ಧಾರವಾಡ, ಹಾವೇರಿ ಕ್ಷೇತ್ರದ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಬೇಡಿಕೆ ಇಟ್ಟಿದ್ದೆ; ಶೆಟ್ಟರ್
1101 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನೂ ತೀರ್ಮಾನ ತೆಗೆದುಕೊಳ್ಳುತ್ತದೆ ಅದಕ್ಕೆ ನಾನು ಬದ್ಧ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ತುರ್ತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಬೇಡಿಕೆ ಇಟ್ಟಿದ್ದೆ, ಆದರೆ ಬೇರೆ ಬೇರೆ ಕಾರಣದಿಂದ ಅದು ಕೈತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಚರ್ಚೆ ನಡೆದಿದೆ ಎಂದರು.
ಬೆಳಗಾವಿಯಲ್ಲಿ ಶೆಟ್ಟರ್ ಗೋಬ್ಯಾಕ್ ಅಭಿಯಾನದ ವಿಚಾರವಾಗಿ ಮಾತನಾಡಿ, ಬೆಳಗಾವಿಯಲ್ಲಿ ಪರಿಸ್ಥಿತಿ ಸರಿಯಿಲ್ಲ ಅಂತಾ ಏನಿಲ್ಲ, ಈಗಾಗಲೇ ಬೆಳಗಾವಿ ಜಿಲ್ಲೆಯ ನಾಯಕರು, ಹೈಕಮಾಂಡ್ ನಾಯಕರ ಜತೆಗೆ ಚರ್ಚೆ ಮಾಡುತ್ತೇನೆ. ವಿ.ಸೋಮಣ್ಣ ಅವರಿಗೂ ತುಮಕೂರು ಅಲ್ಲಿ ಮೊದಲು ವಿರೋಧ ವ್ಯಕ್ತವಾಗಿತ್ತು. ಟಿಕೆಟ್ ನೀಡಿದ ಬಳಿಕ ಎಲ್ಲ ಸರಿ ಹೋಗಿದೆ. ಅದರಂತೆ ಬೆಳಗಾವಿಯಲ್ಲಿಯೂ ಆಗಲಿದೆ ಎಂದು ತಿಳಿಸಿದರು.
ಇನ್ನು ಸದ್ಯ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ತೀರ್ಮಾನ ಆಗಿಲ್ಲ, ಇದೀಗ ಚರ್ಚೆ ಹಂತದಲ್ಲಿದೆ. ಯಡಿಯೂರಪ್ಪ, ವಿಜಯೇಂದ್ರ ಕೂಡಾ ಈ ಬಗ್ಗೆ ಮಾತನಾಡಿದ್ದಾರೆ. ನಾಲ್ಕು ಗೋಡೆ ಮಧ್ಯೆ ನಡೆದ ಚರ್ಚೆಗಳನ್ನು ಬಹಿರಂಗವಾಗಿ ತಿಳಿಸಲು ಅಗುವುದಿಲ್ಲ ಎಂದರು.
ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಅದನ್ನು ನಾನು ಮಾತನಾಡುವುದಿಲ್ಲ. ನಮ್ಮ ಬೆಂಬಲಿಗರು ಹೇಳತ್ತಾರೆ. ಅಷ್ಟೇ ಅಲ್ಲದೇ ಜನರಿಗೆ ಗೊತ್ತಿದೆ. ಅವರೇ ಪಾಠ ಕಲಿಸತ್ತಾರೆ ಎಂದು ಹೆಸರು ಹೇಳದೇ ಪರೋಕ್ಷವಾಗಿ ಪ್ರಲ್ಹಾದ್ ಜೋಶಿ ವಿರುದ್ಧ ಕಿಡಿಕಾರಿದರು.
ಪ್ರಲ್ಹಾದ್ ಜೋಶಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ನಾನು ಪ್ರಚಾರ ಮಾಡುತ್ತೇನೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದು, ಅದರಂತೆ ಪಕ್ಷ ಗೆಲ್ಲಿಸಲು ಶ್ರಮಿಸಲಾಗುವುದು. ಈ ಬಾರಿಯೂ ಎಲ್ಲೆಡೆ ಮೋದಿ ಅಲೆಯಿಂದ ರಾಜ್ಯದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗುವುದಿಲ್ಲ. ಬದಲಾಗಿ ಬೆಂಗಳೂರಿಗೆ ಹೋಗುವ ಸಾಧ್ಯತೆಯಿದೆ. ಖಂಡಿತವಾಗಿ ಈ ಬಾರಿ ಲೋಕಸಭಾ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ತುರ್ತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಬೇಡಿಕೆ ಇಟ್ಟಿದ್ದೆ, ಆದರೆ ಬೇರೆ ಬೇರೆ ಕಾರಣದಿಂದ ಅದು ಕೈತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಚರ್ಚೆ ನಡೆದಿದೆ ಎಂದರು.
