ಹುಬ್ಬಳ್ಳಿ: 'ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ' ಸಿದ್ದರಾಮಯ್ಯ ಹೇಳಿಕೆಗೆ ಸಚಿವರ ಸಮ್ಮತಿ
1055 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿ''ಸಿದ್ದರಾಮಯ್ಯ ಸಾಹೇಬರು ಹೇಳಿದ್ದು ನೂರಕ್ಕೆ ನೂರು ಸತ್ಯವಿದೆ. ಮುಸ್ಲಿಮರು ನಮ್ಮ ನಾಡಿನವರು, ಈ ನೆಲದ ಮೇಲೆ ಅವರಿಗೂ ಹಕ್ಕಿದೆ. ಮುಸ್ಲಿಂ ಸಮುದಾಯದವರಿಗೆ ಹಕ್ಕು ಕೊಡುವುದರಲ್ಲಿ ತಪ್ಪೇನಿದೆ? ಭಾರತೀಯ ಜನತಾ ಪಕ್ಷದವರು ಹಿಂದೂ ಓಲೈಕೆ ಮಾಡ್ತಾರೆ, ಮುಸ್ಲೀಮರ ಗಲಾಟೆ ಹಚ್ತಾರೆ. ನಾನು, ಸಿದ್ದರಾಮಯ್ಯ ಹಿಂದೂಗಳು. ಬಿಜೆಪಿಯವರು ರಾಜಕೀಯಕ್ಕಾಗಿ ಹಿಂದುತ್ವ ಬಳಸುತ್ತಿದ್ದಾರೆ. ನಾನು ಜನರ ಕಲ್ಯಾಣಕ್ಕಾಗಿ ಕಾರ್ಯ ಮಾಡುತ್ತಿದ್ದೇವೆ'' ಎಂದು ಆರ್ಬಿ ತಿಮ್ಮಾಪುರ ಹೇಳಿದರು.
'ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇವೆ' ಎಂಬರ್ಥದ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್ ಸಮುದಾಯದ ಕಾರ್ಯಕ್ರಮದಲ್ಲಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಸಚಿವರು ಹುಬ್ಬಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಇನ್ನು ಸದನ ಸುಮ್ಮನೆ ಹಾಳಾಗಬಾರದು. ಉತ್ತರ ಕರ್ನಾಟಕದ ಹಲವಾರು ಸಮಸ್ಯೆಗಳಿವೆ. ವಿರೋಧ ಪಕ್ಷ ನಾಯಕರಿಗೆ ವಿನಂತಿ ಮಾಡುತ್ತೇವೆ. ಬೇರೆಬೇರೆ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಗದ್ದಲದಲ್ಲಿ ಅಧಿವೇಶನ ಮುಗಿಯಬಾರದು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಬೇಕು ಎಂದರು.
ಸಿಎಂ ಹೇಳಿಕೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಹ ಸಮರ್ಥಿಸಿಕೊಂಡರು. ''ಸಿದ್ದರಾಮಯ್ಯ ಅವರು ಯಾವ ಸಮಾವೇಶದಲ್ಲಿ ಹೇಳಿದ್ದಾರೆ ಅನ್ನೋದು ಮುಖ್ಯ. ಮುಸ್ಲಿಂ ಸಮಾವೇಶದಲ್ಲಿ ಮುಸ್ಲಿಮರಿಗೆ ಏನು ಮಾಡುತ್ತೇವೆ ಅನ್ನೋದು ಹೇಳಬೇಕಾಗುತ್ತದೆ. ಬೇರೆ ಸಮಾವೇಶದಲ್ಲಿ ಬೇರೆಯವರಿಗೆ ಏನು ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಇದರಲ್ಲಿ ತಪ್ಪು ಹುಡುಕೋ ಕೆಲಸ ಬಿಜೆಪಿ ಮಾಡುತ್ತಿದೆ'' ಎಂದರು.
