ಬಿಜೆಪಿ ಮುಳುಗುತ್ತಿರುವ ಹಡಗು, ಮೊದಲು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲಿ: ಜಗದೀಶ್ ಶೆಟ್ಟರ್
1082 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಬಿಎಲ್ ಸಂತೋಷ್ ಅವರು ಮೊದಲು ಬಿಜೆಪಿ ಪಕ್ಷದಲ್ಲಿರುವ ಶಾಸಕರನ್ನು, ಮಾಜಿ ಶಾಸಕರನ್ನು ಉಳಿಸಿಕೊಳ್ಳಲಿ. ಆಮೇಲೆ ಆಪರೇಷನ್ ಬಿಜೆಪಿ ಬಗ್ಗೆ ಮಾತನಾಡಲಿ. ಅವರಿಗೆ ಬಿಜೆಪಿ ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಬಿ.ಎಲ್. ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ್ದು, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟು ಬಿಡಲಿ. ಬಿಜೆಪಿಯ ಥರ ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ ಮಾಡೋದಾ? ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಅದೇ ಕಾಂಗ್ರೆಸ್ ಪಕ್ಷಕ್ಕೆ 136 ಸೀಟ್ ಬಂದಿದನ್ನು ನೋಡಿ ಬೆಳಗ್ಗೆಯಿಂದ ಸಾಯಂಕಾಲವರೆಗೂ ಆಪರೇಷನ್ ಮಾಡೋದೆ ಬಿಜೆಪಿ ಕೆಲಸವಾಗಿದೆ. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸವಾಗಿದೆ. ದಿನದಿಂದ ದಿನಕ್ಕೆ ಪಕ್ಷ ಅಧೋಗತಿಗೆ ಹೋಗುತ್ತಿದೆ. ಬಿಜೆಪಿ ಮುಳುಗುತ್ತಿರೋ ಹಡಗು ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಥವಾ ಬೇರೆ ಪಕ್ಷದ ಶಾಸಕರು ಅವರ ಸಂಪರ್ಕದಲ್ಲಿದ್ದರೇ ನಾಳೆಯಿಂದಾನೇ ಆಪರೇಷನ್ ಬಿಜೆಪಿ ಪ್ರಾರಂಭ ಮಾಡಲಿ. ರಾಜೀನಾಮೆ ಕೊಟ್ಟು ಯಾರು ಹೋಗುತ್ತಾರೆ ಹೋಗಲಿ. ರಾಜ್ಯದಲ್ಲಿ ಗಟ್ಟಿ ಮುಟ್ಟಾದ ಕಾಂಗ್ರೆಸ್ ಸರ್ಕಾರವಿದೆ ಎಂದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಬಿ.ಎಲ್. ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ್ದು, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟು ಬಿಡಲಿ. ಬಿಜೆಪಿಯ ಥರ ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ ಮಾಡೋದಾ? ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಅದೇ ಕಾಂಗ್ರೆಸ್ ಪಕ್ಷಕ್ಕೆ 136 ಸೀಟ್ ಬಂದಿದನ್ನು ನೋಡಿ ಬೆಳಗ್ಗೆಯಿಂದ ಸಾಯಂಕಾಲವರೆಗೂ ಆಪರೇಷನ್ ಮಾಡೋದೆ ಬಿಜೆಪಿ ಕೆಲಸವಾಗಿದೆ. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸವಾಗಿದೆ. ದಿನದಿಂದ ದಿನಕ್ಕೆ ಪಕ್ಷ ಅಧೋಗತಿಗೆ ಹೋಗುತ್ತಿದೆ. ಬಿಜೆಪಿ ಮುಳುಗುತ್ತಿರೋ ಹಡಗು ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಥವಾ ಬೇರೆ ಪಕ್ಷದ ಶಾಸಕರು ಅವರ ಸಂಪರ್ಕದಲ್ಲಿದ್ದರೇ ನಾಳೆಯಿಂದಾನೇ ಆಪರೇಷನ್ ಬಿಜೆಪಿ ಪ್ರಾರಂಭ ಮಾಡಲಿ. ರಾಜೀನಾಮೆ ಕೊಟ್ಟು ಯಾರು ಹೋಗುತ್ತಾರೆ ಹೋಗಲಿ. ರಾಜ್ಯದಲ್ಲಿ ಗಟ್ಟಿ ಮುಟ್ಟಾದ ಕಾಂಗ್ರೆಸ್ ಸರ್ಕಾರವಿದೆ ಎಂದರು.