ಬೆಳಗಾವಿಯಲ್ಲಿ ಶೆಟ್ಟರ್ ಗೋಬ್ಯಾಕ್ ಅಭಿಯಾನದ ವಿಚಾರವಾಗಿ ಮಾತನಾಡಿ, ಬೆಳಗಾವಿಯಲ್ಲಿ ಪರಿಸ್ಥಿತಿ ಸರಿಯಿಲ್ಲ ಅಂತಾ ಏನಿಲ್ಲ, ಈಗಾಗಲೇ ಬೆಳಗಾವಿ ಜಿಲ್ಲೆಯ ನಾಯಕರು, ಹೈಕಮಾಂಡ್ ನಾಯಕರ ಜತೆಗೆ ಚರ್ಚೆ ಮಾಡುತ್ತೇನೆ. ವಿ.ಸೋಮಣ್ಣ ಅವರಿಗೂ ತುಮಕೂರು ಅಲ್ಲಿ ಮೊದಲು ವಿರೋಧ ವ್ಯಕ್ತವಾಗಿತ್ತು. ಟಿಕೆಟ್ ನೀಡಿದ ಬಳಿಕ ಎಲ್ಲ ಸರಿ ಹೋಗಿದೆ. ಅದರಂತೆ ಬೆಳಗಾವಿಯಲ್ಲಿಯೂ ಆಗಲಿದೆ ಎಂದು ತಿಳಿಸಿದರು.
ಇನ್ನು ಸದ್ಯ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ತೀರ್ಮಾನ ಆಗಿಲ್ಲ, ಇದೀಗ ಚರ್ಚೆ ಹಂತದಲ್ಲಿದೆ. ಯಡಿಯೂರಪ್ಪ, ವಿಜಯೇಂದ್ರ ಕೂಡಾ ಈ ಬಗ್ಗೆ ಮಾತನಾಡಿದ್ದಾರೆ. ನಾಲ್ಕು ಗೋಡೆ ಮಧ್ಯೆ ನಡೆದ ಚರ್ಚೆಗಳನ್ನು ಬಹಿರಂಗವಾಗಿ ತಿಳಿಸಲು ಅಗುವುದಿಲ್ಲ ಎಂದರು.
ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಅದನ್ನು ನಾನು ಮಾತನಾಡುವುದಿಲ್ಲ. ನಮ್ಮ ಬೆಂಬಲಿಗರು ಹೇಳತ್ತಾರೆ. ಅಷ್ಟೇ ಅಲ್ಲದೇ ಜನರಿಗೆ ಗೊತ್ತಿದೆ. ಅವರೇ ಪಾಠ ಕಲಿಸತ್ತಾರೆ ಎಂದು ಹೆಸರು ಹೇಳದೇ ಪರೋಕ್ಷವಾಗಿ ಪ್ರಲ್ಹಾದ್ ಜೋಶಿ ವಿರುದ್ಧ ಕಿಡಿಕಾರಿದರು.
ಪ್ರಲ್ಹಾದ್ ಜೋಶಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ನಾನು ಪ್ರಚಾರ ಮಾಡುತ್ತೇನೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದು, ಅದರಂತೆ ಪಕ್ಷ ಗೆಲ್ಲಿಸಲು ಶ್ರಮಿಸಲಾಗುವುದು. ಈ ಬಾರಿಯೂ ಎಲ್ಲೆಡೆ ಮೋದಿ ಅಲೆಯಿಂದ ರಾಜ್ಯದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗುವುದಿಲ್ಲ. ಬದಲಾಗಿ ಬೆಂಗಳೂರಿಗೆ ಹೋಗುವ ಸಾಧ್ಯತೆಯಿದೆ. ಖಂಡಿತವಾಗಿ ಈ ಬಾರಿ ಲೋಕಸಭಾ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.