ಹುಬ್ಬಳ್ಳಿ: ಜನರನ್ನು ಕಾಯುವ ನಾಯಕ ಬೇಕು, ಈ ಬಾರಿಯೂ ಜೋಶಿ ಗೆಲುವು ಖಚಿತ; ಮತದಾರರ ಮನದಾಳ
1053 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ನಗರದಲ್ಲಿ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ, ಅದರಲ್ಲೂ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಇನ್ನಷ್ಟುಅಖಾಡ ರಂಗೇರಿದೆ.. ಬಿಜೆಪಿಯಿಂದ ಪ್ರಹ್ಲಾದ್ ಜೋಶಿ ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್ನಿಂದ ವಿನೋದ್ ಅಸೂಟಿ ಕಣಕ್ಕಿಳಿದಿದ್ದಾರೆ. ಪಕ್ಷೇತರವಾಗಿ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡಿದ್ದಾರೆ. ಸತತ ನಾಲ್ಕು ಬಾರಿ ಗೆದ್ದಿರುವ ಜೋಶಿ ಐದನೇ ಬಾರಿ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಹುಬ್ಬಳ್ಳಿ– ಧಾರವಾಡ ನಗರ ವ್ಯಾಪ್ತಿಯ ಪ್ರದೇಶದ ಜೊತೆಗೆ ಗ್ರಾಮೀಣ ಪ್ರದೇಶಗಳಾದ ಕುಂದಗೋಳ, ಕಲಘಟಗಿ ಸೇರಿ ವಿವಿಧೆಡೆ ಸಣ್ಣ ಪ್ರಮಾಣದಲ್ಲಿ ಸಭೆಗಳನ್ನು ಮಾಡಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಆಗಿರುವ ಕಾರಣ ಈ ಸಲ ಜೆಡಿಎಸ್ ಅಭ್ಯರ್ಥಿ ಕಣದಲ್ಲಿಲ್ಲ. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಪರವಾಗಿ ಪ್ರಚಾರ ಮಾಡ್ತಿದ್ದಾರೆ.. ಆದ್ರೆ ಕ್ಷೇತ್ರದ ಮತದಾರರ ಮನದಲ್ಲಿ ಯಾರಿದ್ದಾರೆ.. ಜನರು ಯಾರನ್ನ ಆಯ್ಕೆ ಮಾಡಿದ್ದಾರೆ. ಇದೆಲ್ಲದರ ಮಾಹಿತಿ ಈ ವಿಡಿಯೋದಲ್ಲಿದೆ..