ಜೈನ ಮುನಿಗಳ ಪ್ರವಾಸದ ವೇಳೆ ಶಾಲೆಗಳಲ್ಲಿ ವ್ಯವಸ್ಥೆ, ಆಯೋಗ ಸ್ಥಾಪನೆಯ ಬೇಡಿಕೆ ಈಡೇರಿಲ್ಲ: ಗುಣಧರ ನಂದಿ ಮಹಾರಾಜ್
1148 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಜೈನ ಮುನಿಗಳ ಪ್ರವಾಸದ ವೇಳೆ ಶಾಲೆಗಳಲ್ಲಿ ವ್ಯವಸ್ಥೆ ಹಾಗೂ ಆಯೋಗ ಸ್ಥಾಪನೆ ಬೇಡಿಕೆಗಳನ್ನು ಸರ್ಕಾರ ಇನ್ನೂ ಈಡೇರಿಸಿಲ್ಲ. ಫೆಬ್ರುವರಿ 7ರೊಳಗೆ ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಲಾಗುತ್ತಿದ್ದು, ಇಲ್ಲವಾದಲ್ಲಿ ಫೆಬ್ರುವರಿ 8ರಂದು ಚಿಕ್ಕೋಡಿ ಶಮನೇವಾಡಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜೈನ ಮುನಿ ವರೂರಿನ ಗುಣಧರ ನಂದಿ ಎಚ್ಚರಿಕೆ ನೀಡಿದರು.
ಮಂಗಳವಾರ ವರೂರಿನ ನವಗ್ರಹದ ತೀರ್ಥ ಕ್ಷೇತ್ರದಲ್ಲಿ ಮಾತನಾಡಿದ ಅವರು, ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಸ್ವಾಮೀಜಿ ಅವರ ಹತ್ಯೆಯ ಬಳಿಕ ಸರ್ಕಾರಕ್ಕೆ ನಾಲ್ಕು ಬೇಡಿಕೆ ಈಡೇರಿಸಲು ಆಗ್ರಹಿಸಲಾಗಿತ್ತು. ಅದರಲ್ಲಿ ಜೈನ ಮುನಿಗಳ ಹತ್ಯೆ ತನಿಖೆ ನಡೆದು ಆರೋಪಿಗೆ ಶಿಕ್ಷೆ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡಲಾಗಿದೆ. ಆದರೆ ಪ್ರವಾಸದಲ್ಲಿರುವ ಶಾಲೆಗಳಲ್ಲಿ ವ್ಯವಸ್ಥೆ, ಜೈನ ಆಯೋಗ ರಚಿಸುವ ಬೇಡಿಕೆ ಈಡೇರಿಸಿಲ್ಲ. ಆದ್ದರಿಂದ ಒಂದು ಲಕ್ಷದಷ್ಟು ಜನರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
''ಶ್ರೀರಾಮ ಮಂದಿರ ಉದ್ಘಾಟನೆ ಸಂತೋಷದ ಸಂಗತಿ. ಇದರಿಂದ ದೇಶದಲ್ಲಿ ರಾಮ ರಾಜ ನಿರ್ಮಾಣವಾಗಲಿ. ಕೇಂದ್ರ ಸರ್ಕಾರದ ಸಮಾರಂಭಕ್ಕೆ ಎಲ್ಲ ಮಠಾಧೀಶರ ಆಹ್ವಾನಿಸಲು ತಾರತಮ್ಯ ಮಾಡಿದಂತೆ ಅನಿಸುತ್ತಿಲ್ಲ. ಜೈನ ಮುನಿಗಳಿಗೂ ಸಹ ಆಹ್ವಾನಿಸಿದ್ದು, ಭಾಗವಹಿಸುತ್ತಿದ್ದಾರೆ'' ಎಂದು ಹೇಳಿದರು.
