ಮಳೆ ಇಲ್ಲದೇ ಜನರು ಕಂಗಾಲು; ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿಸಿದ ಗ್ರಾಮಸ್ಥರು
1057 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಧಾರವಾಡ: ಈ ಬಾರಿ ಸಕಾಲಕ್ಕೆ ಮಳೆ ಆಗದೇ ರೈತರು, ಜನರು ಕಂಗಾಲಾಗಿದ್ದಾರೆ. ರಾಜ್ಯಾದ್ಯಂತ ಮಳೆ ಇಲ್ಲದೇ ಕೆರೆಗಳು, ನದಿಗಳು ಬತ್ತಿ ಹೋಗಿವೆ. ಮಳೆಗಾಗಿ ಪ್ರಾರ್ಥಿಸಿ ಜನರು ದೇವರ ಮೊರೆ ಹೋಗಿದ್ದಾರೆ. ವಿಶೇಷ ಪೂಜೆ ಪುನಸ್ಕಾರ ಮಾಡ್ತಿದ್ದಾರೆ. ಅದರಂತೆ ಹುಬ್ಬಳ್ಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೆಟ್ಟಿಕೊಪ್ಪ ಗ್ರಾಮದ ಜನರು ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿದ್ದಾರೆ. ಗ್ರಾಮದಲ್ಲಿ ಮೆರವಣಿಗೆ ಮಾಡುವ ಮೂಲಕ ಕಪ್ಪೆಗಳ ವಿಶಿಷ್ಟ ಮದುವೆ ಮಾಡುವಲ್ಲಿ ಸಾಕ್ಷಿಯಾಗಿದ್ದಾರೆ. ಬೆಳೆಗ್ಗೆ ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮುತ್ತೈದೆಯರೆಲ್ಲರೂ ಉಡಿ ತುಂಬಿಕೊಂಡು ಕಪ್ಪೆಗಳಿಗೆ ಅರಿಶಿನ ಹಚ್ಚಿ, ಸುರಗಿ ನೀರೇರೆದು, ಹಾಸಕ್ಕಿ ಹಾಕಿ, ಕಪ್ಪೆಗಳಿಗೆ ತಾಳಿ ಕಟ್ಟಿಸಿ ಮದುವೆ ಮಾಡಿಸುವುದಲ್ಲದೆ. ಬಂದ ಭಕ್ತರಿಗೆ ಅನ್ನ ಪ್ರಸಾದವನ್ನ ಏರ್ಪಡಿಸಿ ಮಳೆರಾಯ ಬೇಗ ಬಾ ಅಂತಾ ವಿಶೇಷ ಆಚರಣೆ ಮಾಡಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೆಟ್ಟಿಕೊಪ್ಪ ಗ್ರಾಮದ ಜನರು ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿದ್ದಾರೆ. ಗ್ರಾಮದಲ್ಲಿ ಮೆರವಣಿಗೆ ಮಾಡುವ ಮೂಲಕ ಕಪ್ಪೆಗಳ ವಿಶಿಷ್ಟ ಮದುವೆ ಮಾಡುವಲ್ಲಿ ಸಾಕ್ಷಿಯಾಗಿದ್ದಾರೆ. ಬೆಳೆಗ್ಗೆ ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮುತ್ತೈದೆಯರೆಲ್ಲರೂ ಉಡಿ ತುಂಬಿಕೊಂಡು ಕಪ್ಪೆಗಳಿಗೆ ಅರಿಶಿನ ಹಚ್ಚಿ, ಸುರಗಿ ನೀರೇರೆದು, ಹಾಸಕ್ಕಿ ಹಾಕಿ, ಕಪ್ಪೆಗಳಿಗೆ ತಾಳಿ ಕಟ್ಟಿಸಿ ಮದುವೆ ಮಾಡಿಸುವುದಲ್ಲದೆ. ಬಂದ ಭಕ್ತರಿಗೆ ಅನ್ನ ಪ್ರಸಾದವನ್ನ ಏರ್ಪಡಿಸಿ ಮಳೆರಾಯ ಬೇಗ ಬಾ ಅಂತಾ ವಿಶೇಷ ಆಚರಣೆ ಮಾಡಿದ್ದಾರೆ.