ಚೀನಾದಲ್ಲಿ ಹೊಸ ವೈರಸ್ ಪತ್ತೆ ವಿಚಾರ ಕುರಿತು ಮಾತನಾಡಿ, ''ಇದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಾಗಲಿ, ಕೇಂದ್ರ ಸರಕಾರವಾಗಲಿ ಎಚ್ಚರಿಕೆಗಳನ್ನು ನೀಡಿಲ್ಲ. ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಸಿನ್ ಕೊರತೆ ಸಹ ಇದ್ದು, ಬೇರೆ ಬೇರೆ ಕಾರಣಗಳಿಂದ ಔಷಧ ಕೊರತೆಯಾಗುತ್ತಿದೆ. ಈ ಸಮಸ್ಯೆ ಸರಿಪಡಿಸಲು ಯತ್ನಿಸುತ್ತೇನೆ'' ಎಂದು ಭರವಸೆ ನೀಡಿದರು.
'ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇವೆ' ಎಂಬರ್ಥದ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್ ಸಮುದಾಯದ ಕಾರ್ಯಕ್ರಮದಲ್ಲಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಸಚಿವರು ಹುಬ್ಬಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಇನ್ನು ಸದನ ಸುಮ್ಮನೆ ಹಾಳಾಗಬಾರದು. ಉತ್ತರ ಕರ್ನಾಟಕದ ಹಲವಾರು ಸಮಸ್ಯೆಗಳಿವೆ. ವಿರೋಧ ಪಕ್ಷ ನಾಯಕರಿಗೆ ವಿನಂತಿ ಮಾಡುತ್ತೇವೆ. ಬೇರೆಬೇರೆ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಗದ್ದಲದಲ್ಲಿ ಅಧಿವೇಶನ ಮುಗಿಯಬಾರದು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಬೇಕು ಎಂದರು.
ಸಿಎಂ ಹೇಳಿಕೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಹ ಸಮರ್ಥಿಸಿಕೊಂಡರು. ''ಸಿದ್ದರಾಮಯ್ಯ ಅವರು ಯಾವ ಸಮಾವೇಶದಲ್ಲಿ ಹೇಳಿದ್ದಾರೆ ಅನ್ನೋದು ಮುಖ್ಯ. ಮುಸ್ಲಿಂ ಸಮಾವೇಶದಲ್ಲಿ ಮುಸ್ಲಿಮರಿಗೆ ಏನು ಮಾಡುತ್ತೇವೆ ಅನ್ನೋದು ಹೇಳಬೇಕಾಗುತ್ತದೆ. ಬೇರೆ ಸಮಾವೇಶದಲ್ಲಿ ಬೇರೆಯವರಿಗೆ ಏನು ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಇದರಲ್ಲಿ ತಪ್ಪು ಹುಡುಕೋ ಕೆಲಸ ಬಿಜೆಪಿ ಮಾಡುತ್ತಿದೆ'' ಎಂದರು.
ಚೀನಾದಲ್ಲಿ ಹೊಸ ವೈರಸ್ ಪತ್ತೆ ವಿಚಾರ ಕುರಿತು ಮಾತನಾಡಿ, ''ಇದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಾಗಲಿ, ಕೇಂದ್ರ ಸರಕಾರವಾಗಲಿ ಎಚ್ಚರಿಕೆಗಳನ್ನು ನೀಡಿಲ್ಲ. ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಸಿನ್ ಕೊರತೆ ಸಹ ಇದ್ದು, ಬೇರೆ ಬೇರೆ ಕಾರಣಗಳಿಂದ ಔಷಧ ಕೊರತೆಯಾಗುತ್ತಿದೆ. ಈ ಸಮಸ್ಯೆ ಸರಿಪಡಿಸಲು ಯತ್ನಿಸುತ್ತೇನೆ'' ಎಂದು ಭರವಸೆ ನೀಡಿದರು.