ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ, ತನಿಖೆ ಬಳಿಕ ಶುದ್ಧರಾಗಿ ಹೊರ ಬರುತ್ತಾರೆ: ಪ್ರಲ್ಹಾದ್ ಜೋಶಿ
1123 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಷಡ್ಯಂತ್ರ ರಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಯಡಿಯೂರಪ್ಪ ಅವರ ವಯಸ್ಸು ಮತ್ತು ಅವರ ವರ್ಚಸ್ಸಿಗೆ ಗೌರವ ಕೊಡಬೇಕು. ಅವರ ಹೆಸರಿಗೆ ಮಸಿ ಬಳೆಯುವ ಉದ್ದೇಶದಿಂದ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಯಡಿಯೂರಪ್ಪ ಅವರು ಶುದ್ಧರಾಗಿ ಹೊರ ಬರುತ್ತಾರೆ ಎಂದರು.
ಪ್ರಧಾನಿ ಮೋದಿ ಅವರಿಗೆ ಬೆಂಬಲ ನೀಡಲು ಯುವಪಡೆ ಸನ್ನದ್ಧವಾಗಿದೆ. ಅದಕ್ಕೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ 'ದೇಶಕ್ಕಾಗಿ ನನ್ನ ಮತ' ಅಭಿಯಾನ ಚುರುಕುಗೊಳಿಸಲಾಗುತ್ತಿದೆ. ಶೇ 90ರಷ್ಟು ಹೊಸ ಮತದಾರರು ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ. ಯುವಕರು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯಿಂದ ಪ್ರಭಾವಿತರಾಗಿದ್ದಾರೆ. ಹೀಗಾಗಿ ಬಿಜೆಪಿ ಕಳೆದ ಬಾರಿಗಿಂದ ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದರು.
ಜಗದೀಶ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕರೆ ನಮಗೆ ಅತ್ಯಂತ ಖುಷಿ ಎಂದರು.
ಪ್ರಧಾನಿ ಮೋದಿ ಅವರಿಗೆ ಬೆಂಬಲ ನೀಡಲು ಯುವಪಡೆ ಸನ್ನದ್ಧವಾಗಿದೆ. ಅದಕ್ಕೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ 'ದೇಶಕ್ಕಾಗಿ ನನ್ನ ಮತ' ಅಭಿಯಾನ ಚುರುಕುಗೊಳಿಸಲಾಗುತ್ತಿದೆ. ಶೇ 90ರಷ್ಟು ಹೊಸ ಮತದಾರರು ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ. ಯುವಕರು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯಿಂದ ಪ್ರಭಾವಿತರಾಗಿದ್ದಾರೆ. ಹೀಗಾಗಿ ಬಿಜೆಪಿ ಕಳೆದ ಬಾರಿಗಿಂದ ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದರು.
ಜಗದೀಶ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕರೆ ನಮಗೆ ಅತ್ಯಂತ ಖುಷಿ ಎಂದರು.