ಶಿಕ್ಷಕರ ಕೊರತೆ ಸರಿಪಡಿಸಲು ರಾಜ್ಯದಲ್ಲಿ 20 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಮಧು ಬಂಗಾರಪ್ಪ
1163 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹೈಕೋರ್ಟ್ ಪ್ರಕರಣ ಇತ್ಯರ್ಥಗೊಳಿಸಿದ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಾದ್ಯಂತ ಜಿಪಿಟಿ ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ಕೊರತೆ ಇದ್ದು, ಶೀಘ್ರವಾಗಿ ಮತ್ತೆ 20 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಶಿಕ್ಷಕರ ಕೊರತೆ ಸರಿಪಡಿಸಲು ರಾಜ್ಯದಲ್ಲಿ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡು ಮುಂದಿನ 3- 4 ವರ್ಷಗಳಲ್ಲಿ ಎಲ್ಲ ಸರಕಾರಿ ಶಾಲೆಗಳಲ್ಲಿವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರು ಇರುವಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿಎಲ್ಲ ಶಾಲೆಗಳಿಗೆ ದೈಹಿಕ ಶಿಕ್ಷಕರ ನೇಮಕದ ಜೊತೆಗೆ ರಾಜ್ಯಾದ್ಯಂತ 3 ಸಾವಿರ ಕೆಪಿಎ ಶಾಲೆಗಳನ್ನು ಪ್ರಾರಂಭಿಸುವ ಉದ್ದೇಶವಿದೆ. ಅದಕ್ಕಾಗಿ 5- 6 ನೂರು ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು' ಎಂದರು.
'ಪ್ರಸ್ತುತ 13 ಸಾವಿರ ಶಿಕ್ಷಕರ ನೇಮಕ ಸಂಬಂಧಿಸಿದಂತೆ ಇನ್ನೂ ಕೆಲ ಜಿಲ್ಲೆಗಳಲ್ಲಿ ಕೋರ್ಟ್ನಲ್ಲಿ ಕೇಸ್ ಇರುವುದರಿಂದ ಅಂಥ ಜಿಲ್ಲೆಯಲ್ಲಿ ನೇಮಕ ಪ್ರಕ್ರಿಯೆ ನಡೆಸಿಲ್ಲ. ಉಳಿದಂತೆ ಎಲ್ಲ ಜಿಲ್ಲೆಗಳಲ್ಲಿ ಶನಿವಾರವೇ ಅಭ್ಯರ್ಥಿಗಳಿಗೆ ನೇಮಕ ಪತ್ರ ನೀಡಲಾಗಿದೆ' ಎಂದರು.
‘‘ರಾಜ್ಯದಲ್ಲಿ1,600 ಶಾಲೆಗಳು ಕಟ್ಟಡ ಹಾಗೂ ಮೂಲಸೌಲಭ್ಯ ಕಲ್ಪಿಸುವ ವಿಷಯದಲ್ಲಿಸರಕಾರದ ನಿಯಮಾವಳಿ ಪಾಲಿಸಿಲ್ಲಎಂಬ ದೂರುಗಳು ಬಂದಿವೆ. ಈಗಲೇ ಅವುಗಳ ವಿರುದ್ಧ ಕ್ರಮ ಜರುಗಿಸಿದರೆ, ಪ್ರಸ್ತುತ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಅವರಿಗೆ ಇನ್ನೂ ಒಂದು ಬಾರಿ ಕಾಲಾವಕಾಶ ನೀಡಿ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗುವುದು. ಇಲ್ಲವಾದಲ್ಲಿಮುಂದಿನ ವರ್ಷದಿಂದ ಅಂಥ ಶಾಲೆಗಳ ವಿರುದ್ಧ ಕ್ರಮ ಜರುಗಿಸಿ, ಅನುಮತಿ ನೀಡುವುದಿಲ್ಲ’’ ಎಂದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಶಿಕ್ಷಕರ ಕೊರತೆ ಸರಿಪಡಿಸಲು ರಾಜ್ಯದಲ್ಲಿ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡು ಮುಂದಿನ 3- 4 ವರ್ಷಗಳಲ್ಲಿ ಎಲ್ಲ ಸರಕಾರಿ ಶಾಲೆಗಳಲ್ಲಿವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರು ಇರುವಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿಎಲ್ಲ ಶಾಲೆಗಳಿಗೆ ದೈಹಿಕ ಶಿಕ್ಷಕರ ನೇಮಕದ ಜೊತೆಗೆ ರಾಜ್ಯಾದ್ಯಂತ 3 ಸಾವಿರ ಕೆಪಿಎ ಶಾಲೆಗಳನ್ನು ಪ್ರಾರಂಭಿಸುವ ಉದ್ದೇಶವಿದೆ. ಅದಕ್ಕಾಗಿ 5- 6 ನೂರು ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು' ಎಂದರು.
'ಪ್ರಸ್ತುತ 13 ಸಾವಿರ ಶಿಕ್ಷಕರ ನೇಮಕ ಸಂಬಂಧಿಸಿದಂತೆ ಇನ್ನೂ ಕೆಲ ಜಿಲ್ಲೆಗಳಲ್ಲಿ ಕೋರ್ಟ್ನಲ್ಲಿ ಕೇಸ್ ಇರುವುದರಿಂದ ಅಂಥ ಜಿಲ್ಲೆಯಲ್ಲಿ ನೇಮಕ ಪ್ರಕ್ರಿಯೆ ನಡೆಸಿಲ್ಲ. ಉಳಿದಂತೆ ಎಲ್ಲ ಜಿಲ್ಲೆಗಳಲ್ಲಿ ಶನಿವಾರವೇ ಅಭ್ಯರ್ಥಿಗಳಿಗೆ ನೇಮಕ ಪತ್ರ ನೀಡಲಾಗಿದೆ' ಎಂದರು.
‘‘ರಾಜ್ಯದಲ್ಲಿ1,600 ಶಾಲೆಗಳು ಕಟ್ಟಡ ಹಾಗೂ ಮೂಲಸೌಲಭ್ಯ ಕಲ್ಪಿಸುವ ವಿಷಯದಲ್ಲಿಸರಕಾರದ ನಿಯಮಾವಳಿ ಪಾಲಿಸಿಲ್ಲಎಂಬ ದೂರುಗಳು ಬಂದಿವೆ. ಈಗಲೇ ಅವುಗಳ ವಿರುದ್ಧ ಕ್ರಮ ಜರುಗಿಸಿದರೆ, ಪ್ರಸ್ತುತ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಅವರಿಗೆ ಇನ್ನೂ ಒಂದು ಬಾರಿ ಕಾಲಾವಕಾಶ ನೀಡಿ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗುವುದು. ಇಲ್ಲವಾದಲ್ಲಿಮುಂದಿನ ವರ್ಷದಿಂದ ಅಂಥ ಶಾಲೆಗಳ ವಿರುದ್ಧ ಕ್ರಮ ಜರುಗಿಸಿ, ಅನುಮತಿ ನೀಡುವುದಿಲ್ಲ’’ ಎಂದರು.