ಜೈನ ಮುನಿಗಳು ಧರ್ಮ ಪ್ರಚಾರಕ್ಕಾಗಿ ವಿಹಾರ ನಡೆಸುವ ಸಂದರ್ಭದಲ್ಲಿ ಪೊಲೀಸ್ ಭದ್ರತೆ ಒದಗಿಸಲು ಸರ್ಕಾರ ಸಿದ್ಧವಿದ್ದು, ಪೊಲೀಸ್ ಇಲಾಖೆಯಿಂದ ಎಲ್ಲಾ ಠಾಣೆಗಳಿಗೆ ಶೀಘ್ರ ಸುತ್ತೋಲೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದರು. ಮುನಿಗಳು ವಿಹಾರ ಸಂದರ್ಭದಲ್ಲಿ ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ಅವಕಾಶ ನೀಡಬೇಕು ಎಂದು ವಿನಂತಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಜೈನ ನಿಗಮ ಮಂಡಳಿ ರಚನೆ ಸ್ಥಾಪಿಸಬೇಕೆನ್ನುವ ಬೇಡಿಕೆ ಸಹ ಮುಂದಿಟ್ಟಿದ್ದು, ಆದರೆ ಇದುವರೆಗೆ ಯಾವುದೇ ಸರಿಯಾಗಿ ಬೇಡಿಕೆ ಈಡೇರಿಸಲು ಸರ್ಕಾರದಿಂದ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಂಗಳವಾರ ವರೂರಿನ ನವಗ್ರಹದ ತೀರ್ಥ ಕ್ಷೇತ್ರದಲ್ಲಿ ಮಾತನಾಡಿದ ಅವರು, ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಸ್ವಾಮೀಜಿ ಅವರ ಹತ್ಯೆಯ ಬಳಿಕ ಸರ್ಕಾರಕ್ಕೆ ನಾಲ್ಕು ಬೇಡಿಕೆ ಈಡೇರಿಸಲು ಆಗ್ರಹಿಸಲಾಗಿತ್ತು. ಅದರಲ್ಲಿ ಜೈನ ಮುನಿಗಳ ಹತ್ಯೆ ತನಿಖೆ ನಡೆದು ಆರೋಪಿಗೆ ಶಿಕ್ಷೆ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡಲಾಗಿದೆ. ಆದರೆ ಪ್ರವಾಸದಲ್ಲಿರುವ ಶಾಲೆಗಳಲ್ಲಿ ವ್ಯವಸ್ಥೆ, ಜೈನ ಆಯೋಗ ರಚಿಸುವ ಬೇಡಿಕೆ ಈಡೇರಿಸಿಲ್ಲ. ಆದ್ದರಿಂದ ಒಂದು ಲಕ್ಷದಷ್ಟು ಜನರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
''ಶ್ರೀರಾಮ ಮಂದಿರ ಉದ್ಘಾಟನೆ ಸಂತೋಷದ ಸಂಗತಿ. ಇದರಿಂದ ದೇಶದಲ್ಲಿ ರಾಮ ರಾಜ ನಿರ್ಮಾಣವಾಗಲಿ. ಕೇಂದ್ರ ಸರ್ಕಾರದ ಸಮಾರಂಭಕ್ಕೆ ಎಲ್ಲ ಮಠಾಧೀಶರ ಆಹ್ವಾನಿಸಲು ತಾರತಮ್ಯ ಮಾಡಿದಂತೆ ಅನಿಸುತ್ತಿಲ್ಲ. ಜೈನ ಮುನಿಗಳಿಗೂ ಸಹ ಆಹ್ವಾನಿಸಿದ್ದು, ಭಾಗವಹಿಸುತ್ತಿದ್ದಾರೆ'' ಎಂದು ಹೇಳಿದರು.
ಜೈನ ಮುನಿಗಳು ಧರ್ಮ ಪ್ರಚಾರಕ್ಕಾಗಿ ವಿಹಾರ ನಡೆಸುವ ಸಂದರ್ಭದಲ್ಲಿ ಪೊಲೀಸ್ ಭದ್ರತೆ ಒದಗಿಸಲು ಸರ್ಕಾರ ಸಿದ್ಧವಿದ್ದು, ಪೊಲೀಸ್ ಇಲಾಖೆಯಿಂದ ಎಲ್ಲಾ ಠಾಣೆಗಳಿಗೆ ಶೀಘ್ರ ಸುತ್ತೋಲೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದರು. ಮುನಿಗಳು ವಿಹಾರ ಸಂದರ್ಭದಲ್ಲಿ ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ಅವಕಾಶ ನೀಡಬೇಕು ಎಂದು ವಿನಂತಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಜೈನ ನಿಗಮ ಮಂಡಳಿ ರಚನೆ ಸ್ಥಾಪಿಸಬೇಕೆನ್ನುವ ಬೇಡಿಕೆ ಸಹ ಮುಂದಿಟ್ಟಿದ್ದು, ಆದರೆ ಇದುವರೆಗೆ ಯಾವುದೇ ಸರಿಯಾಗಿ ಬೇಡಿಕೆ ಈಡೇರಿಸಲು ಸರ್ಕಾರದಿಂದ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.