ಉಳಿಸಿಕೊಳ್ಳುವಂತಹ ಪ್ರಯತ್ನಕ್ಕೆ ಶ್ರಮಿಸುತ್ತೇನೆ. ಮಾಜಿ ಕೇಂದ್ರ ಸಚಿವರಾದ ದಿ. ಸುರೇಶ್ ಅಂಗಡಿ ಅವರು ರೈಲ್ವೆ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವೆ ಎಂದು ನುಡಿದರು.
ಬೆಳಗಾವಿ ಅಭಿವೃದ್ಧಿ ಮಾಡಬೇಕು ಎಂಬ ಹುಮ್ಮಸ್ಸು ಬಂದಿದ್ದು, ಎಲ್ಲರ ಜೊತೆಗೂಡಿ ಚುನಾವಣೆ ಎದುರಿಸುವೆ. ನಾನು ಬೆಳಗಾವಿ ಸ್ಥಳೀಯ ಮಟ್ಟದಲ್ಲಿ ಸಂಘಟನೆ ಮಾಡಿದ್ದೇನೆ. ಹೀಗಾಗಿ ಹಣದ ಮೇಲೆ ಚುನಾವಣೆ ನಡೆಯುವುದಿಲ್ಲ. ಇದು ರಾಷ್ಟ್ರೀಯ ಚುನಾವಣೆಯಾಗಿದ್ದು, ಮೋದಿಯವರು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಕೂಡಾ ಅದನ್ನು ಶಮನ ಮಾಡುವೆ. ಲೋಕಸಭಾ ಚುನಾವಣೆ ಹೊಸದಿರಬಹುದು ಆದರೇ ಅಪಾರ ರಾಜಕೀಯ ಅನುಭವವಿದೆ. ಯಾವುದೇ ಪದವಿಗೆ, ಸಚಿವ ಸ್ಥಾನಕ್ಕೆ ಆಸೆಪಡುವುದಿಲ್ಲ ತಾನಾಗಿಯೇ ಒಲಿದು ಬರಬೇಕೆಂದು ಅವರು ಹೇಳಿದರು.