ಫಯಾಜ್ಗೆ ಗಲ್ಲು ಶಿಕ್ಷೆಯಾಗಬೇಕೆಂದು ಅಮಿತ್ ಶಾಗೆ ಮನವಿ ಸಲ್ಲಿಸಿದ ನೇಹಾ ಪೋಷಕರು
1178 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಹ್ಲಾದ್ ಜೋಶಿ ಪರ ಮತಯಾಚನೆ ಮಾಡಿದ್ರು.. ಇದೇ ವೇಳೆ ಅಮಿತ್ ಶಾ ಅವರನ್ನು ಮೃತ ನೇಹಾ ತಂದೆ ನಿರಂಜನ್ ಹಿರೇಮಠ್ ಅವರು ಭೇಟಿಯಾಗಿ ಪ್ರಕರಣದಲ್ಲಿ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ..
ಅಮಿತ್ ಶಾ ಅವರನ್ನು ನೇಹಾ ತಂದೆ-ತಾಯಿ ನೇರವಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೇದಿಕೆ ಹಿಂಭಾಗದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿರುವ ನೇಹಾ ಕುಟುಂಬ ಮಗಳ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ನೀಡಿದರು..
ನೇಹಾ ತಂದೆ ನಿರಂಜನ್ ಹಿರೇಮಠ ಅವರು ತಾವೊಬ್ಬ ಕಾಂಗ್ರೆಸ್ ಕಾರ್ಪೊರೇಟರ್ ಆದಾಗ್ಯೂ ಮಗಳ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ನ್ಯಾಯ ದಕ್ಕಿಸಿಕೊಳ್ಳಲು ಆಗುತ್ತಿಲ್ಲವೆಂದು ಅಮಿತ್ ಶಾ ಎದುರು ದುಃಖ ತೋಡಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರು. ನಿಮ್ಮ ಜೊತೆಗೆ ನಾವಿದ್ದೇವೆ ಹೆದರಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು. ಅಮಿತ್ ಶಾಗೆ ಪ್ರಲ್ಹಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಮತ್ತಿತರ ಪ್ರಮುಖರು ಸಾಥ್ ಕೊಟ್ಟರು..
ಇನ್ನು ಸಮಾವೇಶಲ್ಲಿ ಅಮಿತ್ ಶಾ ಪ್ರಹಾದ್ ಜೋಶಿಯನ್ನು ಹಾಡಿಹೊಗಳಿದರು.. ಪ್ರಹ್ಲಾದ್ ಜೋಶಿಯವರನ್ನು ಸಂಸತ್ಗೆ ಆಯ್ಕೆ ಮಾಡಿ ಕಳಿಸಿ, ಅವರನ್ನು ದೊಡ್ಡ ನಾಯಕರನ್ನಾಗಿ ಮಾಡುತ್ತೇವೆ ಎಂದು ಜನರಿಗೆ ಭರವಸೆಯನ್ನು ಕೊಟ್ಟರು..
ಅಮಿತ್ ಶಾ ಅವರನ್ನು ನೇಹಾ ತಂದೆ-ತಾಯಿ ನೇರವಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೇದಿಕೆ ಹಿಂಭಾಗದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿರುವ ನೇಹಾ ಕುಟುಂಬ ಮಗಳ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ನೀಡಿದರು..
ನೇಹಾ ತಂದೆ ನಿರಂಜನ್ ಹಿರೇಮಠ ಅವರು ತಾವೊಬ್ಬ ಕಾಂಗ್ರೆಸ್ ಕಾರ್ಪೊರೇಟರ್ ಆದಾಗ್ಯೂ ಮಗಳ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ನ್ಯಾಯ ದಕ್ಕಿಸಿಕೊಳ್ಳಲು ಆಗುತ್ತಿಲ್ಲವೆಂದು ಅಮಿತ್ ಶಾ ಎದುರು ದುಃಖ ತೋಡಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರು. ನಿಮ್ಮ ಜೊತೆಗೆ ನಾವಿದ್ದೇವೆ ಹೆದರಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು. ಅಮಿತ್ ಶಾಗೆ ಪ್ರಲ್ಹಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಮತ್ತಿತರ ಪ್ರಮುಖರು ಸಾಥ್ ಕೊಟ್ಟರು..
ಇನ್ನು ಸಮಾವೇಶಲ್ಲಿ ಅಮಿತ್ ಶಾ ಪ್ರಹಾದ್ ಜೋಶಿಯನ್ನು ಹಾಡಿಹೊಗಳಿದರು.. ಪ್ರಹ್ಲಾದ್ ಜೋಶಿಯವರನ್ನು ಸಂಸತ್ಗೆ ಆಯ್ಕೆ ಮಾಡಿ ಕಳಿಸಿ, ಅವರನ್ನು ದೊಡ್ಡ ನಾಯಕರನ್ನಾಗಿ ಮಾಡುತ್ತೇವೆ ಎಂದು ಜನರಿಗೆ ಭರವಸೆಯನ್ನು ಕೊಟ್ಟರು..