ಹನುಮ ಧ್ವಜಕ್ಕೆ ಎಲ್ಲಿ ಅವಮಾನ ಆಗಿದೆಯೋ ಅಲ್ಲಿಯೇ ಸನ್ಮಾನವಾಗಬೇಕು ; ರವಿಕುಮಾರ್
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿ
ಹುಬ್ಬಳ್ಳಿ: ಮಂಡ್ಯ ಜಿಲ್ಲೆಯಲ್ಲಿ ಹನುಮ ಧ್ವಜ ವಿಷಯವಾಗಿ ಕರೆ ನೀಡಿದ ಬಂದ್ಗೆ ಬಿಜೆಪಿ ಬೆಂಬಲಿಸಲಿದೆ. ಹನುಮ ಧ್ವಜಕ್ಕೆ ಎಲ್ಲಿ ಅವಮಾನ ಆಗಿದೆಯೋ ಅಲ್ಲಿಯೇ ಸನ್ಮಾನವಾಗಬೇಕು ಎಂದು ಎಂಎಲ್ಸಿ ಎನ್.ರವಿಕುಮಾರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಂಡ್ಯದ ಕೆರಗೋಡ ಸ್ಥಳೀಯ ಸರ್ಕಾರ ಹನುಮ ಧ್ವಜ ಹಾರಿಸಲು ಅನುಮತಿ ನೀಡಿದರೆ, ರಾಜ್ಯ ಸರ್ಕಾರ ಧ್ವಜ ಕಿತ್ತು ಹಾಕುತ್ತದೆ. ಎಲ್ಲಿಯೇ ಆಗಲಿ ಕೋಮು ಸಂಘರ್ಷ ಸೃಷ್ಟಿಸುವ ಯಾವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ ಎಂದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ..? ಗ್ರಾಮಪಂಚಾಯತಿ ಇದನ್ನ ತೀರ್ಮಾನ ಮಾಡಿತ್ತು ಅಲ್ವಾ..? ಹಾಗಾದ್ರೆ ಗ್ರಾಂ. ಪಂಚಾಯತಿಗೆ ಎಲ್ಲಿ ಗೌರವ ಕೊಟ್ರಿ ನೀವು ಎಂದು ಕಿಡಿಕಾರಿದರು.
ಕೇಂದ್ರದಿಂದ ರಾಜ್ಯಕ್ಕೆ ಯುಪಿಎ-ಎನ್ಡಿಎ ಸರ್ಕಾರ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎಂಬುದರ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ. ಎನ್ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚು ಅನುದಾನ ಬಂದಿದೆ ಎಂದಾದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಸಿದ್ದರಾಮಯ್ಯಗೆ ಸವಾಲೆಸೆದರು. ಟೋಪಿ ಹಾಕಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರಿಗೆ ತಿಲಕ ಹಚ್ಚಿಕೊಳ್ಳಲು ಯಾಕೆ ಅಸಡ್ಡೆ ತೋರುತ್ತಿದ್ದಾರೆ, ಒಂದು ಧರ್ಮಕ್ಕೆ ಅವಮಾನ, ಇನ್ನೊಂದು ಧರ್ಮಕ್ಕೆ ಸನ್ಮಾನ ಮಾಡುತ್ತಾರೆ. ಇದನ್ನೆಲ್ಲ ಜನ ಗಮನಿಸುತ್ತಿದ್ದಾರೆ. ಸಿದ್ದರಾಮಯ್ಯನವರೇ ಕುಂಕಮ ಹಚ್ಚಿದ್ರೆ ಏನು ತೊಂದ್ರೆ ನಿಮಗೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅಂತ ಹೆಸರು ಇಟ್ಟುಕೊಂಡು ಅದರ ಲಕ್ಷಣ ತೋರಿಸಿ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಂಡ್ಯದ ಕೆರಗೋಡ ಸ್ಥಳೀಯ ಸರ್ಕಾರ ಹನುಮ ಧ್ವಜ ಹಾರಿಸಲು ಅನುಮತಿ ನೀಡಿದರೆ, ರಾಜ್ಯ ಸರ್ಕಾರ ಧ್ವಜ ಕಿತ್ತು ಹಾಕುತ್ತದೆ. ಎಲ್ಲಿಯೇ ಆಗಲಿ ಕೋಮು ಸಂಘರ್ಷ ಸೃಷ್ಟಿಸುವ ಯಾವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ ಎಂದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ..? ಗ್ರಾಮಪಂಚಾಯತಿ ಇದನ್ನ ತೀರ್ಮಾನ ಮಾಡಿತ್ತು ಅಲ್ವಾ..? ಹಾಗಾದ್ರೆ ಗ್ರಾಂ. ಪಂಚಾಯತಿಗೆ ಎಲ್ಲಿ ಗೌರವ ಕೊಟ್ರಿ ನೀವು ಎಂದು ಕಿಡಿಕಾರಿದರು.
ಕೇಂದ್ರದಿಂದ ರಾಜ್ಯಕ್ಕೆ ಯುಪಿಎ-ಎನ್ಡಿಎ ಸರ್ಕಾರ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎಂಬುದರ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ. ಎನ್ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚು ಅನುದಾನ ಬಂದಿದೆ ಎಂದಾದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಸಿದ್ದರಾಮಯ್ಯಗೆ ಸವಾಲೆಸೆದರು. ಟೋಪಿ ಹಾಕಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರಿಗೆ ತಿಲಕ ಹಚ್ಚಿಕೊಳ್ಳಲು ಯಾಕೆ ಅಸಡ್ಡೆ ತೋರುತ್ತಿದ್ದಾರೆ, ಒಂದು ಧರ್ಮಕ್ಕೆ ಅವಮಾನ, ಇನ್ನೊಂದು ಧರ್ಮಕ್ಕೆ ಸನ್ಮಾನ ಮಾಡುತ್ತಾರೆ. ಇದನ್ನೆಲ್ಲ ಜನ ಗಮನಿಸುತ್ತಿದ್ದಾರೆ. ಸಿದ್ದರಾಮಯ್ಯನವರೇ ಕುಂಕಮ ಹಚ್ಚಿದ್ರೆ ಏನು ತೊಂದ್ರೆ ನಿಮಗೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅಂತ ಹೆಸರು ಇಟ್ಟುಕೊಂಡು ಅದರ ಲಕ್ಷಣ ತೋರಿಸಿ ಎಂದು ಹೇಳಿದರು.