ಗೋಹತ್ಯೆ ನಿಷೇಧ ವಾಪಸ್, ಬಜರಂಗದಳ ನಿಷೇಧದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಎಚ್ಕೆ ಪಾಟೀಲ್
1055 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಗೋಹತ್ಯೆ ನಿಷೇಧ ವಾಪಸ್, ಬಜರಂಗದಳ ನಿಷೇಧಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾವಗಳು ಸರ್ಕಾರದ ಮುಂದೆ ಇಲ್ಲ. ಇಂತಹ ಚರ್ಚೆಗಳು ಅನಾವಶ್ಯಕ ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಹೇಳಿದ್ದಾರೆ.
ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಶಾಂತಿ, ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಜನಸಾಮಾನ್ಯರ ಅಭಿಪ್ರಾಯ ಗಮನದಲ್ಲಿಟ್ಟುಕೊಂಡು ಕಾನೂನು ರೂಪಿಸಲಾಗುವುದು. ಗೋಹತ್ಯೆ ನಿಷೇಧ ವಾಪಸ್ ಪಡೆಯುವ, ಬಜರಂಗದಳ ನಿಷೇಧಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾವಗಳು ಸರ್ಕಾರದ ಮುಂದೆ ಇಲ್ಲ. ಇಂತಹ ಚರ್ಚೆಗಳು ಅನವಶ್ಯಕ ಎಂದರು.
ಎಪಿಎಂಸಿ ಕಾಯ್ದೆಗಳಿಗೆ ತಂದಿದ್ದ ತಿದ್ದುಪಡಿಯನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಎಪಿಎಂಸಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ವಾರದ ಒಳಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉತ್ತರ ಕರ್ನಾಟಕ ಭಾಗದ ಮಾಮ್ಲೆ ದೇಸಾಯಿ, ಕೆಎಚ್ ಪಾಟೀಲ, ಎಂಆರ್ ಪಾಟೀಲ, ಬಿಜಿ ಬಣಕಾರ ಅವರು ಎಪಿಎಂಸಿಗಳ ಆರಂಭಕ್ಕೆ ವಿಶೇಷ ಪ್ರಯತ್ನ ಮಾಡಿದ್ದರು. ರೈತರ ಶೋಷಣೆ ತಡೆಗಟ್ಟುವ ಕೆಲಸ ಮಾಡಿದ್ದರು. ಅವರ ಕನಸಿಗೆ ಧಕ್ಕೆ ತರುವ ಯಾವುದೇ ಕಾನೂನುಗಳನ್ನು ತೆಗೆದು ಹಾಕಲಾಗುವುದು ಎಂದು ಹೇಳಿದರು.
ಪ್ರವಾಸೋದ್ಯಮ ಸಚಿವರು ಕೂಡ ಆಗಿರುವ ಎಚ್ಕೆ ಪಾಟೀಲ್, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು. ಸವದತ್ತಿ ಯಲ್ಲಮ್ಮನ ಗುಡ್ಡ, ಬನಶಂಕರಿ ಮತ್ತು ದುರ್ಗಮ್ಮ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುತ್ತಾರೆ. ಇಂತಹ ಜನಸಾಮಾನ್ಯರ ಶ್ರದ್ಧಾ ಕೇಂದ್ರಗಳು ಪ್ರವಾಸಿ ತಾಣಗಳ ರೀತಿಯಲ್ಲೇ ಇವೆ. ಅವುಗಳ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಶಾಂತಿ, ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಜನಸಾಮಾನ್ಯರ ಅಭಿಪ್ರಾಯ ಗಮನದಲ್ಲಿಟ್ಟುಕೊಂಡು ಕಾನೂನು ರೂಪಿಸಲಾಗುವುದು. ಗೋಹತ್ಯೆ ನಿಷೇಧ ವಾಪಸ್ ಪಡೆಯುವ, ಬಜರಂಗದಳ ನಿಷೇಧಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾವಗಳು ಸರ್ಕಾರದ ಮುಂದೆ ಇಲ್ಲ. ಇಂತಹ ಚರ್ಚೆಗಳು ಅನವಶ್ಯಕ ಎಂದರು.
ಎಪಿಎಂಸಿ ಕಾಯ್ದೆಗಳಿಗೆ ತಂದಿದ್ದ ತಿದ್ದುಪಡಿಯನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಎಪಿಎಂಸಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ವಾರದ ಒಳಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉತ್ತರ ಕರ್ನಾಟಕ ಭಾಗದ ಮಾಮ್ಲೆ ದೇಸಾಯಿ, ಕೆಎಚ್ ಪಾಟೀಲ, ಎಂಆರ್ ಪಾಟೀಲ, ಬಿಜಿ ಬಣಕಾರ ಅವರು ಎಪಿಎಂಸಿಗಳ ಆರಂಭಕ್ಕೆ ವಿಶೇಷ ಪ್ರಯತ್ನ ಮಾಡಿದ್ದರು. ರೈತರ ಶೋಷಣೆ ತಡೆಗಟ್ಟುವ ಕೆಲಸ ಮಾಡಿದ್ದರು. ಅವರ ಕನಸಿಗೆ ಧಕ್ಕೆ ತರುವ ಯಾವುದೇ ಕಾನೂನುಗಳನ್ನು ತೆಗೆದು ಹಾಕಲಾಗುವುದು ಎಂದು ಹೇಳಿದರು.
ಪ್ರವಾಸೋದ್ಯಮ ಸಚಿವರು ಕೂಡ ಆಗಿರುವ ಎಚ್ಕೆ ಪಾಟೀಲ್, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು. ಸವದತ್ತಿ ಯಲ್ಲಮ್ಮನ ಗುಡ್ಡ, ಬನಶಂಕರಿ ಮತ್ತು ದುರ್ಗಮ್ಮ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುತ್ತಾರೆ. ಇಂತಹ ಜನಸಾಮಾನ್ಯರ ಶ್ರದ್ಧಾ ಕೇಂದ್ರಗಳು ಪ್ರವಾಸಿ ತಾಣಗಳ ರೀತಿಯಲ್ಲೇ ಇವೆ. ಅವುಗಳ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.